
ನವದೆಹಲಿ(ಜ.18): ಆರ್ಟಿಐ ಕಾಯ್ದೆಯಡಿ ಮಾಹಿತಿ ಕೋರಿ ಅರ್ಜಿ ಸಲ್ಲಿಸುವವರು ತಮ್ಮ ಉದ್ದೇಶವನ್ನು ಕಡ್ಡಾಯವಾಗಿ ಬಹಿರಂಗಪಡಿಸಲೇಬೇಕು ಎಂದು ದೆಹಲಿ ಹೈಕೋರ್ಟ್ ಹೇಳಿದೆ. ದುರುದ್ದೇಶಪೂರಿತ ಅರ್ಜಿಗಳ ಸಲ್ಲಿಕೆ ತಡೆಯಲು ಇದು ಅನಿವಾರ್ಯ ಎಂದು ಹೇಳಿದೆ.
ಹರ್ ಕೃಷ್ಣನ್ ಎಂಬುವರು ರಾಷ್ಟ್ರಪತಿ ಎಸ್ಟೇಟ್ನ ನಿರ್ದಿಷ್ಟಹುದ್ದೆಗಳಿಗೆ ನಡೆದ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಆ ಹುದ್ದೆಗಳಿಗೆ ನೇಮಕವಾದ ಅಭ್ಯರ್ಥಿಗಳ ತಂದೆ ಹೆಸರು ಸೇರಿದಂತೆ ಇತರ ವಿವರ ಬಹಿರಂಗಪಡಿಸುವಂತೆ ಆರ್ಟಿಐ ಅರ್ಜಿ ಮೂಲಕ ಕೋರಿದ್ದರು. ಆದರೆ ವಿಚಾರಣೆ ವೇಳೆ ಅರ್ಜಿದಾರನ ಪುತ್ರಿಯೂ ಈ ಹುದ್ದೆಗೆ ಅರ್ಜಿ ಸಲ್ಲಿಸಿದ್ದಳು ಎಂಬುದು ಬಹಿರಂಗವಾಗಿದ್ದು, ಈ ಕುರಿತಾದ ವಿಚಾರವನ್ನು ಅರ್ಜಿದಾರ ತನ್ನ ಆರ್ಟಿಐನಲ್ಲಿ ಉಲ್ಲೇಖಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ತನ್ನ ಪುತ್ರಿಗೆ ಹುದ್ದೆ ಸಿಗಲಿಲ್ಲ ಎಂಬ ದುರುದ್ದೇಶದಿಂದ ಆರ್ಟಿಐ ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದಾರೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಜೊತೆಗೆ ಈ ಅರ್ಜಿಯನ್ನು ತಿರಸ್ಕರಿಸಿದ ಕೇಂದ್ರೀಯ ಮಾಹಿತಿ ಆಯೋಗದ ಆದೇಶವನ್ನು ದಿಲ್ಲಿ ಹೈಕೋರ್ಟ್ ಎತ್ತಿಹಿಡಿದಿದೆ. ಜೊತೆಗೆ ಅರ್ಜಿದಾರನಿಗೆ 25 ಸಾವಿರ ರು. ದಂಡವನ್ನೂ ವಿಧಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ