ಸರಕು ಸಾಗಣೆ ವಿಮಾನದಲ್ಲಿ ಪ್ರಶಾಂತ್‌ ಕಿಶೋರ್‌ ಪಯಣ?

Published : Apr 25, 2020, 10:04 AM IST
ಸರಕು ಸಾಗಣೆ ವಿಮಾನದಲ್ಲಿ ಪ್ರಶಾಂತ್‌ ಕಿಶೋರ್‌ ಪಯಣ?

ಸಾರಾಂಶ

ಸರಕು ಸಾಗಣೆ ವಿಮಾನದಲ್ಲಿ ಪ್ರಶಾಂತ್‌ ಕಿಶೋರ್‌ ಪಯಣ?| ದೀದಿ ಭೇಟಿಗೆ ತೆರಳಿದ್ದ ಎಲೆಕ್ಷನ್‌ ತಂತ್ರಗಾರ| ವಿಮಾನಯಾನ ಸಚಿವಾಲಯದಿಂದ ತನಿಖೆ

ನವದೆಹಲಿ(ಏ.25): ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌ ಅವರು ದೇಶದಲ್ಲಿ ಲಾಕ್‌ಡೌನ್‌ ಜಾರಿಗೆ ಬಂದ ನಂತರ ಸರಕು ಸಾಗಣೆ ವಿಮಾನದಲ್ಲಿ ದೆಹಲಿಯಿಂದ ಕೋಲ್ಕತಾಕ್ಕೆ ಪ್ರಯಾಣಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಈ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ ತನಿಖೆ ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್‌ ಪಕ್ಷಕ್ಕೆ ಪ್ರಶಾಂತ್‌ ಕಿಶೋರ್‌ ಅವರ ಐಪ್ಯಾಕ್‌ ಸಂಸ್ಥೆ ಸಾರ್ವಜನಿಕ ಸಂಪರ್ಕ (ಪಿಆರ್‌) ಸೇವೆ ಒದಗಿಸುತ್ತಿದೆ. ಈಗ ಲಾಕ್‌ಡೌನ್‌ ಸರಿಯಾಗಿ ಜಾರಿಗೊಳಿಸದೆ ಇರುವುದು ಹಾಗೂ ಕೊರೋನಾ ವೈರಸ್‌ ಸಮಸ್ಯೆಯನ್ನು ಸರಿಯಾಗಿ ನಿಭಾಯಿಸದಿರುವ ವಿಷಯದಲ್ಲಿ ಬಂಗಾಳ ಸರ್ಕಾರ ಕೇಂದ್ರ ಸರ್ಕಾರದ ಜೊತೆಗೆ ಘರ್ಷಣೆ ನಡೆಸುತ್ತಿದೆ.

ಈ ಸಮಸ್ಯೆಯನ್ನು ಬಗೆಹರಿಸಲು ಮಮತಾ ಬ್ಯಾನರ್ಜಿ ಅವರು ಪ್ರಶಾಂತ್‌ ಕಿಶೋರ್‌ಗೆ ಬುಲಾವ್‌ ನೀಡಿದ್ದು, ಅವರು ನಿಯಮ ಉಲ್ಲಂಘಿಸಿ ಸರಕು ಸಾಗಣೆ ವಿಮಾನದಲ್ಲಿ ಬಂಗಾಳಕ್ಕೆ ಪ್ರಯಾಣಿಸಿದ್ದಾರೆಂದು ಹೇಳಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಮೆರಿಕಾದ ಬಳಿಕ ಈಗ ಮೆಕ್ಸಿಕೋದಿಂದಲೂ ಭಾರತದ ಮೇಲೆ ಶೇ.50 ಸುಂಕ: ಜನವರಿ 1ರಿಂದಲೇ ಹೊಸ ತೆರಿಗೆ ಜಾರಿ
ದೇಶದ ಮೊದಲ ಹೈಡ್ರೋಜನ್‌ ಚಾಲಿತ ವಾಟರ್‌ ಟ್ಯಾಕ್ಸಿ ವಾರಾಣಸಿಯಲ್ಲಿ ಶುರು