ಕೊರೋನಾ ಸವಾಲಿನ ನಡುವೆಯೂ ಹರಿದ್ವಾರದಲ್ಲಿ ಕುಂಭಮೇಳ

Published : Nov 23, 2020, 02:43 PM IST
ಕೊರೋನಾ ಸವಾಲಿನ ನಡುವೆಯೂ ಹರಿದ್ವಾರದಲ್ಲಿ ಕುಂಭಮೇಳ

ಸಾರಾಂಶ

ಕೊರೋನಾ ಸವಾಲಿನ ನಡುವೆಯೂ ಕುಂಭಮೇಳ/ ಹರಿದ್ವಾರದಲ್ಲಿ ಸಾಂಗವಾಗಿ ನಡೆಯಲಿದೆ ಕುಂಭಮೇಳ/ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ/ ಕೊರೋನಾ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗುವುದು

ಋಷಿಕೇಶ(ನ. 23)   ಕೊರೋನಾ ಸವಾಲಿನ ನಡುವೆಯೂ ಕುಂಭಮೇಳ ಆಯೋಜನೆ ಮಾಡಲಾಗುವುದು ಎಂದು ಉತ್ತರಾಖಂಡದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್‌ ತಿಳಿಸಿದ್ದಾರೆ. 

ಅಖಿಲ ಭಾರತೀಯ ಅಖಡಾ ಪರಿಷತ್ ನ(ಎಬಿಎಪಿ)  ಸಭೆಯಲ್ಲಿ ಭಾಗವಹಿಸಿದ ನಂತರ ಮುಖ್ಯಮಂತ್ರಿ ಈ ತೀರ್ಮಾನ ಪ್ರಕಟಿಸಿದರು. 2021ರ ಜನವರಿ 14ರಿಂದ ಕುಂಭಮೇಳ ಆರಂಭವಾಗಲಿದೆ.

ಕೋವಿಡ್‌-19  ಸಾಂಕ್ರಾಮಿಕದ ಸವಾಲಿನ ನಡುವೆಯೇ 2021ರಲ್ಲಿ ಹರಿದ್ವಾರದಲ್ಲಿ ಕುಂಭಮೇಳ ನಡೆಯಲಿದೆ. ಸರ್ಕಾರದ ಇಲಾಖೆಗಳ ಕಾರ್ಯದರ್ಶಿಗಳಿಗೆ ಕುಂಭಮೇಳದ ಸಿದ್ಧತೆಯ ಪರಿಶೀಲನೆ ನಡೆಸಲು ಸೂಚಿಸಲಾಗಿದೆ. ಮುಖ್ಯ ಕಾರ್ಯದರ್ಶಿ ಸಹ 15 ದಿನಗಳಲ್ಲಿ ಪರಿಸ್ಥಿತಿಯ ಪರಿಶೀಲನೆ ಕೈಗೊಳ್ಳಲಿದ್ದಾರೆ. ಕೋವಿಡ್‌-19 ಪರಿಸ್ಥಿತಿಯನ್ನು ಆಧರಿಸಿ ಕುಂಭಮೇಳದ ವಿಸ್ತಾರ ಮತ್ತು ವ್ಯಾಪ್ತಿ ನಿರ್ಧರಿಸಲಾಗುತ್ತದೆ. ಎಬಿಎಪಿ ಹಾಗೂ ಧಾರ್ಮಿಕ ಸಂಘಟನೆಗಳ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ.

ಇದು ದಕ್ಷಿಣದ ಕುಂಭಮೇಳ, ನಮ್ಮ ಕೊಪ್ಪಳದಲ್ಲಿ

ಈ ಬಾರಿಯ ಕುಂಭಮೇಳದಲ್ಲಿ ನಿತ್ಯ 35ರಿಂದ 50 ಲಕ್ಷ ಜನರು ಗಂಗಾ ನದಿಯಲ್ಲಿ ಪವಿತ್ರಸ್ನಾನ ಮಾಡುವ ನಿರೀಕ್ಷೆ ಇದ್ದು, ಕುಂಭಮೇಳಕ್ಕಾಗಿಯೇ ನಿರ್ಮಿಸಲಾಗುತ್ತಿರುವ ಒಂಬತ್ತು ಹೊಸ ಘಾಟ್‌ಗಳು (ನದಿ ತೀರಗಳು), ಎಂಟು ಸೇತುವೆಗಳು ಹಾಗೂ ರಸ್ತೆಗಳ ನಿರ್ಮಾಣ ಪೂರ್ಣಗೊಳ್ಳುವ ಹಂತದಲ್ಲಿದೆ.  ಸ್ವಚ್ಛತೆಗೆ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಕುಡಿಯುವ ನೀರಿನ ಸೌಲಭ್ಯ, ವಾಹನ ನಿಲುಗಡೆ ಹಾಗೂ ಅತಿಕ್ರಮ ಪ್ರವೇಶ ತಡೆಯಲು ಕ್ರಮ ತೆಗೆಗೆದುಕೊಂಡಿದ್ದು ಎಲ್ಲ ಕೆಲಸಗಳು  ಡಿಸೆಂಬರ್‌ 15ಕ್ಕೆ ಪೂರ್ಣಗೊಳ್ಳಲಿವೆ.

ಕುಂಭಮೇಳ ಆಯೋಜನೆ ಮತ್ತು ನಿರ್ವಹಣೆಗೆ ಎಬಿಎಪಿ ಸಕಲ ಸಹಕಾರವನ್ನು ಉತ್ತಾರಾಖಂಡ್ ಸರ್ಕಾರಕ್ಕೆ ನೀಡಲಿದೆ ಎಂದು ಎಬಿಎಪಿ ಮುಖ್ಯಸ್ಥ ಮಹಾಂತ್ ನರೇಂದ್ರ ಗಿರಿ ತಿಳಿಸಿದ್ದಾರೆ.

ಇಂಗ್ಲಿಷ್‌ ನಲ್ಲಿಯೂ ಓದಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!