
ನವದೆಹಲಿ (ಮೇ.14): ‘ಕೊರೋನಾ ಸೋಂಕಿನಿಂದ ರಕ್ಷಿಸಲು ಜನರಿಗೆ ನೀಡಲು ನಿಮ್ಮಲ್ಲಿ ಲಸಿಕೆಗಳೇ ಇಲ್ಲ. ಆದರೆ ಜನರು ಯಾರಿಗೇ ಕರೆ ಮಾಡಿದರೂ ಲಸಿಕೆ ಪಡೆಯಿರಿ ಎಂಬ ಕಿರಿಕಿರಿಯಾಗುವ ರಿಂಗ್ಟ್ಯೂನ್ ಅನ್ನು ಮಾತ್ರ ಭಿತ್ತರಿಸುತ್ತೀರಿ’ ಹೀಗೆಂದು ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿತು.
ಪ್ರಕರಣದವೊಂದರ ವಿಚಾರಣೆ ವೇಳೆ ‘ಯಾರಿಗೆ ಕರೆ ಮಾಡಿದರೂ ಕೊರೋನಾ ಲಸಿಕೆಯಿಂದ ಪಾರಾಗಲು ಲಸಿಕೆ ಅತ್ಯವಶ್ಯಕ ಎಂಬ ಸಂದೇಶ ಮಾತ್ರ ಪ್ರತೀ ಬಾರಿಯೂ ಬರುತ್ತದೆ.
2ನೇ ಡೋಸ್ಗೆ ಹೆಚ್ಚಿನ ಆದ್ಯತೆ ನೀಡಿ: ರಾಜ್ಯಗಳಿಗೆ ಸೂಚನೆ ...
ಆದರೆ ನಿಮ್ಮಲ್ಲಿ ಲಸಿಕೆಗಳೇ ಇಲ್ಲ. ಲಸಿಕೆಗಳೇ ಇಲ್ಲದಿದ್ದಾಗ ಲಸಿಕೆ ಪಡೆಯಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿತು. ಈಗಾಗಲೇ 45 ವರ್ಷ ಮೇಲ್ಪಟ್ಟವರಿಗೆ ದೇಶದಲ್ಲಿ ಲಸಿಕಾ ಪ್ರಕ್ರಿಯೆ ನಡೆಯುತ್ತಿದೆ. ಆದರೆ 18 ವರ್ಷ ಮೇಲ್ಪಟ್ಟವರ ಲಸಿಕಾ ಪ್ರಕ್ರಿಯೆ ಮುಂದೂಡಲಾಗಿದೆ. ಕಾರಣ ದೇಶದ ಎಲ್ಲೆಡೆ ಲಸಿಕೆ ಕೊರತೆ.
ದೇಶದಲ್ಲಿ ತೀವ್ರತೆರನಾದ ಲಸಿಕಾ ಕೊರತೆ ಹಿನ್ನೆಲೆಯಲ್ಲಿ ಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ