
ನವದೆಹಲಿ: ಭಾರತದ ಲಕ್ಷಾಂತರ ಜನರ ಮೊಬೈಲ್ ಫೋನ್ಗಳಿಗೆ ತುರ್ತು ಎಚ್ಚರಿಕೆ ಸಂದೇಶ ಬಂದಿದ್ದು, ಇದರಿಂದ ಜನ ಕೆಲ ಕಾಲ ಆತಂಕಕ್ಕೀಡಾದ ಘಟನೆ ನಡೆದಿದೆ. ಈ ವಿಚಾರದ ಬಗ್ಗೆ ಈಗ ಟ್ವಿಟ್ಟರ್ನಲ್ಲಿ ಭಾರಿ ಚರ್ಚೆಯಾಗುತ್ತಿದೆ. ಆದರೆ ಈ ಸಂದೇಶವನ್ನು ಕೇಂದ್ರ ಸರ್ಕಾರ ಪರೀಕ್ಷಾರ್ಥವಾಗಿ ಕಳುಹಿಸಿದ್ದು ಎಂಬುದು ಈಗ ಖಚಿತವಾಗಿದೆ. ಇಂದು ಮಧ್ಯಾಹ್ನ 11:35ರ ಸುಮಾರಿಗೆ ಎಮರ್ಜೆನ್ಸಿ ಟೋನ್ನೊಂದಿಗೆ ಅನೇಕರಿಗೆ ಈ ತುರ್ತು ಸಂದೇಶ ಬಂದಿದೆ, ಆಂಡ್ರಾಯ್ಡ್ ಹಾಗೂ ಐಫೋನ್ ಹೊಂದಿದ್ದ ಬಹುತೇಕರಿಗೆ ಈ ಸಂದೇಶ ಬಂದಿತ್ತು. ಆದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ಸಂದೇಶವನ್ನು ಪರೀಕ್ಷಾರ್ಥವಾಗಿ ಕಳುಹಿಸಿದೆ ಎಂದು ತಿಳಿದು ಬಂದಿದೆ.
11.35ರ ಹೊತ್ತಿಗೆ ಭಾರತದ ಅನೇಕ ಮೊಬೈಲ್ ಬಳಕೆದಾರರು ಸರ್ಕಾರದಿಂದ ತುರ್ತು ಎಚ್ಚರಿಕೆಯನ್ನು (emergency alert) ಸ್ವೀಕರಿಸಿದ್ದಾರೆ. ತುರ್ತು ಎಚ್ಚರಿಕೆಯ ರೆಕಾರ್ಡೆಡ್ ಧ್ವನಿಯೊಂದಿಗೆ ಇದನ್ನು ಕಳುಹಿಸಲಾಗಿದೆ. ಆದರೆ ಇದಕ್ಕೆ ಯಾರೂ ಗಾಬರಿಯಾಗುವ ಅಗತ್ಯವಿಲ್ಲ. ಈ ಎಚ್ಚರಿಕೆಯು ದೇಶದ ಹೊಸ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆಯ ಭಾಗವಾಗಿದೆ, ಇದನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ನಡೆಸಿದೆ ಎಂದು ತಿಳಿದು ಬಂದಿದೆ. ಬೀಪ್ ಸದ್ದಿನೊಂದಿಗೆ ಬಂದ ಈ ಎಚ್ಚರಿಕೆ ಸಂದೇಶವನ್ನು ಕೆಲವು ನಿಮಿಷಗಳ ಅಂತರದಲ್ಲಿ ಹಿಂದಿ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಕಳುಹಿಸಲಾಗಿದೆ. ತೀವ್ರ ತುರ್ತು ಎಚ್ಚರಿಕೆ ಎಂದು ಸಂದೇಶ ನೀಡಲಾಗಿದೆ.
ಪಂಚರಾಜ್ಯ ಚುನಾವಣೆ: ಮಧ್ಯ ಪ್ರದೇಶ, ಛತ್ತೀಸ್ಗಢ ಕೈ ಪಾಲು, ರಾಜಸ್ಥಾನ ಬಿಜೆಪಿಗೆ: ಸಮೀಕ್ಷೆ
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (NDMA) ಪ್ರಕಾರ ಈ ಎಚ್ಚರಿಕೆಯು ತುರ್ತು ಸಮಯದಲ್ಲಿ ಎಚ್ಚರಿಕೆ ವ್ಯವಸ್ಥೆ ಪರಿಣಾಮಕಾಯಾಗಿರುತ್ತದೆಯೇ ಎಂಬುದನ್ನು ನಿರ್ಣಯಿಸಲು ಮತ್ತು ಇದರಲ್ಲಿರುವ ಯಾವುದೇ ಸಂಭಾವ್ಯ ಸಮಸ್ಯೆಗಳನ್ನು ಗುರುತಿಸಲು ನಡೆಸಿದ ಪರೀಕ್ಷೆಯ ಭಾಗವಾಗಿದೆ. ಸೆಲ್ ಬ್ರಾಡ್ಕಾಸ್ಟಿಂಗ್ ಸಿಸ್ಟಮ್ (CBS) ಮೂಲಕ 11:30 ರಿಂದ ಮತ್ತು 11:44 ರ ನಡುವೆ ಈ ಸಂದೇಶವನ್ನು ಕಳುಹಿಸಲಾಗಿದೆ. ಈ ಸಂದೇಶವು ಸ್ವೀಕರಿಸುವವರಿಗೆ ಇದೊಂದು ಪರೀಕ್ಷೆಯಾಗಿದ್ದು ಯಾವುದೇ ಎಚ್ಚರಿಕೆ ಕ್ರಮದ ಅಗತ್ಯವಿಲ್ಲ ಎಂದು ತಿಳಿಸಿದೆ.
ನಾಯಿಗೆ ಗುಂಡಿಕ್ಕಿ ಮನೆಗೆ ಬೆಂಕಿ ಹಚ್ಚಿ ಕ್ರೌರ್ಯ ತೋರಿದ ಹಮಾಸ್ ಉಗ್ರರು: ವೀಡಿಯೋ
ಇದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್ಕಾಸ್ಟಿಂಗ್ ಸಿಸ್ಟಮ್ (Cell Broadcasting System) ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ ಸಂದೇಶವಾಗಿದೆ. ದಯವಿಟ್ಟು ಈ ಸಂದೇಶವನ್ನು ನಿರ್ಲಕ್ಷಿಸಿ ಏಕೆಂದರೆ ನಿಮ್ಮ ಕಡೆಯಿಂದ ಈ ಬಗ್ಗೆ ಯಾವುದೇ ಕ್ರಮದ ಅಗತ್ಯವಿಲ್ಲ. ಪ್ಯಾನ್ ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸಲು ಈ ಸಂದೇಶವನ್ನು ಕಳುಹಿಸಲಾಗಿದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ. ಇದು ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಸಕಾಲಿಕ ಎಚ್ಚರಿಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಈ ಸಂದೇಶದಲ್ಲಿದೆ. ಗಮನಾರ್ಹವಾಗಿ, ಸೆಲ್ ಬ್ರಾಡ್ಕಾಸ್ಟಿಂಗ್ ಸಿಸ್ಟಮ್ ಎನ್ನುವುದು ಮೊಬೈಲ್ ಆಪರೇಟರ್ಗಳು ಫೋನ್ ಆನ್ ಆಗಿದೆಯೋ ಇಲ್ಲವೋ , ಮೊಬೈಲ್ ನೆಟ್ವರ್ಕ್ ಪ್ರದೇಶದಲ್ಲಿ ಇದೆಯೋ ಇಲ್ಲವೋ ಎಂಬುದನ್ನು ಲೆಕ್ಕಿಸದೆ ನಿರ್ದಿಷ್ಟ ಪ್ರದೇಶದಲ್ಲಿ ಎಲ್ಲಾ ಫೋನ್ಗಳಿಗೆ ಸಂದೇಶಗಳನ್ನು ಕಳುಹಿಸಲು ಬಳಸುವ ತಂತ್ರಜ್ಞಾನವಾಗಿದೆ.
ಇಸ್ರೇಲ್ ಉಗ್ರ ಬೇಟೆ: 500 ಹಮಾಸ್ ನೆಲೆ ಧ್ವಂಸ: ಸಾವಿನ ಸಂಖ್ಯೆ 1400ಕ್ಕೆ ಏರಿಕೆ
ಇನ್ನು ಈ ಸಂದೇಶ ಬಹುತೇಕರಿಗೆ ಬಂದಿದ್ದು, ಇದರಿಂದ ಇದು ಟ್ವಿಟ್ಟರ್ನಲ್ಲಿ ಟ್ರೆಂಡಿಂಗ್ನಲ್ಲಿದೆ. #EmergencyAlertSystem ಎಂದು ಟ್ವಿಟ್ಟರ್ನಲ್ಲಿ ಟ್ರೆಂಡಿಂಗ್ ಶುರುವಾಗಿದ್ದು, ಎಲ್ಲರೂ ತಮಗೆ ಬಂದ ಸಂದೇಶಗಳನ್ನು ಟ್ವಿಟ್ಟರ್ನಲ್ಲಿ ಶೇರ್ ಮಾಡಿದ್ದಾರೆ. ಈ ಸಂದೇಶ ನನಗೆ ಮಾತ್ರ ಬಂದಿದ್ದ, ನಿಮಗೂ ಬಂತ ಎಂದು ಅನೇಕರು ಸಂದೇಶದ ಸ್ಕ್ರೀನ್ ಶಾಟ್ ಶೇರ್ ಮಾಡ್ತಿದ್ದಾರೆ.
ದೇಶದ ನಿರುದ್ಯೋಗ ಪ್ರಮಾಣ 6 ವರ್ಷಗಳ ಕನಿಷ್ಠಕ್ಕೆ: ಸಮೀಕ್ಷೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ