
ದೆಹಲಿ(ಮೇ.01): ಮೆಹ್ರೌಲಿಯ ಬಾತ್ರಾ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾದ ಎಂಟು ಕೊರೋನಾ ರೋಗಿಗಳು ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಆಕ್ಸಿಜನ್ ಕೊರತೆಯಿಂದ ಕೊರೋನಾ ರೋಗಿಗಳು ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಮೃತರಲ್ಲಿ ಆಸ್ಪತ್ರೆಯ ಗ್ಯಾಸ್ಟ್ರೋಎಂಟರೈಟಿಸ್ ಮುಖ್ಯಸ್ಥ ಡಾ. ಆರ್ ಕೆ ಹಿಮ್ಥಾನಿ (62) ಕೂಡ ಒಬ್ಬರಾಗಿದ್ದಾರೆ.
ಐಸಿಯುನಲ್ಲಿ ಆಮ್ಲಜನಕದ ಪೂರೈಕೆ ಕಡಿಮೆಯಾದಾಗ ಸಾವುಗಳು ಸಂಭವಿಸಿದೆಯೇ ಎಂದು ಕೇಳಿದಾಗ, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಎಸ್ಸಿಎಲ್ ಗುಪ್ತಾ, ಆಸ್ಪತ್ರೆಯು ಅರ್ಧ ಘಂಟೆಯವರೆಗೆ ಆಮ್ಲಜನಕವಿಲ್ಲದೆ ಓಡುತ್ತಿತ್ತು. ಎಂಟು ಕೋವಿಡ್ ರೋಗಿಗಳು ಇಲ್ಲಿಯವರೆಗೆ ಸತ್ತರೆಂದು ಘೋಷಿಸಲಾಗಿದೆ. ಇನ್ನೂ ಐವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದಿದ್ದಾರೆ.
ಭಾರತದಲ್ಲಿ ಒಂದೇ ದಿನ 4 ಲಕ್ಷ ಕೊರೋನಾ ಕೇಸ್; ವಿಶ್ವದಲ್ಲೇ ಗರಿಷ್ಠ ಪ್ರಕರಣ!
ಆಸ್ಪತ್ರೆಯಲ್ಲಿ 327 ರೋಗಿಗಳಿದ್ದು, ಅದರಲ್ಲಿ 48 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ಆಮ್ಲಜನಕದ ಪೂರೈಕೆಯ ಮಟ್ಟ ಕುಸಿಯುತ್ತಿರುವ ಬಗ್ಗೆ ಶನಿವಾರ ಮಧ್ಯಾಹ್ನದಿಂದ ಎಚ್ಚರಿಕೆ ನೀಡಲಾಗಿತ್ತು. ಮಧ್ಯಾಹ್ನ 12.30 ರ ಸುಮಾರಿಗೆ ಆಸ್ಪತ್ರೆಯಲ್ಲಿ ದ್ರವ ವೈದ್ಯಕೀಯ ಆಮ್ಲಜನಕ ಪೂರೈಕೆ ಕಡಿಮೆಯಾಗಿದೆ ಎನ್ನಲಾಗಿತ್ತು. ಮಧ್ಯಾಹ್ನ 1.35 ರ ಸುಮಾರಿಗೆ ಆಮ್ಲಜನಕ ಟ್ಯಾಂಕರ್ ಆಸ್ಪತ್ರೆ ತಲುಪಿತು.
ಈ ತಿಂಗಳ ಆರಂಭದಲ್ಲಿ, ರೋಹಿಣಿಯ ಜೈಪುರ ಗೋಲ್ಡನ್ ಆಸ್ಪತ್ರೆಯಲ್ಲಿ ದಾಖಲಾದ 20 ಜನರು ಆಮ್ಲಜನಕದ ಮಟ್ಟ ಕುಸಿದಾಗ ಸಾವನ್ನಪ್ಪಿದ್ದರು. ಆಸ್ಪತ್ರೆಗೆ ಆಕ್ಸಿಜನ್ ತಲುಪಲು ವಿಳಂಬವಾಗಿದೆ ಎಂದು ಆಸ್ಪತ್ರೆ ದೆಹಲಿ ಸರ್ಕಾರವನ್ನು ದೂಷಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ