ಅರವಿಂದ್‌ ಕೇಜ್ರಿವಾಲ್‌ಗೆ ರಿಲೀಫ್‌ ನೀಡದ ದೆಹಲಿ ಹೈಕೋರ್ಟ್‌

Published : Mar 27, 2024, 07:00 PM IST
ಅರವಿಂದ್‌ ಕೇಜ್ರಿವಾಲ್‌ಗೆ ರಿಲೀಫ್‌ ನೀಡದ ದೆಹಲಿ ಹೈಕೋರ್ಟ್‌

ಸಾರಾಂಶ

ಜಾರಿ ನಿರ್ದೇಶನಾಲಯದ ಅಧಿಕಾರಿಗಳನ್ನು ತಮ್ಮನ್ನು ಬಂಧಿಸಿದ ವಿರುದ್ಧ ಸಲ್ಲಿಸಿದ್ದ ಅರ್ಜಿಯಲ್ಲಿ ದೆಹಲಿ ಹೈಕೋರ್ಟ್‌ ಅರವಿಂದ್‌ ಕೇಜ್ರಿವಾಲ್‌ಗೆ ರಿಲೀಫ್‌ ನೀಡಲು ನಿರಾಕರಿಸಿದ್ದು, ಏಪ್ರಿಲ್‌ 2ರ ಒಳಗಾಗಿ ಉತ್ತರ ನೀಡಲು ಇಡಿಗೆ ಅವಕಾಶ ನೀಡಿದೆ.  

ನವದೆಹಲಿ (ಮಾ.27): ಅಕ್ರಮ ಮದ್ಯ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಮ್ಮನ್ನು ಬಂಧಿಸಿದ್ದರ ವಿರುದ್ಧ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ಕೇಸ್‌ನಲ್ಲಿ ಅರವಿಂದ್‌ ಕೇಜ್ರಿವಾಲ್‌ಗೆ ಹಿನ್ನಡೆಯಾಗಿದೆ. ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಕಳೆದವಾರ ಇಡಿ ಅಧಿಕಾರಿಗಳು ಬಂಧಿಸಿದ್ದರು. ಮದ್ಯದ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯವು ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್ 3 ರಂದು ನಡೆಯಲಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್