ದೆಹಲಿ ಅಬಕಾರಿ ಹಗರಣ, ಸಿಎಂ ಕೇಜ್ರಿವಾಲ್ 10 ದಿನ ಕಸ್ಟಡಿಗೆ ಒಪ್ಪಿಸುವಂತೆ ಇಡಿ ಕೋರ್ಟ್‌ಗೆ ಮನವಿ!

Published : Mar 22, 2024, 06:43 PM ISTUpdated : Mar 22, 2024, 07:12 PM IST
ದೆಹಲಿ ಅಬಕಾರಿ ಹಗರಣ, ಸಿಎಂ ಕೇಜ್ರಿವಾಲ್ 10 ದಿನ ಕಸ್ಟಡಿಗೆ ಒಪ್ಪಿಸುವಂತೆ ಇಡಿ ಕೋರ್ಟ್‌ಗೆ ಮನವಿ!

ಸಾರಾಂಶ

ದೆಹಲಿ ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು 10 ದಿನಗಳ ಇಜಿ ವಶಕ್ಕೆ  ಒಪ್ಪಿಸಲಾಗಿದೆ. ಸುದೀರ್ಘ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.  

ನವದೆಹಲಿ(ಮಾ.22) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಾರ್ಟಿಗೆ ದೆಹಲಿ ಅಬಕಾರಿ ಅಕ್ರಮ ನೀತಿ ಮುಳುವಾಗಿದೆ. ಒಬ್ಬೊಬ್ಬ ಸಚಿವರು, ನಾಯಕರು ಜೈಲು ಸೇರುತ್ತಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸಂಸದ ಸಂಜಯ್ ಸಿಂಗ್ ಬಳಿಕ ಅಬಕಾರಿ ನೀತಿಯಲ್ಲಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಜೈಲು ಸೇರಿದ್ದಾರೆ. ನಿನ್ನೆ ಇಡಿ ಅಧಿಕಾರಿಗಳು ಕೇಜ್ರಿವಾಲ್ ಮನೆ ಮೇಲೆ ದಾಳಿ ನಡೆಸಿದ್ದರು. ಬಳಿಕ ಕೇಜ್ರಿವಾಲ್ ಬಂಧಿಸಿದ ಇಡಿ ಅಧಿಕಾರಿಗಳು ಇಂದು ಕೋರ್ಟ್‌ಗೆ ಹಾಜರುಪಡಿಸಿದ್ದಾರೆ. ಇತ್ತ ಕೇಜ್ರಿವಾಲ್ ರಿಮ್ಯಾಂಡ್ ಅರ್ಜಿ ಇದೇ ವೇಳೆ ವಿಚಾರಣೆ ನಡೆಸಲಾಗಿದೆ. ಸುದೀರ್ಘ ವಾದ ಪ್ರತಿವಾದ ಆಲಿಸಿದ ದೆಹಲಿಯ ರೋಸ್ ಅವೆನ್ಯೂ ನ್ಯಾಯಲಯ ಅರವಿಂದ್ ಕೇಜ್ರಿವಾಲ್ ಅವರನ್ನು 10 ದಿನಗಳ ಕಾಲ ಇಡಿ ವಶಕ್ಕೆ ಒಪ್ಪಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Keralam Election Results: ಯಾರ ಪಾಲಿಗೆ ಕೇರಳಂ? ಎಡಕ್ಕೋ? ಬಲಕ್ಕೋ? ಅಥವಾ ಅತಂತ್ರವೋ?
5 State Assembly Election results 2026 Live: Keralam Election Results - ಯಾರ ಪಾಲಿಗೆ ಕೇರಳಂ? ಎಡಕ್ಕೋ? ಬಲಕ್ಕೋ? ಅಥವಾ ಅತಂತ್ರವೋ?