
ನವದೆಹಲಿ(ಮೇ.29): ಈ ತಿಂಗಳ ಆರಂಭದಲ್ಲಿ ನಿತ್ಯವೂ 25000ಕ್ಕೂ ಹೆಚ್ಚು ಕೇಸು ದಾಖಲಾಗಿ, 300-400 ಸಾವಿಗೆ ಸಾಕ್ಷಿಯಾಗುತ್ತಿದ್ದ ದೆಹಲಿಯಲ್ಲಿ ಕೊನೆಗೂ ಕೋವಿಡ್ ನಿಯಂತ್ರಣಕ್ಕೆ ಬಂದಿದ್ದು, ಮಹಾನಗರಿಯಲ್ಲಿ ಆನ್ಲಾಕ್ ಪ್ರಕ್ರಿಯೆ ಆರಂಭಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ನಿರ್ಧರಿಸಿದೆ.
"
ಈ ಕುರಿತು ಹೇಳಿಕೆ ನೀಡಿರುವ ಕೇಜ್ರಿವಾಲ್, ‘ಅದು ಹೇಗೋ ನಾವು ಕೊರೋನಾ 2ನೇ ಅಲೆಯ ಮೇಲೆ ನಿಯಂತ್ರಣ ಸಾಧಿಸುವಲ್ಲಿ ಯಶಸ್ವಿಯಾಗಿದ್ದೇವೆ. ಹೀಗಾಗಿ ಸರ್ಕಾರ ಹಂತಹಂತವಾಗಿ ಅನ್ಲಾಕ್ ಪ್ರಕ್ರಿಯೆ ಆರಂಭಕ್ಕೆ ನಿರ್ಧರಿಸಿದೆ. ಇದರ ಮೊದಲ ಹಂತವಾಗಿ ಮೇ 31ರ ಸೋಮವಾರದಿಂದ ಕಟ್ಟಡ ನಿರ್ಮಾಣ ಚಟುವಟಿಕೆ ಮತ್ತು ಕಾರ್ಖಾನೆಗಳ ಪುನಾರಂಭಕ್ಕೆ ಅವಕಾಶ ನೀಡಲಾಗುವುದು. ಮುಂದೆ ತಜ್ಞರ ವರದಿ ಆಧರಿಸಿ ಪ್ರತಿವಾರವೂ ಆನ್ಲಾಕ್ ಪ್ರಕ್ರಿಯೆ ಜಾರಿಗೊಳಿಸಲಾಗುವುದು. ಒಂದು ವೇಳೆ ಈ ಪ್ರಕ್ರಿಯೆ ವೇಳೆ ಮತ್ತೆ ಸೋಂಕಿತರ ಸಂಖ್ಯೆ ಹೆಚ್ಚಳವಾದಲ್ಲಿ ನಾವು ಅನ್ಲಾಕ್ ಪ್ರಕಿಯೆ ಸ್ಥಗಿತಗೊಳಿಸಲಿದ್ದೇವೆ ಎಂದು ತಿಳಿಸಿದ್ದಾರೆ.
ಆದರೆ ಅನ್ಲಾಕ್ ಪ್ರಕ್ರಿಯೆ ಆರಂಭದ ಹೊರತಾಗಿಯೂ, ಸೋಂಕಿನ ವಿರುದ್ಧದ ನಮ್ಮ ಹೋರಾಟ ನಿಲ್ಲದು. ಇದು ಸೋಂಕು ನಿಯಂತ್ರಣ ಮತ್ತು ಹಸಿವಿನಿಂದ ಜನರ ಸಾವನ್ನು ತಪ್ಪಿಸುವ ಸಮತೋಲನದ ನಡೆ ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಶುಕ್ರವಾರ 1141 ಹೊಸ ಕೇಸು ದಾಖಲಾಗಿದ್ದು, 139 ಜನರು ಸಾವನ್ನಪ್ಪಿದ್ದಾರೆ. ಸೋಂಕಿತರ ಸಂಖ್ಯೆ 1500ಕ್ಕಿಂತ ಕಡಿಮೆ ದಾಖಲಾಗುತ್ತಿರುವುದು ಇದು ಸತತ ಮೂರನೇ ದಿನ. ಇನ್ನು ಪಾಸಿಟಿವಿಟಿ ದರ ಶೇ.159ಕ್ಕೆ ಇಳಿಕೆಯಾಗಿದೆ.
ಈ ನಡುವೆ ಉತ್ತರಪ್ರದೇಶ ಸರ್ಕಾರ ಕೂಡಾ ರಾಜ್ಯದಲ್ಲಿ ಹೇರಲಾಗಿರುವ ಕೊರೊನಾ ಕಫä್ರ್ಯವನ್ನು ಜೂನ್ ಮೊದಲ ವಾರದಿಂದ ಸಡಿಲ ಮಾಡುವ ಸಾಧ್ಯತೆ ಇದೆ. ಆದರೆ ರಾತ್ರಿ ಮತ್ತು ವಾರಾಂತ್ಯ ಕಫ್ರ್ಯೂ ಹಿಂದಿನಂತೆಯೇ ಮುಂದುವರೆಯಲಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ