
ನವದೆಹಲಿ(ಏ.20): ದೆಹಲಿಯಲ್ಲಿ 6 ದಿನಗಳ ಲಾಕ್ಡೌನ್ ಘೋಷಣೆ ಬೆನ್ನಲ್ಲೇ ಸಾವಿರಾರು ಕಾರ್ಮಿಕರು ಮರುವಲಸೆ ಆರಂಭಿಸಿದ್ದಾರೆ. ಸೋಂಕು ಇನ್ನಷ್ಟುಹೆಚ್ಚಳವಾದರೆ ಸುದೀರ್ಘ ಲಾಕ್ಡೌನ್ ಜಾರಿಯಾಗಿ ಮತ್ತೆ ಕಳೆದ ವರ್ಷದ ಸಂಕಷ್ಟಎದುರಿಸಬೇಕಾಗಿ ಬರಬಹುದು ಎಂಬ ಭೀತಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ನೆರೆಯ ತವರು ರಾಜ್ಯಗಳಿಗೆ ತೆರಳಲು ಬಸ್ ಮತ್ತು ರೈಲು ನಿಲ್ದಾಣಗಳಲ್ಲಿ ನೆರೆದಿದ್ದಾರೆ. ಹೀಗಾಗಿ ನಿಲ್ದಾಣಗಳಲ್ಲಿ ದಿಢೀರ್ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ.
"
ಇನ್ನೊಂದೆಡೆ ಕಳೆದ ವರ್ಷದಂತೆ ಈ ವರ್ಷವೂ ಸಾವಿರಾರು ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ರಾಷ್ಟ್ರೀಯ ಹೆದ್ದಾರಿಗಳ ಮೂಲಕ ನಡೆದುಕೊಂಡೇ ಕುಟುಂಬ ಸಮೇತರಾಗಿ ನಡೆದು ಹೋಗುತ್ತಿರುವ ದೃಶ್ಯಗಳು ದಿನೇ ದಿನೇ ಹೆಚ್ಚತೊಡಗಿದೆ.
ಸೋಮವಾರ ಲಾಕ್ಡೌನ್ ಘೋಷಣೆ ವೇಳೆ ಸ್ವತಃ ದೆಹಲಿ ಸಿಎಂ ಕೇಜ್ರಿವಾಲ್ ಅವರೇ, ಇದೊಂದು ಸಣ್ಣ ಲಾಕ್ಡೌನ್, ಹೀಗಾಗಿ ಯಾರೂ ದೆಹಲಿ ಬಿಟ್ಟು ಹೋಗಬೇಡಿ. ನಿಮ್ಮೊಂದಿಗೆ ನಾನಿದ್ದೇನೆ ಎಂದು ಭರವಸೆ ನೀಡಿದ್ದರು. ಆದರೆ ಸಿಎಂ ಮಾತಿಗೆ ಓಗೊಡದ ಕಾರ್ಮಿಕರು ಮರುವಲಸೆ ಆರಂಭಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ