
ತಿರುವನಂತಪುರಂ(ನ.12): ಭೀಕರ ಪ್ರವಾಹದಿಂದ ನಲುಗಿರುವ ಕೇರಳದಲ್ಲಿ, ಮುಖ್ಯಮಂತ್ರಿ ಪ್ರವಾಹ ಪರಿಹಾರ ನಿಧಿಗೆ ವಿಶೇಷ ಚೇತನ ಕಲಾವಿದನೋರ್ವ ದೇಣಿಗೆ ನೀಡಿದ್ದು ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.
ಇಲ್ಲಿನ ಅಲತ್ತೂರಿನ ವಿಶೇಷ ಚೇತನ ಕಲಾವಿದ ಪ್ರಣವ್ ಬಾಲಸುಬ್ರಮಣ್ಯನ್ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗಿ ಪರಿಹಾರ ನಿಧಿಗೆ ದೇಣಿಗೆ ನೀಡಿದರು.
ಈ ಕುರಿತು ಖುದ್ದು ಪಿಣರಾಯಿ ವಿಜಯನ್ ಟ್ವಿಟ್ ಮಾಡಿದ್ದು, ಕಲಾವಿದ ಪ್ರಣವ್ ಅವರನ್ನು ಭೇಟಿಯಾಗಿದ್ದು ತುಂಬ ಸಂತಸ ತಂದಿದೆ ಎಂದು ತಿಳಿಸಿದ್ದಾರೆ.
ಹುಟ್ಟಿನಿಂದಲೇ ತಮ್ಮ ಎರಡೂ ಕೈಗೊಳನ್ನು ಹೊಂದಿರದ ಪ್ರಣವ್ ತಮ್ಮ ಕಾಲಿನಿಂದಲೇ ಪೇಂಟಿಂಗ್ ಮಾಡಿ ಜನಮನ್ನಣೆ ಗಳಿಸಿದ್ದಾರೆ.
ಇನ್ನು ಕಲಾವಿದ ಪ್ರಣವ್ ಅವರನ್ನು ಸಿಎಂ ಪಿಣರಾಯಿ ವಿಜಯನ್ ಬರಮಾಡಿಕೊಂಡ ರೀತಿಗೆ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದು, ಸಿಎಂ ಸರಳ ಗುಣ ಇಷ್ಟವಾಯಿತು ಎಂದು ಕೊಂಡಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ