ದಿಲ್ಲಿಗೆ 4ನೇ ಅಲೆ ಸಂಕಷ್ಟ: ಆದರೂ ಲಾಕ್‌ಡೌನ್‌ ಇಲ್ಲ!

Published : Apr 03, 2021, 08:54 AM IST
ದಿಲ್ಲಿಗೆ 4ನೇ ಅಲೆ ಸಂಕಷ್ಟ: ಆದರೂ ಲಾಕ್‌ಡೌನ್‌ ಇಲ್ಲ!

ಸಾರಾಂಶ

 ರಾಷ್ಟ್ರ ರಾಜಧಾನಿ ದೆಹಲಿಗೆ ಕೊರೋನಾ ವೈರಸ್‌ನ 4ನೇ ಅಲೆಯ ಸಂಕಷ್ಟ| ಹಬ್ಬುವಿಕೆಯ ನಿಯಂತ್ರಣಕ್ಕೆ ಲಾಕ್‌ಡೌನ್‌ ಅಗತ್ಯವಿಲ್ಲ| ಆದರೂ ಲಾಕ್‌ಡೌನ್‌ ಇಲ್ಲ| 

ನವದೆಹಲಿ(ಏ.03):: ರಾಷ್ಟ್ರ ರಾಜಧಾನಿ ದೆಹಲಿಗೆ ಕೊರೋನಾ ವೈರಸ್‌ನ 4ನೇ ಅಲೆಯ ಸಂಕಷ್ಟಎದುರಾಗಿದೆ. ಆದಾಗ್ಯೂ ಸೋಂಕು ಹಬ್ಬುವಿಕೆಯ ನಿಯಂತ್ರಣಕ್ಕೆ ಲಾಕ್‌ಡೌನ್‌ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಪ್ರತಿಪಾದಿಸಿದ್ದಾರೆ. ಅಲ್ಲದೆ ಲಸಿಕೆ ಪಡೆಯಲು ಇರುವ ವಯೋಮಿತಿಯನ್ನು ರದ್ದುಗೊಳಿಸುವ ಮೂಲಕ ಎಲ್ಲಾ ವಯೋಮಾನದವರಿಗೆ ಕೊರೋನಾ ಲಸಿಕೆ ನೀಡಲು ರಾಜ್ಯಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಕೇಜ್ರಿವಾಲ್‌ ಅವರು ಕೇಂದ್ರಕ್ಕೆ ಒತ್ತಾಯಿಸಿದ್ದಾರೆ.

ಕೊರೋನಾದ 4ನೇ ಅಲೆಯು ಈ ಹಿಂದಿನ ವೈರಸ್‌ನಷ್ಟುಅಪಾಯಕಾರಿಯಾಗಿಲ್ಲ. ಹೀಗಾಗಿ ಲಾಕ್‌ಡೌನ್‌ ಅಗತ್ಯವಿಲ್ಲ. ಒಂದು ವೇಳೆ ಅಗತ್ಯಬಿದ್ದರೆ ಸಂಬಂಧಿಸಿದ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ ಲಾಕ್‌ಡೌನ್‌ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಮಧ್ಯಪ್ರದೇಶದ 4 ಜಿಲ್ಲೆಗಳು ಲಾಕ್‌

ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 4 ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಮಧ್ಯಪ್ರದೇಶ ಸರ್ಕಾರ ಲಾಕ್‌ಡೌನ್‌ ಘೋಷಣೆ ಮಾಡಿದೆ. ಛಿಂದ್ವಾರಾ, ರತ್ಲಂ ನಗರದಲ್ಲಿ ಗುರುವಾರ ರಾತ್ರಿಯಿಂದ ಲಾಕ್‌ಡೌನ್‌ ಜಾರಿಯಾಗಿದ್ದು, ಏ.5ರ ಬೆಳಗ್ಗೆ 6ರವರೆಗೆ ಇರಲಿದೆ. ಇಡೀ ಬೇತುಲ್‌ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 10ರಿಂದ, ಖಾರ್ಗೋನ್‌ ಜಿಲ್ಲೆಯ ನಗರ ಪ್ರದೇಶಗಳಲ್ಲಿ ಶುಕ್ರವಾರ ರಾತ್ರಿ 8ರಿಂದ ಲಾಕ್‌ಡೌನ್‌ ಜಾರಿಗೆ ಬಂದಿದ್ದು, ಏ.5ರ ಬೆಳಗ್ಗೆ 6ರವರೆಗೆ ನಿರ್ಬಂಧ ಇರುತ್ತವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?