ದುಬಾರಿ ದಂಡ ಕಾಯ್ದೆ ಜಾರಿಗೆ ಬಂದರೂ ಅಪಘಾತ ತಗ್ಗಿಲ್ಲ: ಗಡ್ಕರಿ

Published : Dec 03, 2019, 08:48 AM IST
ದುಬಾರಿ ದಂಡ ಕಾಯ್ದೆ ಜಾರಿಗೆ ಬಂದರೂ ಅಪಘಾತ ತಗ್ಗಿಲ್ಲ: ಗಡ್ಕರಿ

ಸಾರಾಂಶ

ದುಬಾರಿ ದಂಡ ಹೇರುವ ಕಾಯ್ದೆ ಜಾರಿಗೆ ಬಂದರೂ ಅಪಘಾತ ಇಳಿದಿಲ್ಲ: ಗಡ್ಕರಿ| ಜನವರಿಯಿಂದ ಸೆಪ್ಟೆಂಬರ್‌ ಅವಧಿಯಲ್ಲಿ 1.12 ಲಕ್ಷ ಮಂದಿ ಸಾವು

ನವದೆಹಲಿ[ಡಿ.03]: ರಸೆ ಅಪಘಾತಗಳನ್ನು ನಿಯಂತ್ರಿಸಲು ಸಾರಿಗೆ ನಿಮಯ ಉಲ್ಲಂಘನೆಗೆ ಭಾರೀ ದಂಡ ವಿಧಿಸುವ ನೂತನ ಮೋಟಾರ್‌ ವಾಹನ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ಆದರೆ, ಈ ಕಾಯ್ದೆಯಿಂದ ರಸ್ತೆ ಅಪಘಾತಗಳ ಪ್ರಮಾಣದಲ್ಲಿ ಇಳಿಕೆ ಆಗಿಲ್ಲ ಎಂದಬುದನ್ನು ಸ್ವತಃ ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಒಪ್ಪಿಕೊಂಡಿದ್ದಾರೆ.

ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ನೂತನ ಮೋಟಾರ್‌ ವಾಹನ ತಿದ್ದುಪಡಿ ಕಾಯ್ದೆ ಜಾರಿ ಬಳಿಕ ಅಂತಹ ಮಹತ್ವದ ಬದಲಾವಣೆಗಳು ಆಗಿಲ್ಲ ಎಂದು ಹೇಳಲು ಬೇಸರವಾಗುತ್ತಿದೆ. 2019ರ ಜನವರಿಯಿಂದ- ಸೆಪ್ಟೆಂಬರ್‌ ಅವಧಿಯಲ್ಲಿ 3.39 ಲಕ್ಷ ಅಪಘಾತಗಳು ಸಂಭವಿಸಿದ್ದು, 1,12,735 ಜನರು ಸಾವಿಗೀಡಾಗಿದ್ದಾರೆ ಮತ್ತು 3.45 ಲಕ್ಷ ಜನರು ಗಾಯಗೊಂಡಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಅಪಘಾತಗಳ ಸಂಖ್ಯೆಯಲ್ಲಿ ಶೇ.2.2ರಷ್ಟುಇಳಿಕೆಯಾಗಿದ್ದರೂ, ಸಾವಿನ ಸಂಖ್ಯೆಯಲ್ಲಿ ಶೇ.0.2ರಷ್ಟುಹೆಚ್ಚಳವಾಗಿದೆ ಎಂದಿದ್ದಾರೆ.

2018ನೇ ಸಾಲಿನ ವರದಿಗೆ ಹೋಲಿಸಿದರೆ ರಸ್ತೆ ಅಪಘಾತ ಪ್ರಮಾಣದಲ್ಲಿ ಶೇ.2.2ರಷ್ಟುಇಳಿಕೆಯಾಗಿದೆ. ವರ್ಷದ ಹಿಂದೆ ಇದೇ ಅವಧಿಯಲ್ಲಿ ದೇಶದಲ್ಲಿ 3.46 ಲಕ್ಷ ಅಪಘಾತಗಳು ಸಂಭವಿಸಿತ್ತು. 1,12,469 ಮಂದಿ ಪ್ರಾಣ ಕಳೆದುಕೊಂಡಿದ್ದರೆ, 3.55 ಲಕ್ಷ ಮಂದಿ ಗಾಯಳುವಾಗಿದ್ದರು ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?