ಸಾಕುನಾಯಿಯ ಅನಾರೋಗ್ಯದಿಂದ ಖಿನ್ನತೆ: ಫಿನಾಯಿಲ್ ಸೇವಿಸಿ ಸೋದರಿಯರಿಬ್ಬರು ಸಾವಿಗೆ ಶರಣು

Published : Dec 26, 2025, 12:23 PM IST
pet dog

ಸಾರಾಂಶ

ಲಕ್ನೋದಲ್ಲಿ, ದೀರ್ಘಕಾಲದ ಖಿನ್ನತೆ ಮತ್ತು ತಮ್ಮ ಸಾಕುನಾಯಿಯ ಅನಾರೋಗ್ಯದಿಂದ ಮನನೊಂದಿದ್ದ ಇಬ್ಬರು ಸಹೋದರಿಯರು ಫಿನಾಯಿಲ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯವರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನ್ನಪ್ಪಿದ್ದಾರೆ.

ಲಕ್ನೋ: ಬಹಳ ದೀರ್ಘಕಾಲದಿಂದ ಖಿನ್ನತೆಯಿಂದ ಬಳಲುತ್ತಿದ್ದ ಹಾಗೂ ಸಾಕುನಾಯಿಯ ಅನಾರೋಗ್ಯದಿಂದ ಮನನೊಂದಿದ್ದ ಸಹೋದರಿಯರಿಬ್ಬರು ಫಿನಾಯಿಲ್ ಕುಡಿದು ಸಾವಿಗೆ ಶರಣಾದಂತಹ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಮನೆಯಲ್ಲ ಯಾರು ಇಲ್ಲದ ವೇಳೆ ಈ ಸಹೋದರಿಯರು ಸಾವಿಗೆ ಶರಣಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಇಬ್ಬರು ಸಹೋದರಿಯರು ಬಹಳ ದೀರ್ಘಕಾಲದಿಂದ ಖಿನ್ನತೆಯಿಂದ ಬಳಲುತ್ತಿದ್ದರು. ಇಬ್ಬರೂ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಇದರ ಜೊತೆಗೆ ಅವರ ಸಾಕುನಾಯಿಯ ಅನಾರೋಗ್ಯದಿಂದಲೂ ಈ ಸಹೋದರಿಯರು ಮನನೊಂದಿದ್ದರು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ಲಕ್ನೋದ ದೌಡ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸಾವಿಗೆ ಶರಣಾದ ಸೋದರಿಯರನ್ನು ರಾಧಾ ಸಿಂಗ್ ಎಂದು ಹಾಗೂ ಜಿಯಾ ಸಿಂಗ್ ಎಂದು ಗುರುತಿಸಲಾಗಿದೆ. ಇಬ್ಬರು ಪದವೀದರರಾಗಿದ್ದು, 2014ರಿಂದಲೂ ತಮ್ಮ ಮಾನಸಿಕ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಬುಧವಾರ ಬೆಳಗ್ಗೆ 11 ಗಂಟೆ ವೇಳೆಗೆ ಈ ಸೋದರಿಯರನ್ನು ಅವರ ತಾಯಿ ಗುಲಾಬಿ ದೇವಿ ಅಂಗಡಿಯಿಂದ ಸಾಮಾನು ತರುವಂತೆ ಕಳುಹಿಸಿದ್ದಾರೆ. ವಾಪಸ್ ಮನೆಗೆ ಬಂದ ಅವರು ತಾಯಿಗೆ ತಾವು ಪಿನಾಯಿಲ್ ಸೇವಿಸಿದ್ದಾಗಿ ಹೇಳಿದ್ದಾರೆ. ಗಾಬರಿಯಾದ ತಾಯಿ ಕೂಡಲೇ ಮಗನಿಗೆ ಈ ವಿಚಾರ ತಿಳಿಸಿದ್ದಾರೆ. ನಂತರ ಇಬ್ಬರು ಸಹೋದರಿಯರನ್ನು ಮನೆಯವರು ಸಮೀಪದ ರಾಣಿ ಲಕ್ಷ್ಮಿಬಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಟ್ರಾಮಾ ಸೆಂಟರ್‌ಗೆ ಕರೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ: ಆನ್ಲೈನ್ ಬೆಟ್ಟಿಂಗ್‌ನಲ್ಲಿ ಒಂದು ಲಕ್ಷ ಕಳೆದುಕೊಂಡ ವಿದ್ಯಾರ್ಥಿ ಸಾವಿಗೆ ಶರಣು

ಟ್ರಾಮಾ ಸೆಂಟರ್‌ನ ವೈದ್ಯರು ರಾಧಾ ಸಿಂಗ್ ಅವರು ಬರುವಾಗಲೇ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು. ಹಾಗೆಯೇ ಜೀಯಾ ಸಿಂಗ್ ಅವರನ್ನು ಅಲ್ಲಿ ಚಿಕಿತ್ಸೆಗೆ ದಾಖಲಿಸಿದ್ದು, ಅವರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಘಟನೆ ಬಗ್ಗೆ ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಶಿಶು ಮಾರಾಟ ಜಾಲ ಬೇಧಿಸಿದ ಪೊಲೀಸರು: ಒಂದು ಮಗುವಿಗೆ 15 ಲಕ್ಷ: ಆಸ್ಪತ್ರೆಗಳ ಜೊತೆ ಖದೀಮರ ಸಂಪರ್ಕ

ಇತ್ತೀಚೆಗೆ ಸಾಕುನಾಯಿಗಳು ಮನೆಯ ಸದಸ್ಯರಂತಾಗಿದ್ದು, ಅವುಗಳ ಹಠಾತ್ ಅಗಲುವಿಕೆ ಕುಟುಂಬದವರಿಗೆ, ಅದರ ಪ್ರೀತಿಪಾತ್ರರಿಗೆ ಸಹಿಸಿಕೊಳ್ಳಲಾಗದ ನೋವು ನೀಡುತ್ತದೆ. ಅನೇಕರು ಮನೆ ಮಕ್ಕಳಿಗಿಂತ ಹೆಚ್ಚು ಶ್ವಾನಗಳನ್ನು ಹಚ್ಚಿಕೊಂಡಿರುತ್ತಾರೆ. ಅವುಗಳ ಆರೈಕೆಗೆ ಸಾವಿರಾರು ರೂಪಾಯಿಗಳನ್ನು ವೆಚ್ಚ ಮಾಡುತ್ತಾರೆ. ಕೆಲವರು ಅವುಗಳ ಜೊತೆಗೆ ಮಲಗುವುದು ಉಂಟು. ಯಾವುದೇ ನಿರೀಕ್ಷೆ ಇಲ್ಲದೇ ಪ್ರೀತಿ ನೀಡುವ ಶ್ವಾನಗಳ ಸಾವನ್ನು ಅಷ್ಟು ಸುಲಭವಾಗಿ ಅರಗಿಸಿಕೊಳ್ಳುವುದು ಯಾರಿಗೂ ಸಾಧ್ಯವಾಗದ ವಿಚಾರ. ಹೀಗಾಗಿ ನಾಯಿ ಮೃತಪಡುತ್ತಿದ್ದಂತೆ ಅನೇಕರು ಖಿನ್ನತೆಗೆ ಜಾರಿದ ಅನೇಕ ಘಟನೆಗಳಿವೆ.

ವಿಶೇಷ ಮನವಿ:

ಆತ್ಮ8ತ್ಯೆ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಿ... ಆತ್ಮ8ತ್ಯೆ ಮಾಡಿಕೊಂಡ ನಂತ್ರ ಮುಂದೇನು? ಸಮಸ್ಯೆಗೆ ಪರಿಹಾರ ಸಿಗುತ್ತಾ? ಇಲ್ಲ, ಕಷ್ಟಗಳಿದ್ದರೆ ಆತ್ಮೀಯರಿಗೆ ಹೇಳಿಕೊಳ್ಳಿ, ಏನೇ ಕಷ್ಟಗಳಿದ್ದರೂ ಆ ಸಮಯ ಕಳೆದು ಹೋಗುತ್ತದೆ ಎಂಬುದು ನೆನಪಿರಲಿ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ 'ಆತ್ಮ8ತ್ಯೆ' ಯೋಚನೆಗಳನ್ನು ಹೊಂದಿದ್ದರೆ, ನಿಮಗಾಗಿ ನೆರವು ಲಭ್ಯವಿದೆ. ಜಗತ್ತಿನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವವರು ನೀವು ಒಬ್ಬರು ಮಾತ್ರವಲ್ಲ ಎಂಬುದನ್ನು ದಯವಿಟ್ಟು ತಿಳಿದುಕೊಳ್ಳಿ. ಕೆಲವೊಮ್ಮೆ ಜೀವನ ಬಹಳ ಬೇಡವೆಂದೇ ಅನಿಸುತ್ತಿರಬಹುದು, ಆದರೆ ನೆರವು ಯಾವಾಗಲೂ ಲಭ್ಯವಿರುತ್ತದೆ. ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ತಮ್ಮವರ ಅಥ್ವಾ ಯಾರಾದರ ಜೊತೆ ಮಾತನಾಡುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಖಂಡಿತಾ ಸಿಗುತ್ತೆ. ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಲು ಅಥವಾ ಸಹಾಯವಾಣಿಗೆ ಕರೆ ಮಾಡಿ:

Sahai Helpline - 080 2549 7777

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಸಿಟಿವಿಗಾದ್ರೂ ಸ್ವಲ್ಪ ಮರ್ಯಾದೆ ಕೊಡಿ: ಮನೆಯಲ್ಲಿ ಏನೂ ಸಿಗದೆ ರೊಚ್ಚಿಗೆದ್ದ ಕಳ್ಳ ಬರೆದ ಪತ್ರದಲ್ಲಿ ಏನಿದೆ?
ಪಾರ್ಟಿ ಬಳಿಕ ಮನೆಗೆ ಡ್ರಾಪ್‌ ಮಾಡ್ತಿನಿ ಅನ್ನೋ ಸಿಇಒ ಮಾತು ನಂಬಿ ಕಾರು ಹತ್ತಿದ ಮಹಿಳಾ ಮ್ಯಾನೇಜರ್‌ ಗ್ಯಾಂಗ್‌ರೇ*ಪ್‌!