
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ದಿನೇದಿನೇ ಹಿಂದುಗಳ ಮೇಲೆ ಹೆಚ್ಚುತ್ತಿರುವ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಇಲ್ಲಿ ಹೆಚ್ಚುವರಿಯಾಗಿ 1800 ಅರೆಸೇನಾಪಡೆಯ ಯೋಧರನ್ನು ನಿಯೋಜನೆ ಮಾಡಲಾಗಿದೆ ಇತ್ತೀಚೆಗೆ ರಜೌರಿಯಲ್ಲಿ ನಡೆದ ಐಇಡಿ ಬಾಂಬ್ ಸ್ಫೋಟದಲ್ಲಿ ಇಬ್ಬರು ಮಕ್ಕಳು ಸೇರಿ ಐವರ ಸಾವಗಿತ್ತು. ಇದರೊಂದಿಗೆ ಉತ್ತರ ಡಂಗ್ರಿಯಲ್ಲಿ ನಡೆದ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿ ನಾಲ್ವರ ಮರಣವಾಗಿತ್ತು. ಈ ಸಂಬಂಧ ಜಮ್ಮು ಕಾಶ್ಮೀರ ಪೊಲೀಸರು, ಸೇನೆಯ ನೂರಾರು ಯೋಧರು ಈಗಾಗಲೇ ಹುಡುಕಾಟ ನಡೆಸುತ್ತಿದ್ದಾರೆ. ಇದರೊಂದಿಗೆ 1800 ಅರೆಸೇನಾ ಪಡೆಗಳ ಯೋಧರು ಬಂದಿರುವುದು ಅಲ್ಲಿನ ಜನರಿಗೆ ಕೊಂಚ ನಿಟ್ಟುಸಿರು ಬಿಟ್ಟಂತಾಗಿದೆ.
ಪಂಜಾಬ್ ಸಿಎಂ ಮನೆ ಮುಂದೆ ಬಾಂಬ್ : ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ
ಮತ್ತೊಂದು ಕಾಶ್ಮೀರ್ ಫೈಲ್ಸ್..? ಹಿಂದೂಗಳನ್ನು ಗುರಿಯಾಗಿಸಿ ಉಗ್ರರಿಂದ ಗುಂಡಿನ ದಾಳಿ..!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ