ಟಿಎಂಸಿ ನಾಯಕಿ ಮಹುವಾಗೆ ಮತ್ತೊಂದು ಶಾಕ್, ದೆಹಲಿ ಹೈಕೋರ್ಟ್‌ನಿಂದ ಸಮನ್ಸ್!

Published : Mar 20, 2024, 05:51 PM IST
ಟಿಎಂಸಿ ನಾಯಕಿ ಮಹುವಾಗೆ ಮತ್ತೊಂದು ಶಾಕ್, ದೆಹಲಿ ಹೈಕೋರ್ಟ್‌ನಿಂದ ಸಮನ್ಸ್!

ಸಾರಾಂಶ

ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾ ಸಂಕಷ್ಟ ಹೆಚ್ಚಾಗಿದೆ. ಲಂಚ ಪ್ರಕರಣದಲ್ಲಿ ಮಹುವಾ ವಿರುದ್ದ ಸಿಬಿಐ ತನಿಖೆಗೆ ಲೋಕಪಾಲ ಸೂಚಿಸಿರುವ ಬೆನ್ನಲ್ಲೇ ಇದೀಗ ದೆಹಲಿ ಹೈಕೋರ್ಟ್ ಸಮನ್ಸ್ ನೀಡಿದೆ.   

ನವದೆಹಲಿ(ಮಾ.20) ಪ್ರಶ್ನೆಗಾಗಿ ಲಂಚ ಪ್ರಕರಣದಲ್ಲಿ ಸಿಲುಕಿರುವ ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾಗೆ ದಿನದಿಂದ ದಿನಕ್ಕೆ ಸಂಕಷ್ಟಗಳು ಹೆಚ್ಚಾಗುತ್ತಿದೆ. ಪ್ರಶ್ನೆಗಾಗಿ ಲಂಚ ಪ್ರಕರಣದಲ್ಲಿ ಮಹುವಾ ಮೊಯಿತ್ರಾ ವಿರುದ್ದ ಸಿಬಿಐ ತನಿಖೆಗೆ ಲೋಕಪಾಲ ಸೂಚಿಸಿದೆ. ಇದರ ಬೆನ್ನಲ್ಲೇ ದೆಹಲಿ ಹೈಕೋರ್ಟ್ ಮಹುವಾಗೆ ಸಮನ್ಸ್ ನೀಡಿದೆ. ಮುಹುವಾ ಮೊಯಿತ್ರಾ ಮಾಜಿ ಪಾರ್ಟ್ನರ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರರಕರಣ ಸಂಬಂಧ ಮಹುವಾಗೆ ದೆಹಲಿ ಹೈಕೋರ್ಟ್ ಸಮನ್ಸ್ ನೀಡಿದೆ. ಎಪ್ರಿಲ್ 1ರೊಳಗೆ ಉತ್ತರ ನೀಡುವಂತೆ ಕೋರ್ಟ್ ಸೂಚಿಸಿದೆ.

ಮಹುವಾ ಮೊಯಿತ್ರಾ ಸಾರ್ವಜನಿಕವಾಗಿ ಮಾಜಿ ಪಾರ್ಟ್ನರ್ ಹಾಗೂ ವಕೀಲ ಜಯ್ ಅನಂತ್ ದೆಹಾದ್ರಯಿ ವಿರುದ್ಧ ಹಲವು ಗಂಭೀರ ಆರೋಪ ಮಾಡಿದ್ದರು. ಆತ ನಿರುದ್ಯೋಗಿ, ನಂಬಿಕೆ ಅರ್ಹನಲ್ಲ ಸೇರಿದಂತೆ ಹಲವು ಪ್ರತಿಕ್ರಿಯೆಗಳನ್ನು ನೀಡಿದ್ದರು. ಮಹುವಾ ಮೊಯಿತ್ರಿ ಮಾಧ್ಯಮಕ್ಕೆ ನೀಡಿದ ಕೆಲ ಹೇಳಿಕೆಗಳು ತನ್ನ ಘನತೆಗೆ ಧಕ್ಕೆ ತಂದಿದೆ. ಹೀಗಾಗಿ ಮಹುವಾ ಮೊಯಿತ್ರಾ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಜಯ್ ಅನಂತ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಆಕೆ ಹೇಳಿಕೆಯಿಂದ ತನಗೆ ಅಪಾರ ನಷ್ಟವಾಗಿದೆ ಎಂದು ಪ್ರಕರಣ ದಾಖಲಿಸಿದ್ದರು.

ಲಾಗಿನ್‌ ಐಡಿ ಕೊಟ್ಟಿದ್ದಕ್ಕೆ ಮಹುವಾ ಉಚ್ಛಾಟನೆಯಾದ್ರೆ, ದೇಶದ ಆಸ್ತಿ ಸ್ನೇಹಿತನಿಗೆ ಕೊಟ್ಟವನನ್ನು ಏನು ಮಾಡಬೇಕು?

ಈ ಪ್ರಕರಣ ಕುರಿತು ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಇದೀಗ ಮಹುವಾ ಮೊಯಿತ್ರಾಗೆ ಸಮನ್ಸ್ ನೀಡಿದೆ. ಮುಂದಿನ ವಿಚಾರಣೆಯನ್ನು ಏಪ್ರಿಲ್ 8ಕ್ಕೆ ಮುಂದೂಡಿದೆ.  ಹೈಕೋರ್ಟ್ ಸಮನ್ಸ್‌ಗೂ ಮೊದಲು ಮಹುವಾ ಮೊಯಿತ್ರಾಗೆ ವಿರುದ್ಧ ಸಿಬಿಐ ತನಿಖೆಗೆ ಸೂಚನೆ ನೀಡಲಾಗಿದೆ. 

ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಸ್ವೀಕರಿಸಿದ ಆರೋಪ ಹೊತ್ತಿರುವ ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ತನಿಖೆ ನಡೆಸುವಂತೆ ಸಿಬಿಐ ಲೋಕಪಾಲರು ಸೂಚಿಸಿದ್ದಾರೆ. ಅಲ್ಲದೆ ತನಿಖಾ ವರದಿಯನ್ನು 6 ತಿಂಗಳ ಒಳಗೆ ಸಲ್ಲಿಸುವಂತೆ ಸೂಚಿಸಿದ್ದಾರೆ. ದುಬೈ ಮೂಲದ ಉದ್ಯಮಿ ಪರವಾಗಿ ಪ್ರಶ್ನೆ ಕೇಳಲು ಮಹುವಾ ಲಂಚ ಕೇಳಿದ್ದಾರೆ ಎಂದು ಆರೋಪಿಸಿ ಬಿಜೆಪಿ ಲೋಕಸಭಾ ಸದಸ್ಯ ನಿಶಿಕಾಂತ್‌ ದುಬೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬಳಿಕ ಲೋಕಪಾಲರು ಈ ಆದೇಶ ಹೊರಡಿಸಿದ್ದಾರೆ. ಇದೇ ಪ್ರಕರಣ ಸಂಬಂಧ ಮಹುವಾ ಅವರ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ.

ಲೋಕಸಭೆಯಿಂದ ಅಮಾತುಗೊಂಡ ಮಹುವಾಗೆ ಸುಪ್ರೀಂ ಕೋರ್ಟ್‌ನಲ್ಲೂ ಹಿನ್ನಡೆ!
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!