DK Shivakumar ಹೈಕಮಾಂಡ್‌ ಭೇಟಿ ಆಗಿದ್ದೇನೆ, ಆದರೆ ಯಾರೆಂದು ಹೇಳಲ್ಲ: ಡಿಕೆ

Kannadaprabha News   | Kannada Prabha
Published : Apr 24, 2026, 05:35 AM ISTUpdated : Apr 24, 2026, 05:38 AM IST
Didn t Come to Delhi to Sip Air DCM DK Shivakumar on High Command Visit rav

ಸಾರಾಂಶ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದು, "ಗಾಳಿ ಕುಡಿಯಲು ಬಂದಿಲ್ಲ, ನೀರು ಕುಡಿಯಬೇಕಿದೆ" ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ರಾಜ್ಯ ರಾಜಕೀಯದ ಬದಲಾವಣೆಗಳ ಕುರಿತು ಮಾತನಾಡಲು ನಿರಾಕರಿಸಿದರು.

ನವದೆಹಲಿ (ಏ.24) ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ. ಆದರೆ ಯಾರು ಎಂದು ಹೇಳುವುದಿಲ್ಲ ಎಂದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ದೆಹಲಿಗೆ ನಾನು ಗಾಳಿ ಕುಡಿಯಲು ಬಂದಿಲ್ಲ. ಬಿಸಿಲು ಇದೆ, ನೀರು ಕುಡಿಯಬೇಕಿದೆ ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಮತ್ತು ಅಸ್ಸಾಂ ಚುನಾವಣೆ ಕುರಿತು ನಮ್ಮ ನಾಯಕರಿಗೆ ಮಾಹಿತಿ ನೀಡಬೇಕಿದೆ. ಹಾಗೆಯೇ ನಾಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಭೇಟಿಗೆ ಅವಕಾಶ ಕೇಳಿದ್ದೇನೆ. ಬೆಂಗಳೂರು ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಬೇಕಿದೆ ಎಂದು ಹೇಳಿದರು.

ರಾಜ್ಯದಲ್ಲಿ ಬದಲಾವಣೆಗಳ ಬಗ್ಗೆ ನಾನು ಮಾಧ್ಯಮಗಳ‌ ಮುಂದೆ ಮಾತಾಡುವುದಿಲ್ಲ ಎಂದ ಅವರು, ಅಲ್ಪಸಂಖ್ಯಾತ ನಾಯಕರ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸಿ, ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ತಪ್ಪಿಲ್ಲ. ಕೆಲವು ಬಾರಿ ನಮ್ಮ ಕಡೆಯಿಂದ ತಪ್ಪಾಗಿಬಹುದು. ಕೆಲವು ಬಾರಿ ಅವರ ಕಡೆಯಿಂದ ತಪ್ಪಾಗಿರಬಹುದು ಎಂದು ತಿಳಿಸಿದರು.

ಇನ್ನು ಅಮಾನತು ವಾಪಸ್ ಪಡೆಯುವ ವಿಚಾರವಾಗಿ ಪ್ರಶ್ನಿಸಿದ್ದಕ್ಕೆ, ಇದು ಅಮಾನತು ಅಲ್ಲ. ಬದಲಿಗೆ ಅವರೇ ರಾಜೀನಾಮೆ ಕೊಟ್ಟಿದ್ದಾರೆ. ಒಮ್ಮೆ ರಾಜೀನಾಮೆ ಪತ್ರ ವಿಶ್ಲೇಷಣೆ ಮಾಡಿ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಂಗಾಳದಲ್ಲಿ ಶೇ.92% ಮತದಾನ ಸ್ವತಂತ್ರ ಭಾರತದಲ್ಲೇ ಮೊದಲು, ಮೋದಿ ಎಚ್ಚರಿಕೆಗೆ ದೀದಿ ತಿರುಗೇಟು
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಅರ್ಚಕರ 'ಹಣದ' ದಂಧೆ? ಯುವತಿಯ ವೈರಲ್ ವಿಡಿಯೋ ಹಚ್ಚಿದ ಕಿಚ್ಚು!