
ನವದೆಹಲಿ(ಆ.01): ಪೆಗಾಸಸ್ ಬೇಹುಗಾರಿಕೆ ಹಗರಣ, ಕೃಷಿ ಕಾಯ್ದೆಗಳ ರದ್ದತಿ ಮತ್ತು ಬೆಲೆ ಏರಿಕೆ ವಿಚಾರವಾಗಿ ಚರ್ಚೆಗೆ ಆಗ್ರಹಿಸಿ ವಿಪಕ್ಷಗಳ ನಡೆಸಿದ ನಿರಂತರ ಪ್ರತಿಭಟನೆ ಮತ್ತು ಕೋಲಾಹಲಕ್ಕೆ ಸತತ 2ನೇ ವಾರದ ಸಂಸತ್ತಿನ ಉಭಯ ಕಲಾಪಗಳು ಬಲಿಯಾಗಿವೆ. ಇದರಿಂದ ದೇಶದ ಸಾರ್ವಜನಿಕರ 133 ಕೋಟಿ ರು. ನೀರಲ್ಲಿ ಹುಣಸೆ ಹಣ್ಣು ತೊಳೆದಂತೆ ವ್ಯರ್ಥವಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.
ಜು.19ರಂದು ಕಲಾಪ ಆರಂಭವಾದಾಗಿನಿಂದ ಪೆಗಾಸಸ್ ಹಗರಣ, ಕೃಷಿ ಕಾಯ್ದೆಗಳು ಸೇರಿ ಇನ್ನಿತರ ವಿಚಾರಗಳನ್ನು ಮುಂದಿಟ್ಟುಕೊಂಡು ನಿರಂತರ ಪ್ರತಿಭಟನೆ ನಡೆಸುತ್ತಿವೆ. ಇದರ ಪರಿಣಾಮದಿಂದ 54 ಗಂಟೆ ನಡೆಯಬೇಕಿದ್ದ ಲೋಕಸಭೆ ಕಲಾಪ ಕೇವಲ 7 ಗಂಟೆ ಮಾತ್ರವೇ ನಡೆದಿದ್ದು, 53 ಗಂಟೆ ನಡೆಯಬೇಕಿದ್ದ ರಾಜ್ಯಸಭೆ ಕಲಾಪ ಕೇವಲ 11 ಗಂಟೆಗೆ ಸೀಮಿತವಾಗಿದೆ.
ತನ್ಮೂಲಕ ಒಟ್ಟಾರೆ 107 ಗಂಟೆಗಳ ಪೈಕಿ ಸಂಸತ್ತಿನ ಉಭಯ ಕಲಾಪಗಳು 18 ಗಂಟೆ ಮಾತ್ರವೇ ನಡೆದಿವೆ. ಉಳಿದ 89 ಗಂಟೆಗಳು ವ್ಯರ್ಥವಾಗಿದ್ದು, ದೇಶದ ತೆರಿಗೆದಾರರ 133 ಕೋಟಿ ರು. ನಷ್ಟವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ