ಒಂದೊಳ್ಳೆ ಉದ್ದೇಶ; ರೈಲ್ವೆ ಸಚಿವರಿಗೆ 'ಪ್ರಧಾನ' ಪತ್ರ

Published : Sep 08, 2020, 10:06 PM IST
ಒಂದೊಳ್ಳೆ ಉದ್ದೇಶ; ರೈಲ್ವೆ ಸಚಿವರಿಗೆ 'ಪ್ರಧಾನ' ಪತ್ರ

ಸಾರಾಂಶ

ಕೇಂದ್ರ ರೈಲ್ವೆ ಸಚಿವರಿಗೆ ಮತ್ತೊಬ್ಬ ಸಚಿವ ಧರ್ಮೇಂದ್ರ ಪ್ರಧಾನ್ ರಿಂದ ಪತ್ರ/ ವಲಸೆ ಕಾರ್ಮಿಕರ ಅನುಕೂಲಕ್ಕೆ ಶ್ರಮಿಕ್ ಟ್ರೇನ್ ಇನ್ನಷ್ಟು ಬೇಕು/ ಎಲ್ಲರೂ ಜೀವನ ಕಟ್ಟಿಕೊಳ್ಳಬೇಕಾಗಿದೆ

ನವದೆಹಲಿ(ಸೆ. 08)  ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ. ಕಾರ್ಮಿಕರು ವಾಪಾಸಾಗಲು ಗುಜರಾತ್, ಕರ್ನಾಟಕ, ಮಹಾರಾಷ್ಟ್ರದಂತಹ ರಾಜ್ಯಗಳಿಗೆ ಶ್ರಮಿಕ್ ವಿಶೇಷ ರೈಲು ವ್ಯವಸ್ಥೆ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ.

ಲಾಕ್ ಡೌನ್ ನಂತರ ಕಾರ್ಮಿಕರು ತಮ್ಮ ತಮ್ಮ ಊರಿನಲ್ಲಿ ಬಂಧಿಯಾಗಿದ್ದು ಅವರು ಜೀವನ ಕಟ್ಟಿಕೊಳ್ಳಲು ಮಹಾನಗರಗಳಿಗೆ ಮತ್ತೆ ವಾಪಾಸಾಗಲೇಬೇಕಿದೆ.  ಕೇಂದ್ರ ಸರ್ಕಾರ ಶ್ರಮಿಕ್ ಟ್ರೇನ್ ಗಳನ್ನು ಸಂಚಾರ ಮಾಡಿಸುತ್ತಿದ್ದು ಅದರ ಸಂಖ್ಯೆ ಹೆಚ್ಚಿಸಬೇಕು ಎಂದು ಕೇಳಿಕೊಂಡಿದ್ದಾರೆ.

ಮಂಗಳವಾರ ಕರ್ನಾಟಕದ ಕೊರೋನಾ ಲೆಕ್ಕ

ಕರ್ನಾಟಕ, ಗುಜರಾತ್, ಓರಿಸ್ಸಾದ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.  ಮಹಾನಗರಕ್ಕೆ ವಾಪಸ್ ಬರಲು ಸಾಧ್ಯವಾಗದೆ ಹೊಸ ಸಮಸ್ಯೆಗೆ ಸಿಲುಕಿಕೊಂಡಿದ್ದು ಅವರನ್ನು ಪಾರು ಮಾಡಬೇಕಿದೆ ಎಂದು ಕೋರಿದ್ದಾರೆ.

ಒಂದು ಕಡೆ ಪ್ರಧಾನ್ ಪತ್ರ ಬರೆದಿದ್ದರೆ ಓರಿಸ್ಸಾದಿಂದ ವಾಪಾಸಾಗುತ್ತಿದ್ದ ಎಂಟು ಜನ ಕಾರ್ಮಿಕರು ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದರು. ಅವರಿದ್ದ ಬಸ್ ಅಪಘಾತಕ್ಕೆ ಗುರಿಯಾಗಿ ಇಪ್ಪತ್ತು ಜನ ಗಂಭೀರ ಗಾಯಗೊಂಡಿದ್ದರು.

ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಆಂಧ್ರಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಳ, ದೆಹಲಿ, ಹರಿಯಾಣದಲ್ಲಿ ಲಾಕ್ ಡೌನ್ ಘೋಷಣೆ ಮಾಡಿದಾಗ  926,000 ಕಾರ್ಮಿಕರು ತಮ್ಮ ಊರಿಗೆ ಹಿಂದಿರುಗಿದ್ದರು ಇದರಲ್ಲಿ 358,000 ಕಾರ್ಮಿಕರು 256 ಶ್ರಮಿಕ್ ರೈಲಿನಲ್ಲಿ ವಾಪಸ್ ಆಗಿದ್ದಾರೆ .  ಇನ್ನುಳಿದವರು ಬರಬೇಕಾಗಿದೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!