
ನವದೆಹಲಿ : ಆಪರೇಷನ್ ಸಿಂಧೂರ ಸಮಯದಲ್ಲಿ ಭಾರತೀಯ ವಾಯುಪಡೆಯು ಪಾಕ್ನ ಅಣ್ವಸ್ತ್ರ ನೆಲೆಯಾದ ಕೈರಾನಾ ಬೆಟ್ಟಗಳ ಮೇಲೆ ದಾಳಿ ಮಾಡಿತೇ? ಕಳೆದ ವರ್ಷ ಸಿಂದೂರ ಕಾರ್ಯಾಚರಣೆ ವೇಳೆ ಎದ್ದಿದ್ದ ಪ್ರಶ್ನೆ ಈಗ ಪುನಃ ಎದ್ದಿದೆ. ಏಕೆಂದರೆ ಗಣರಾಜ್ಯೋತ್ಸವದಂದು ವಾಯುಪಡೆಯು ಸರ್ಗೋಧಾದಲ್ಲಿನ ಪಾಕಿಸ್ತಾನದ ಪರಮಾಣು ನೆಲೆಯನ್ನು ಹೊಡೆದುರುಳಿಸುವುದನ್ನು ತೋರಿಸುವ ವೀಡಿಯೊವನ್ನು ಬಿಡುಗಡೆ ಮಾಡಿದೆ. ಜೊತೆಗೆ ಭಾರತೀಯ ಜೆಟ್ಗಳಾದ ರಫೇಲ್, ಸುಖೋಯ್, ಜಾಗ್ವಾರ್ ಮತ್ತು ತೇಜಸ್ ಹಾರಾಟವನ್ನೂ ತೋರಿಸಲಾಗಿದೆ.
ಕಳೆದ ವರ್ಷವೇ ಪತ್ರಿಕಾಗೋಷ್ಠಿಯಲ್ಲಿ, ಆಗಿನ ವಾಯುಪಡೆ ಕಾರ್ಯಾಚರಣೆಗಳ ಮಹಾನಿರ್ದೇಶಕ ಏರ್ ಮಾರ್ಷಲ್ ಎ.ಕೆ. ಭಾರ್ತಿ, ‘ಭಾರತ ಕೈರಾನಾ ಬೆಟ್ಟಗಳ ಮೇಲೆ ದಾಳಿ ಮಾಡಿಲ್ಲ’ ಎಂದು ಹೇಳಿದ್ದರು.
ಆದರೆ ಈಗ ವಿಡಿಯೋವನ್ನು ಅಧಿಕೃತ ಎಕ್ಸ್ ಖಾತೆಯಲ್ಲಿ ವಾಯಪಡೆ ಪೋಸ್ಟ್ ಮಾಡಿದ ಬಗ್ಗೆ ಮಾಧ್ಯಮಗಳು ಕೇಳಿದಾಗ ತನ್ನ ಹಳೆಯ ಹೇಳಿಕೆಯನ್ನೇ ಪುನರುಚ್ಚರಿಸಿದೆ. ‘ನಾವು ಇನ್ನೂ ಅಧಿಕೃತ ಹೇಳಿಕೆಗೆ ಬದ್ಧರಾಗಿದ್ದೇವೆ " ಎಂದು ಐಎಎಫ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ