
ಹೈದರಾಬಾದ್(ಜೂ.20): ಕೊರೋನಾ ಒಮ್ಮೆ ಬಂದು ಗುಣಮುಖವಾದ ಬಳಿಕ ದೇಹದಲ್ಲಿ ರೋಗನಿರೋಧಕ ಶಕ್ತಿ ಉತ್ಪತ್ತಿ ಆಗುವುದರಿಂದ ಮತ್ತೊಮ್ಮೆ ಕೊರೋನಾ ಸೋಂಕು ತಗುಲುವ ಸಾಧ್ಯತೆ ಇಲ್ಲ ಎಂಬುದು ಈವರೆಗಿನ ನಂಬಿಕೆ. ಆದರೆ, ಡೆಲ್ಟಾವೈರಸ್ ಪ್ರಭೇದ ರೋಗನಿರೋಧಕ ಶಕ್ತಿಯನ್ನೂ ಭೇದಿಸಿ 2ನೇ ಬಾರಿ ಕೊರೋನಾ ಸೋಂಕು ಹರಡುವ ಸಾಮರ್ಥ್ಯ ಹೊಂದಿದೆ ಎಂಬ ಆತಂಕಕಾರಿ ಸಂಗತಿ ಅಧ್ಯಯನವೊಂದರಿಂದ ತಿಳಿದುಬಂದಿದೆ.
3ನೇ ಅಲೆಯಲ್ಲಿ ರಾಜ್ಯದ 1-1.5 ಲಕ್ಷ ಮಕ್ಕಳಿಗೆ ಸೋಂಕು: ಡಾ|ದೇವಿಶೆಟ್ಟಿ ಸಮಿತಿ ವರದಿ!
ಅಹಮದಾಬಾದ್ನ ಮುಖ್ಯ ಅಗ್ನಿಶಾಮಕ ಅಧಿಕಾರಿ ರಾಜೇಶ್ ದತ್ ಎನ್ನುವವರು ಮೊದಲ ಬಾರಿ ಕೊರೋನಾ ಸೋಂಕಿಗೆ ತುತ್ತಾದ 30 ದಿನಗಳ ಅಂತರದಲ್ಲೇ ಮತ್ತೊಮ್ಮೆ ಕೊರೋನಾ ಸೋಂಕಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮೊದಲ ಬಾರಿ ಸೋಂಕಿತರಾಗಿದ್ದಾಗ ಮನೆಯಲ್ಲೇ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೆ, 2ನೇ ಬಾರಿ ಸೋಂಕಿತರಾದಾಗ 13 ದಿನ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪ್ರಕರಣವನ್ನು ಗುಜರಾತ್ ಬಯೋಟೆಕ್ನಾಲಜಿ ಸಂಶೋಧನಾ ಸಂಸ್ಥೆ (ಜಿಬಿಆರ್ಸಿ) ಅಧ್ಯಯನ ನಡೆಸಿದ ವೇಳೆ ರಾಜೇಶ್ ದತ್ 2ನೇ ಬಾರಿಗೆ ಸೋಂಕಿಗೆ ತುತ್ತಾಗಲು ಡೆಲ್ಟಾವೈರಸ್ ಪ್ರಭೇದ ಕಾರಣ ಎಂಬ ಸಂಗತಿ ತಿಳಿದುಬಂದಿದೆ.
ಡೆಲ್ಟಾವೈರಸ್ನಲ್ಲಿ ಆಗಿರುವ ಬದಲಾವಣೆಯಿಂದಾಗಿ ಅದು ಸೋಂಕಿನ ಚೇತರಿಕೆಯಿಂದ ಅಥವಾ ಲಸಿಕೆ ಪಡೆದಿದ್ದರಿಂದ ಉಂಟಾದ ರೋಗ ನಿರೋಧಕ ಶಕ್ತಿಯನ್ನು ಡೆಲ್ಟಾವೈರಸ್ ಭೇದಿಸಬಲ್ಲದು ಎಂದು ಅಧ್ಯಯನದಿಂದ ತಿಳಿದುಬಂದಿದೆ.
\ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ