
ನವದೆಹಲಿ(ಆ.03): ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಹುತಾತ್ಮ ಯೋಧರ ಮನೆಯಿಂದ ಸಂಗ್ರಹಿಸಿದ ಮಣ್ಣು ಬಳಕೆ ಆಗಲಿದೆ. ವಿಶೇಷವೆಂದರೆ ಈ ಮಣ್ಣನ್ನು ಸಂಗ್ರಹಿಸಿಕೊಟ್ಟಿರುವುದು 10 ವರ್ಷದ ಬಾಲಕ.
ದೇವ್ ಪರಾಶರ್ ಎಂಬಾತ ಈ ವರೆಗೆ 1600 ಯೋಧರ ಮನೆಗಳಿಗೆ ಭೇಟಿ ನೀಡಿ ಸಂಗ್ರಹಿಸಿದ ಮಣ್ಣನ್ನು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ಹಸ್ತಾಂತರಿಸಿದ್ದಾನೆ. ಭೂಮಿ ಪೂಜೆಯ ವೇಳೆ ಹುತಾತ್ಮ ಯೋಧರ ಮನೆಯಿಂದ ಸಂಗ್ರಹಿಸಿದ ಮಣ್ಣನ್ನು ಬಳಕೆ ಮಾಡಲಾಗುತ್ತದೆ ಎಂದು ಟ್ರಸ್ಟ್ನ ಸದಸ್ಯರು ತಿಳಿಸಿದ್ದಾರೆ.
ಕನ್ನಡ ನೆಲದ ಹಂಪಿಗೂ ಮತ್ತು ಮರ್ಯಾದಾ ಪುರುಷೋತ್ತಮ ಶ್ರೀರಾಮನಿಗೂ ಅವಿನಾಭಾವ ಸಂಬಂಧವಿದೆ!
ಮುಂಬರುವ ದಿನಗಳಲ್ಲಿ 11,000 ಹುತಾತ್ಮ ಯೋಧರ ಮನೆಗಳಿಗೆ ಭೇಟಿ ನೀಡಿ ಮಣ್ಣು ಸಂಗ್ರಹಿಸಿ ರಾಮ ಮಂದಿರಕ್ಕೆ ಅರ್ಪಿಸುವ ಗುರಿಯನ್ನು ಬಾಲಕ ಹೊಂದಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ