
ನವದೆಹಲಿ (ನ.21): ಅನರ್ಹರ ಬಿಪಿಎಲ್ ಕಾರ್ಡ್ ರದ್ದುಪಡಿಸುವ ವಿಷಯ ಕರ್ನಾಟಕದಲ್ಲಿ ಭಾರೀ ಗದ್ದಲ ಸೃಷ್ಟಿಸಿರುವ ಹೊತ್ತಿನಲ್ಲೇ, ರೇಷನ್ ಕಾರ್ಡ್ಗಳ ಡಿಜಿಟಲೀಕರಣದ ಮೂಲಕ ಪಡಿತರ ವ್ಯವಸ್ಥೆಯಿಂದ 5.8 ಕೋಟಿ ಅಕ್ರಮ ಪಡಿತರ ಚೀಟಿ ರದ್ದುಪಡಿಸಲಾಗಿದೆ ಕೇಂದ್ರ ಸರ್ಕಾರ ಹೇಳಿದೆ.
ಜೊತೆಗೆ ಇಂಥ ಕ್ರಮ, ಜಾಗತಿಕ ಆಹಾರ ಭದ್ರತಾ ಖಾತರಿ ಯೋಜನೆ ಜಾರಿಯಲ್ಲಿ ಹೊಸದೊಂದು ಮೈಲುಗಲ್ಲಾಗಿದೆ ಎಂದು ಹೇಳಿದೆ.
ಈ ಕುರಿತು ಹೇಳಿಕೆ ನೀಡಿರುವ ಕೇಂದ್ರ ಆಹಾರ ಸಚಿವಾಲಯ, ‘ಪಡಿತರ ವ್ಯವಸ್ಥೆಯ ಮೂಲಕ 80.6 ಕೋಟಿ ಜನರಿಗೆ ಮಾಸಿಕ ಆಹಾರ ಪದಾರ್ಥಗಳನ್ನು ವಿತರಿಸಲಾಗುತ್ತಿದೆ. ಇದೀಗ ಆಧಾರ್ ಆಧರಿತ ದೃಢೀಕರಣ ಮತ್ತು ಎಲೆಕ್ಟ್ರಾನಿಕ್ ಮಾದರಿಯಲ್ಲೇ ನಿಮ್ಮ ಗ್ರಾಹಕರನ್ನು ಅರಿಯಿರಿ (ಇ-ಕೆವೈಸಿ) ಪರಿಶೀಲನೆ ಮೂಲಕ 5.8 ಕೋಟಿ ಅಕ್ರಮ ಪಡಿತರ ಚೀಟಿ ರದ್ದುಪಡಿಸಲಾಗಿದೆ. ಈ ಕೆಲಸವು ಪಡಿತರ ಸೋರಿಕೆಯನ್ನು ಗಮನಾರ್ಹ ಪ್ರಮಾಣದಲ್ಲಿ ತಡೆಯುವ ಜೊತೆಗೆ, ಅರ್ಹರಿಗೆ ಆಹಾರ ವಸ್ತುಗಳ ಲಭ್ಯತೆಯನ್ನು ಇನ್ನಷ್ಟು ಖಚಿತಪಡಿಸಿದೆ’ ಎಂದು ಹೇಳಿದೆ.
ಅರ್ಹರ BPL ರೇಷನ್ ಕಾರ್ಡ್ ರದ್ದಾಗಿದ್ದರೆ ಮರು ಅರ್ಜಿ ಸಲ್ಲಿಸಲು ಅವಕಾಶ; ಆಹಾರ ಸಚಿವ ಮುನಿಯಪ್ಪ!
ಹಾಲಿ, ಪಡಿತರ ವಿತರಣೆ ಅಂಗಡಿಗಳಲ್ಲಿ 5.33 ಲಕ್ಷ ಇ-ಪಿಒಎಸ್ ಯಂತ್ರಗಳ ಬಳಕೆ ಮಾಡಲಾಗುತ್ತಿದೆ. ಇದರ ಮೂಲಕ ಪಡಿತರ ವಿತರಣೆ ಸಮಯದಲ್ಲೇ ಆಧಾರ್ ನಂಬರ್ ದೃಢೀಕರಣ ಮಾಡಲಾಗುತ್ತಿದೆ. ಪ್ರಸಕ್ತ ದೇಶದಲ್ಲಿನ 20.4 ಕೋಟಿ ರೇಷನ್ ಕಾರ್ಡ್ಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಈ ಪೈಕಿ ಶೇ.99.8ರಷ್ಟು ಕಾರ್ಡ್ಗಳಿಗೆ ಆಧಾರ್ ಲಿಂಕ್ ಆಗಿದ್ದರೆ, ಶೆ.98.7ರಷ್ಟು ಫಲಾನುಭವಿಗಳ ಮಾಹಿತಿಯನ್ನು ಅವರ ಬಯೋಮೆಟ್ರಿಕ್ ಮೂಲಕ ದೃಢೀಕರಿಸಲಾಗಿದೆ. ಪ್ರಸಕ್ತ ದೇಶವ್ಯಾಪಿ ಶೇ.98ರಷ್ಟು ಜನರಿಗೆ ಆಧಾರ್ ದೃಢೀಕರಣದ ಮೂಲಕವೇ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದೆ. ಇದು ಆಹಾರದ ಸೋರಿಕೆಯನ್ನು ತಡೆಯಲು ನೆರವಾಗಿದೆ ಎಂದು ಸರ್ಕಾರ ಹೇಳಿದೆ.
ಆಧಾರ್ ತಂತ್ರ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ