ಅಯೋಧ್ಯೆ ಮಸೀದಿ ಜಮೀನು ನನ್ನದು ಎಂದು ಮಹಿಳೆ ದೂರು, ಸುಪ್ರೀಂ ಕೋರ್ಟಿಗೆ ಹೋಗಲು ನಿರ್ಧಾರ

Published : Jul 29, 2024, 11:30 AM ISTUpdated : Jul 29, 2024, 11:43 AM IST
ಅಯೋಧ್ಯೆ ಮಸೀದಿ ಜಮೀನು ನನ್ನದು ಎಂದು ಮಹಿಳೆ ದೂರು, ಸುಪ್ರೀಂ ಕೋರ್ಟಿಗೆ ಹೋಗಲು ನಿರ್ಧಾರ

ಸಾರಾಂಶ

ಸುಪ್ರೀಂ ಕೋರ್ಟ್‌ನ ಆದೇಶದಂತೆ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕಾಗಿ ಕೊಡಲಾಗಿರುವ ಧನ್ನಿಪುರ ಗ್ರಾಮದ ಭೂಮಿ ತನ್ನದು ಎಂದಿರುವ ದೆಹಲಿಯ  ಮಹಿಳೆ, ಅದನ್ನು ಮರಳಿ ಪಡೆಯಲು ಸುಪ್ರೀಂ ಮೊರೆ ಹೋಗುವುದಾಗಿ ಹೇಳಿದ್ದಾರೆ.

ಲಖನೌ (ಜು.29): ಸುಪ್ರೀಂ ಕೋರ್ಟ್‌ನ ಆದೇಶದಂತೆ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕಾಗಿ ಕೊಡಲಾಗಿರುವ ಧನ್ನಿಪುರ ಗ್ರಾಮದ ಭೂಮಿ ತನ್ನದು ಎಂದಿರುವ ದೆಹಲಿಯ ರಾಣಿ ಪಂಜಾಬಿ ಎಂಬ ಮಹಿಳೆ, ಅದನ್ನು ಮರಳಿ ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋಗುವುದಾಗಿ ಹೇಳಿದ್ದಾರೆ.

‘ನನ್ನ ಬಳಿ ಅದಕ್ಕೆ ಸಂಬಂಧಿಸಿದ ಎಲ್ಲಾ ಕಡತಗಳಿದ್ದು, ಅದನ್ನು ಮರಳಿ ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋಗುವೆ. ದೇಶ ವಿಭಜನೆ ವೇಳೆ ನನ್ನ ಪರಿವಾರ ಭಾರತಕ್ಕೆ ಬಂದಿದ್ದು, ಆ ವೇಳೆ ಅವರಿಗೆ ಕೊಡಲಾದ ಈ ಭೂಮಿಯಲ್ಲಿ 1983ರ ವರೆಗೆ ಕೃಷಿ ಬಳಸಲಾಗಿತ್ತು. ತಂದೆಯ ಆರೋಗ್ಯ ಹದಗೆಟ್ಟ ಕಾರಣ ನಾವು ದೆಹಲಿಯಲ್ಲಿ ನೆಲೆಸಿದೆವು. ಅಂದಿನಿಂದ ಆ ಜಾಗವನ್ನು ಅತಿಕ್ರಮಿಸಿಕೊಳ್ಳಲಾಗಿದೆ’ ಎಂದು ರಾಣಿ ಆರೋಪಿಸಿದ್ದಾರೆ.

ಅಯೋಧ್ಯೆ ಬಾಲ ರಾಮನ ವಿಶ್ವದ ಮೊಟ್ಟ ಮೊದಲ ಅಂಚೆ ಚೀಟಿ ಲಾವೋಸ್‌ನಲ್ಲಿ ಬಿಡುಗಡೆ!

ಆದರೆ, ಮಸೀದಿ ನಿರ್ಮಾಣಕ್ಕಾಗಿ ರಚಿಸಲಾಗಿರುವ ಇಂಡೋ-ಇಸ್ಲಾಮಿಕ್ ಬೋರ್ಡ್‌ನ ಮುಖ್ಯಸ್ಥ ಝುಫರ್ ಫಾರೂಕಿ, ಈ ಹೇಳಿಕೆಯನ್ನು ಅಲ್ಲಗಳೆದಿದ್ದು, ಆಕೆಯ ವಾದವನ್ನು ಅಲಹಾಬಾದ್ ಹೈಕೋರ್ಟ್‌ 2021ರಲ್ಲೇ ತಿರಸ್ಕರಿಸಿತ್ತು ಎಂದಿದ್ದಾರೆ,

‘ಈ ಯೋಜನೆಗೆ ಯಾವುದೇ ಅಡೆತಡೆಗಳಿಲ್ಲ. ಮಸೀದಿ ನಿರ್ಮಾಣದ ಕಾರ್ಯ ಅಕ್ಟೋಬರ್‌ನಲ್ಲಿ ಪ್ರಾರಂಭವಾಗಲಿದೆ’ ಎಂದು ಸುನ್ನಿ ವಕ್ಫ್ ಬೋರ್ಡ್‌ನ ಅಧ್ಯಕ್ಷರೂ ಆಗಿರುವ ಫಾರೂಕಿ ಮಾಹಿತಿ ನೀಡಿದ್ದಾರೆ.

ಭಾರತದಲ್ಲಿ ವಾಟ್ಸಾಪ್‌ ಸೇವೆ ಸ್ಥಗಿತ, ಐಟಿ ಸಚಿವ ವೈಷ್ಣವ್‌ ಸ್ಪಷ್ಟನೆ 

ಸೈಕಲ್ ಮೂಲಕ ಅಯೋಧ್ಯೆ ಶ್ರೀರಾಮನ ದರ್ಶನಕ್ಕೆ ಹೊರಟ ಆಂಧ್ರ ಪ್ರದೇಶದ 70ರ ವೃದ್ಧ!
ನಿಡಗುಂದಿ : ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಮೂರ್ತಿ ಲೋಕಾರ್ಪಣೆ ನಂತರ ಶ್ರೀರಾಮನ ದರ್ಶನಕ್ಕೆ ದೇಶಾದ್ಯಂತ ಭಕ್ತರು ವಿವಿಧ ಬಗೆಯಲ್ಲಿ ತೆರಳಿ ದರ್ಶನ ಪಡೆದಿದ್ದಾರೆ. ಆ ಭಕ್ತರ ಸಾಲಿನಲ್ಲಿ ಆಂಧ್ರ ಪ್ರದೇಶದ 70ರ ವೃದ್ಧನೊಬ್ಬ ಸೈಕಲ್ ಮೂಲಕ ಶ್ರೀರಾಮನ ದರ್ಶನಕ್ಕೆ ತೆರಳುತ್ತಿದ್ದಾರೆ.

ತಿರುಪತಿ ಬಳಿಯ ಗ್ರಾಮದ ರಂಗನಾಥ ಎಂಬ ವ್ಯಕ್ತಿಯ ಸೈಕಲ್ ಯಾತ್ರೆ ನಿಡಗುಂದಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಾಗುತ್ತಿದ್ದಾಗ ಮಾಧ್ಯಮದವರಿಗೆ ಸಿಕ್ಕಿದ್ದು, ಸೈಕಲ್ ಯಾತ್ರೆಯ ಮೂಲಕ ಪ್ರಭು ಶ್ರೀರಾಮನ ದರ್ಶನದ ಬಗ್ಗೆ ಹಂಚಿಕೊಂಡರು. ಕಳೆದ 15 ದಿನದಿಂದ ಆಂಧ್ರದ ತಿರುಪತಿ ಸಮೀಪದ ಗ್ರಾಮವೊಂದರಿಂದ ಸೈಕಲ್ ಯಾತ್ರೆ ಆರಂಭವಾಗಿದೆ. ಪ್ರತಿದಿನ 20 ಕಿಮೀ. ಸೈಕಲ್ ಯಾತ್ರೆ ನಡೆಸುತ್ತಾರೆ. ಸೈಕಲ್ ಮುಂದೆ ಶ್ರೀರಾಮನ ಭಾವಚಿತ್ರ ಹಾಗೂ ಶ್ರೀರಾಮನ ಪ್ರಚಾರ ಬಿತ್ತಿ ಪತ್ರ ಅಂಟಿಸಿಕೊಂಡು ತೆರಳುತ್ತಿದ್ದಾರೆ.

70ರ ಇಳಿ ವಯಸ್ಸಿನಲ್ಲೂ ಸೈಕಲ್ ಮೇಲ ಶ್ರೀರಾಮನ ದರ್ಶನ ಪಡೆಯುವ ಹಂಬಲ ಅವರ ಮಾತುಗಳಿಂದ ತಿಳಿಯಿತು. ಸೈಕಲ್‌ಗೆ ಕೇಸರಿ ಧ್ವಜ, ಕೊರಳಲ್ಲಿ ಕೇಸರಿ ಶಾಲು, ಪಂಚೆ ಧರಿಸಿದ ಅವರು, ತೆಲುಗು ಭಾಷೆ ಮಾತ್ರ ಮಾತನಾಡುತ್ತಾರೆ. ಶ್ರೀರಾಮನ ಸೇವೆಯೇ ನಮ್ಮ ಉಸಿರಾಗಿದೆ ಎಂದು ಶ್ರೀರಾಮನ ಭಕ್ತಿಯ ಹಂಬಲವನ್ನು ಪರಿಚಯಿಸಿದರು.

ಅಯೋದ್ಯೆಯಲ್ಲಿ ಶ್ರೀರಾಮನಮೂರ್ತೀ ಪ್ರತಿಷ್ಠಾಪನೆಯಾಗಿ ಹಲವು ತಿಂಗಳ ಕಳೆದರೂ ಶ್ರೀರಾಮನ ಭಕ್ತರು ಮಾತ್ರ ವಿಭಿನ್ನ ಸೇವೆಯ ಮೂಲಕ ತಮ್ಮ ಕನಸಿನ ರಾಮನನ್ನು ಭೇಟಿ ಮಾಡಲು ಹೋಗುತ್ತಿದ್ದಾರೆ. ತಮ್ಮ ಇಷ್ಟದ ಸೇವೆಯ ಮೂಲಕ ಪ್ರಭು ಶ್ರೀರಾಮನ ದರ್ಶನ ಪಡೆದು ಕೋರಿಕೆಗಳನ್ನು ಸಲ್ಲಿಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?