
ನವದೆಹಲಿ(ಜೂ.26): ಏಮ್ಸ್ ನಿರ್ದೇಶಕ ಡಾ. ಗುಲೇರಿಯಾ ಆಕ್ಸಿಜನ್ ಆಡಿಟ್ ಕಮಿಟಿ ರಿಪೋರ್ಟ್ ಬೆನ್ನಲ್ಲೇ ಎದ್ದಿರುವ ವಿವಾದವನ್ನು ತಣ್ಣಗಾಗಿಸುವ ಯತ್ನ ನಡೆಸಿದ್ದಾರೆ. ಮಾದ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅಂತಿಮ ವರದಿ ಬರುವವರೆಗೆ ದೆಹಲಿ ಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ಆಕ್ಸಿಜನ್ಗೆ ಬೇಡಿಕೆ ಇಟ್ಟಿದೆ ಎನ್ನುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕೊರೋನಾ ಎರಡನೇ ಅಲೆ ಗರಿಷ್ಠ ಮಟ್ಟಕ್ಕೆ ತಲುಪಿದ ಸಂದರ್ಭದಲ್ಲಿ ಇಡೀ ದೇಶಾದ್ಯಂತ ಮೆಡಿಕಲ್ ಆಕ್ಸಿಜನ್ ಕೊರತೆ ಭಾರೀ ಪ್ರಮಾಣದಲ್ಲಿ ಕಂಡು ಬಂದಿತ್ತು. ಹೀಗಿರುವಾಗ ದೇಶದ ಎಲ್ಲಾ ರಾಜ್ಯಗಳಿಗೆ ಅವುಗಳ ಅಗತ್ಯಕ್ಕೆ ಅನುಗುಣವಾಗಿ ಆಮ್ಲಜನಕ ಪೂರೈಸಲು ಸುಪ್ರೀಂ ಕೋರ್ಟ್ ಹನ್ನೆರಡು ಸದಸ್ಯರು ಸ್ಪೆಷಲ್ ಆಡಿಟ್ ಸಮಿತಿ ರಚಿಸಿತ್ತು. ಇದರ ವರದಿ ಸದ್ಯ ದೆಹಲಿ ಸರ್ಕಾರಕ್ಕೆ ಬಹುದೊಡ್ಡ ತಲೆನೋವು ಕೊಟ್ಟಿದೆ. ಆದರೆ ಈ ವರದಿ ಇನ್ನೂ ಅಧಿಕೃಕೃತವಾಗಿ ಬಿಡುಗಡೆಯಾಗಿಲ್ಲ.
ಹೀಗಿರುವಾಗ ಈ ವಿಚಾರವಾಗಿ ಎನ್ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಡಾ. ಗುಲೇರಿಯಾ ಈ ಪ್ರಕರಣ ಸದ್ಯ ಇನ್ನೂ ಸುಪ್ರೀಂ ಕೋರ್ಟ್ನಲ್ಲಿದೆ. ಹೀಗಾಗಿ ತೀರ್ಪಿಗೆ ಕಾಯಬೇಕಿದೆ. ಈವರೆಗೂ ಅಂತಿಮ ವರದಿ ಕೂಡಾ ಬಂದಿಲ್ಲ. ಹೀಗಾಗಿ ಈ ವಿಚಾರವಾಗಿ ಏನೇ ಹೇಳುವುದೂ ಸರಿಯಲ್ಲ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ