ಕೇದಾರನಾಥ: ಚಾರ್ಧಾಮಗಳಲ್ಲಿ ಒಂದಾದ ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ಭಕ್ತಾದಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ನೂಕುನುಗ್ಗಲಿನ ಸ್ಥಿತಿ ಉಂಟಾಗಿದ್ದು, ಭಕ್ತರು ದಾರಿ ಮಧ್ಯೆ ಸಿಲುಕಿ ಪರದಾಡಿದ ಘಟನೆ ಶನಿವಾರ ನಡೆದಿದೆ.
ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ, ಕೇದಾರನಾಥ ದೇಗುಲದಿಂದ 40 ಕಿ.ಮೀ. ದೂರದ ಸೀತಾಪುರದಲ್ಲಿ ಕಾಲ್ನಡಿಗೆಯಲ್ಲಿ ಬಂದ ಸಾವಿರಾರು ಭಕ್ತರು ಮಾರ್ಗಮಧ್ಯೆ ಸಿಲುಕಿದ್ದಾರೆ. ಈ ಜನದಟ್ಟಣೆಯಲ್ಲಿ ವಾಹನಗಳೂ ಸಿಲುಕಿಕೊಂಡಿವೆ. ಜನ ದಟ್ಟಣೆಯನ್ನು ನಿಯಂತ್ರಿಸಲು ಉತ್ತರಾಖಂಡ ಸರ್ಕಾರ ಯಾವುದೇ ಪರ್ಯಾಯ ವ್ಯವಸ್ಥೆ ಕಂಡುಕೊಂಡಿಲ್ಲ ಎಂದು ಭಕ್ತರೊಬ್ಬರು ಅಸಮಾಧಾನ ಹೊರಹಾಕಿದ್ದಾರೆ.
ಚಾರ್ಧಾಮ್ ಯಾತ್ರಾರ್ಥಿಗಳೇ ಗಮನಿಸಿ, ದೇವಸ್ಥಾನದ 200 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಬ್ಯಾನ್
ಈ ನಡುವೆ ಕೆಲವರು, ಈಗ ಕೇದಾರನಾಥಕ್ಕೆ ಹೋಗಲು ಪ್ರಶಸ್ತ ಸಮಯವಲ್ಲ ಎಂದು ಟ್ವೀಟರ್ನಲ್ಲಿ ಮನವಿ ಮಾಡಿದ್ದಾರೆ. ಜನಸಂದಣಿಯನ್ನು ಗಮನದಲ್ಲಿಟ್ಟುಕೊಂಡು ಜೂ. 6ರ ವರೆಗೂ ಇದ್ದ ಚಾರ್ ಧಾಮ್ ಯಾತ್ರೆಯ ಆಫ್ಲೈನ್ ನೋಂದಣಿಯನ್ನು ಮೇ 31ಕ್ಕೆ ಇಳಿಸಲಾಗಿದೆ.
ಕೇದಾರನಾಥದಲ್ಲಿ ಶಿವ ಸ್ಥಾಪಿತನಾಗಿದ್ದು ಹೇಗೆ? ಪಂಚಕೇದಾರಕ್ಕೂ ಮಹಾಭಾರತಕ್ಕೂ ಇರುವ ಲಿಂಕ್ ಏನು?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ