ರಾಮ ಮಂದಿರ ದೇಣಿಗೆ ಸಂಗ್ರಹಕ್ಕೆ ಭರ್ಜರಿ ಪ್ರತಿಕ್ರಿಯೆ: 11 ಕೋಟಿ ರೂ. ನೀಡಿದ ಉದ್ಯಮಿ!

Published : Jan 16, 2021, 07:08 AM IST
ರಾಮ ಮಂದಿರ ದೇಣಿಗೆ ಸಂಗ್ರಹಕ್ಕೆ ಭರ್ಜರಿ ಪ್ರತಿಕ್ರಿಯೆ: 11 ಕೋಟಿ ರೂ. ನೀಡಿದ ಉದ್ಯಮಿ!

ಸಾರಾಂಶ

ರಾಮಮಂದಿರ ನಿರ್ಮಾಣಕ್ಕೆ ರಾಷ್ಟ್ರಪತಿಯಿಂದ 5 ಲಕ್ಷ| ಗುಜರಾತ್‌ ಉದ್ಯಮಿಯಿಂದ 11 ಕೋಟಿ| ದೇಣಿಗೆ ಸಂಗ್ರಹಕ್ಕೆ ಉತ್ತಮ ಆರಂಭಿಕ ಪ್ರತಿಕ್ರಿಯೆ

ನವದೆಹಲಿ(ಜ.16): ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕೆಂದು ವಿಶ್ವ ಹಿಂದು ಪರಿಷತ್‌ ಸಂಕ್ರಾಂತಿಯಿಂದ ಆರಂಭಿಸಿರುವ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಶುಕ್ರವಾರ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮೊಟ್ಟಮೊದಲಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು 5,01,000 ರು. ಮೊತ್ತದ ಚೆಕ್‌ ಅನ್ನು ರಾಮಮಂದಿರ ನಿರ್ಮಾಣ ಹೊಣೆ ಹೊತ್ತಿರುವ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ಗೆ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಈ ನಡುವೆ, ಜಾರ್ಖಂಡ್‌ ರಾಜ್ಯಪಾಲೆ ದ್ರೌಪದಿ ಮುರ್ಮು ಅವರು 51,000 ರು. ಮತ್ತು ಸೂರತ್‌ ವಜ್ರೋದ್ಯಮಿ ಗೋವಿಂದಭಾಯಿ ಧೋಲಕಿಯಾ 11 ಕೋಟಿ ರು.ವನ್ನು ದೇಣಿಗೆ ನೀಡಿದರು. ಅಲ್ಲದೆ ಬಾಬ್ರಿ ಮಸೀದಿ ವಿವಾದದ ಕಕ್ಷಿದಾರ ಇಕ್ಬಾಲ್‌ ಅನ್ಸಾರಿ, ತಾವೂ ಸಹ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?