
ನವದೆಹಲಿ(ನ.05): ದೆಹಲಿಯಲ್ಲಿ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ ದಿನೇದಿನೇ ಏರಿಕೆಯಾಗುತ್ತಿದ್ದು, ಈಗಿನದು ಮೂರನೆಯ ಅಲೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಈ ಹಿಂದೆ ಇಂಥ ಸಾಧ್ಯತೆ ಬಗ್ಗೆ ಆರೋಗ್ಯ ಸಚಿವ ಜೈನ್ ಸುಳಿವು ನೀಡಿದ್ದರು. ಆದರೆ ಇದೀಗ ಸ್ವತಃ ಕೇಜ್ರಿವಾಲ್ ಅವರೇ ಈ ಮಾಹಿತಿ ನೀಡಿದ್ದಾರೆ. ಇದೇ ವೇಳೆ ವೈರಸ್ ಹರಡುವುದನ್ನು ನಿಯಂತ್ರಿಸಲು ಮತ್ತು ಸೋಂಕಿತರ ಚಿಕಿತ್ಸೆಗೆ ಸರ್ಕಾರ ಎಲ್ಲಾ ಕ್ರಮ ಕೈಗೊಳ್ಳುತ್ತಿರುವುದರಿಂದ ಯಾರೂ ಆತಂಕಪಡಬೇಕಿಲ್ಲ ಎಂದೂ ಅಭಯ ನೀಡಿದ್ದಾರೆ.
ದೆಹಲಿಯಲ್ಲಿ ನಿತ್ಯ ಈಗ 6000-6500 ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ಇದು ಮೊದಲ ಎರಡು ಅಲೆಗಿಂತ ಹೆಚ್ಚಿನ ದೈನಂದಿನ ಸಂಖ್ಯೆಯಾಗಿದೆ. ಸೆ.17ರಂದು ದೆಹಲಿಯಲ್ಲಿ ಎರಡನೇ ಅಲೆಯ ಗರಿಷ್ಠ ಸಂಖ್ಯೆ 4500 ದಾಖಲಾಗಿ, ನಂತರ ಇಳಿಕೆ ಆರಂಭವಾಗಿತ್ತು. ಈಗ ಮತ್ತೆ ಒಂದು ವಾರದಿಂದ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.
ಈ ಕುರಿತು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, ದೆಹಲಿಯಲ್ಲಿ ಕೊರೋನಾ ರೋಗಿಗಳಿಗೆ ಸಾಕಷ್ಟುಹಾಸಿಗೆಗಳಿವೆ. ಆದರೆ, ವೆಂಟಿಲೇಟರ್ ಸೌಕರ್ಯವಿರುವ ಐಸಿಯು ಹಾಸಿಗೆಗಳ ಕೊರತೆಯಿದೆ. ಅದನ್ನೂ ಒಂದೆರಡು ದಿನಗಳಲ್ಲಿ ಬಗೆಹರಿಸಲಾಗುವುದು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ