ಜೆಎನ್‌ಯು ದಾಳಿಕೋರರ ಫೋಟೋ ಬಿಡುಗಡೆ ಮಾಡಿದ ಪೊಲೀಸರು!

Suvarna News   | Asianet News
Published : Jan 10, 2020, 06:24 PM IST
ಜೆಎನ್‌ಯು ದಾಳಿಕೋರರ ಫೋಟೋ ಬಿಡುಗಡೆ ಮಾಡಿದ ಪೊಲೀಸರು!

ಸಾರಾಂಶ

ದೆಹಲಿ ಪೊಲೀಸರಿಂದ ಜೆಎನ್‌ಯು ಹಿಂಸಾಚಾರದ ಫೋಟೋ ಬಿಡುಗಡೆ| ಹಾಸ್ಟೆಲ್ ಶುಲ್ಕ ಹೆಚ್ಚಳ ವಿರೋಧಿ ಹೋರಾಟದ ವೇಳೆ ನಡೆದ ಹಿಂಸಾಚಾರ| ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳ ಸದಸ್ಯರ ಕೈವಾಡ ಎಂದ ಪೊಲೀಸರು| ಎಡಪಂಥೀಯ ವಿದ್ಯಾರ್ಥಿ ಸಂಘಟನೆಯ ವಿದ್ಯಾರ್ಥಿಗಳನ್ನು ಗುರುತಿಸಿದ ಪೊಲೀಸರು| ಹಿಂಸಾಚಾರದಲ್ಲಿ ಎಬಿವಿಪಿ ಸದಸ್ಯರೂ ಭಾಗಿ ಎಂದ ದೆಹಲಿ ಪೊಲೀಸರು| 'ಮಹಿಳಾ ಹಾಸ್ಟೆಲ್‌ನಲ್ಲಿ ನಡೆದ ದಾಳಿಯ ಕುರಿತ ತನಿಖೆ ಪ್ರಗತಿಯಲ್ಲಿ'|

ನವದೆಹಲಿ(ಜ.10): ಜೆಎನ್‌ಯು ಕ್ಯಾಂಪಸ್‌ನಲ್ಲಿ ದಾಳಿ ನಡೆಸಿದ ಕಿರಾತಕರ ಫೋಟೋ ಬಿಡುಗಡೆ ಮಾಡಿರುವ ಪೊಲೀಸರು, ದಾಳಿಯಲ್ಲಿ ಎಡಪಂಥೀಯ ವಿದ್ಯಾರ್ಥಿ ಸಂಘಟನೆಯ ನಾಯಕರ ಕೈವಾಡವಿದೆ ಎಂದು ಹೇಳಿದ್ದಾರೆ.

ದಾಳಿಯ ದೃಶ್ಯಾವಳಿ ಹಾಗೂ ಫೋಟೋಗಳನ್ನು ಬಿಡುಗಡೆ ಮಾಡಿರುವ ಪೊಲೀಸರು, ಹಾಸ್ಟೆಲ್ ಶುಲ್ಕ ಹೆಚ್ಚಳ ವಿರೋಧಿ ಹೋರಾಟದ ವೇಳೆ ನಡೆದ ಹಿಂಸಾಚಾರದಲ್ಲಿ ಎಡಪಂಥೀಯ ವಿದ್ಯಾರ್ಥಿ ಸಂಘಟನೆಯ ಸದಸ್ಯರ ಕೈವಾಡವಿರುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಎಡಪಂಥೀಯ ವಿದ್ಯಾರ್ಥಿ ಸಂಘಟನೆಯ ಸದಸ್ಯರಾದ ಚುಂಚುನ್ ಕುಮಾರ್, ಪಂಕಜ್ ಮಿಶ್ರಾ, ಐಶೆ ಘೋಷ್, ವಾಸ್ಕರ್ ವಿಜಯ್, ಪ್ರಿಯಾ ರಂಜನ್, ಎಬಿವಿಪಿ ಸದಸ್ಯರಾದ ಯೋಗೇಂದ್ರ ಭಾರದ್ವಾಜ್, ಹಾಗ ವಿಕಾಸ್ ಪಟೇಲ್ ಅವರನ್ನು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿ ಶಕ್ತಿಗೆ ಮಣಿದ ಜೆಎನ್‌ಯು: ಶುಲ್ಕ ಪ್ರಮಾಣ ಕಡಿತಕ್ಕೆ ಒಪ್ಪಿಗೆ!

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ದೆಹಲಿ ಅಪರಾಧ ವಿಭಾಗದ ಡಿಸಿಪಿ ಜಾಯ್ ಟಿರ್ಕೆ, ಹಿಂಸಾಚಾರದ ಎಲ್ಲ ದೃಶ್ಯಾವಳಿಗಳನ್ನು ಕುಲಂಕೂಷವಾಗಿ ಪರಿಶೀಲಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಜೆಎನ್‌ಯು ಮಹಿಳಾ ಹಾಸ್ಟೆಲ್‌ಗೆ ನುಗ್ಗಿ ಹಿಂಸಾಚಾರ ನಡೆಸಿದ ದಾಳಿಕೋರರ ಕುರಿತು ಮಾಹಿತಿ ಬಿಡುಗಡೆ ಮಾಡಿರುವ ಪೊಲೀಸರು, ಈ ಕುರಿತು ಹೆಚ್ಚಿನ ತನಿಖೆಯ ಅಗತ್ಯವಿದೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರತನ್ ಟಾಟಾ ಮಲತಾಯಿ, ಲ್ಯಾಕ್‌ಮೆ ಫ್ಯಾಶನ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ
ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ