ಹರ್ಯಾಣ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು!

Published : Mar 11, 2021, 08:47 AM IST
ಹರ್ಯಾಣ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು!

ಸಾರಾಂಶ

ಹರ್ಯಾಣ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು| ನಿರ್ಣಯದ ಪರ 32, ವಿರುದ್ಧ 55 ಮತ| ಸರ್ಕಾರ ಬೀಳಿಸುವ ಕಾಂಗ್ರೆಸ್‌ ಯತ್ನಕ್ಕೆ ಹಿನ್ನಡೆ

ಚಂಡೀಗಢ(ಮಾ.11): ಕೃಷಿ ಕಾಯ್ದೆ ವಿರೋಧಿ ಹೋರಾಟದ ಕೇಂದ್ರ ಸ್ಥಳವಾಗಿರುವ ಹರ್ಯಾಣದಲ್ಲಿ ಬಿಜೆಪಿ-ಜೆಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದೆ. ಈ ಮೂಲಕ ಕೃಷಿ ಕಾಯ್ದೆ ವಿವಾದ ಕೆದಕಿ ಸರ್ಕಾರ ಬೀಳಿಸುವ ಕಾಂಗ್ರೆಸ್‌ ಯತ್ನಕ್ಕೆ ಹಿನ್ನಡೆಯಾಗಿದೆ.

90 ಸದಸ್ಯ ಬಲದ ವಿಧಾನಸಭೆಯಲ್ಲಿ ಈಗ 88 ಶಾಸಕರಿದ್ದಾರೆ. ಅವಿಶ್ವಾಸ ನಿರ್ಣಯದ ಪರ 32 ಶಾಸಕರು ಮತ ಹಾಕಿದರೆ, ನಿರ್ಣಯದ ವಿರುದ್ಧ 55 ಶಾಸಕರು ಮತ ಚಲಾಯಿಸಿದರು. ಇದರೊಂದಿಗೆ ನಿರ್ಣಯಕ್ಕೆ ಸೋಲಾಯಿತು. ಇದಕ್ಕೂ ಮುನ್ನ ನಿರ್ಣಯ ಮಂಡಿಸಿ ಮಾತನಾಡಿದ ವಿಪಕ್ಷ ನಾಯಕ ಭೂಪಿಂದರ್‌ ಸಿಂಗ್‌ ಹೂಡಾ, ‘ಕೃಷಿ ಕಾಯ್ದೆ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿವೆ.

ಆಡಳಿತ ಕೂಟದ ಶಾಸಕರು ಸ್ವಕ್ಷೇತ್ರಕ್ಕೆ ಹೋಗದಂಥ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಇಬ್ಬರು ಪಕ್ಷೇತರ ಸದಸ್ಯರು ಸರ್ಕಾರಕ್ಕೆ ನೀಡಿದ ಬೆಂಬಲ ಹಿಂದಕ್ಕೆ ಪಡೆದಿದ್ದಾರೆ. ಈ ಕಾರಣಕ್ಕೇ ಅವಿಶ್ವಾಸ ನಿರ್ಣಯ ತಂದಿದ್ದೇವೆ’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಾಕ್ ಹೋಗಿದ್ದ 79 ವರ್ಷದ ಅಜ್ಜಿ ನಾಪತ್ತೆ: ನೆಕ್ಲೇಸ್‌ಗೆ ಮೊಮ್ಮಗ ಅಳವಡಿಸಿದ ಜಿಪಿಎಸ್‌ನಿಂದ ಪತ್ತೆ
ಯಾವ ಭಯವೂ ಇಲ್ಲದೆ ಬೇಲಿ ಹಾರಿ ಭಾರತ ಪ್ರವೇಶಿಸುತ್ತಿದ್ದಾರೆ ಬಾಂಗ್ಲಾದೇಶಿಗಳು, ವಿಡಿಯೋ ವೈರಲ್