ಹಿಂದೂ ಪರ ತೀರ್ಪಿತ್ತ ಜಡ್ಜ್‌ ವಿರುದ್ಧ ಡಿಎಂಕೆ ವಾಗ್ದಂಡನೆ

Kannadaprabha News   | Kannada Prabha
Published : Dec 09, 2025, 05:22 AM IST
dmk flag

ಸಾರಾಂಶ

ತಮಿಳುನಾಡಿನ ತಿರುಪ್ಪರಂಕುಂದ್ರಂ ಸುಬ್ರಮಣ್ಯಸ್ವಾಮಿ ದೇವಸ್ಥಾನದ ದೀಪೋತ್ಸವಕ್ಕೆ ಸಂಬಂಧಿಸಿದಂತೆ ಹಿಂದೂಗಳ ಪರ ತೀರ್ಪು ನೀಡಿದ ಮದ್ರಾಸ್‌ ಹೈಕೋರ್ಟ್‌ ನ್ಯಾಯಾಧೀಶ ನ್ಯಾ.ಜಿ.ಆರ್.ಸ್ವಾಮಿನಾಥನ್‌ ವಿರುದ್ಧ ಡಿಎಂಕೆ ನೇತೃತ್ವದ ಇಂಡಿಯಾ ಕೂಟದ ಪಕ್ಷಗಳು ವಾಗ್ದಂಡನೆಗೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಮದುರೈ: ತಮಿಳುನಾಡಿನ ತಿರುಪ್ಪರಂಕುಂದ್ರಂ ಸುಬ್ರಮಣ್ಯಸ್ವಾಮಿ ದೇವಸ್ಥಾನದ ದೀಪೋತ್ಸವಕ್ಕೆ ಸಂಬಂಧಿಸಿದಂತೆ ಹಿಂದೂಗಳ ಪರ ತೀರ್ಪು ನೀಡಿದ ಮದ್ರಾಸ್‌ ಹೈಕೋರ್ಟ್‌ ನ್ಯಾಯಾಧೀಶ ನ್ಯಾ.ಜಿ.ಆರ್.ಸ್ವಾಮಿನಾಥನ್‌ ವಿರುದ್ಧ ಡಿಎಂಕೆ ನೇತೃತ್ವದ ಇಂಡಿಯಾ ಕೂಟದ ಪಕ್ಷಗಳು ವಾಗ್ದಂಡನೆಗೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಏನಿದು ಪ್ರಕರಣ?:

ದೇಗುಲದ ದೀಪೋತ್ಸವ 2 ಪುರಾತನ ದೀಪಸ್ತಂಭಗಳ ಪೈಕಿ ಒಂದರಲ್ಲಿ ನಡೆಯುತ್ತದೆ. ಒಂದು ಸ್ತಂಭ ಬೆಟ್ಟದ ತಳದಲ್ಲಿದ್ದರೆ, ಮತ್ತೊಂದು ಮಧ್ಯಭಾಗದಲ್ಲಿದೆ. 100 ವರ್ಷಗಳಿಂದ ಕೆಳಗಿನ ಸ್ತಂಭದಲ್ಲೇ ದೀಪ ಬೆಳಗಲಾಗುತ್ತಿದೆ. ಆದರೆ ಮೇಲಿನ ಸ್ತಂಭದಲ್ಲೂ ದೀಪ ಬೆಳಗಿಸಲು ಅವಕಾಶ ನೀಡಬೇಕೆಂಬುದು ಭಕ್ತರ ಬೇಡಿಕೆ. ಮೇಲಿನ ಸ್ತಂಭದ ಬಳಿ ದರ್ಗಾ ಇರುವುದರಿಂದ, ಇದು ಹಿಂದೂ-ಮುಸ್ಲಿಂ ಘರ್ಷಣೆಗೆ ಕಾರಣವಾಗಬಹುದು ಎಂಬುದು ಸರ್ಕಾರದ ವಾದ. ಆತಂಕ.

ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ

ಈ ನಡುವೆ ಮದ್ರಾಸ್‌ ಹೈಕೋರ್ಟ್‌ ನ್ಯಾ. ಜಿ.ಆರ್. ಸ್ವಾಮಿನಾಥನ್, ‘ಮೇಲಿನ ಸ್ತಂಭದಲ್ಲಿ ದೀಪ ಬೆಳಗಿಸಬೇಕು. ಅದು ಸಹ ದೇವಸ್ಥಾನದ ಆಸ್ತಿಯಾಗಿದ್ದು, ಆಸ್ತಿ ಹಕ್ಕನ್ನು ದೃಢಪಡಿಸಿದಂತಾಗುತ್ತದೆ’ ಎಂದು ತೀರ್ಪು ನೀಡಿದ್ದರು. ಇದರ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಹೀಗಾಗಿ ಹೈಕೋರ್ಟ್‌ ಮೂಲಕ ವಾಗ್ದಂಡೆಗೆ ಇಂಡಿ ಕೂಟ ಮುಂದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಂದೇ.. ಚರ್ಚೆಯಿಂದ ಹೊಸ ಇತಿಹಾಸ ಸೃಷ್ಟಿಗೆ ಮೋದಿ ಯತ್ನ: ಕಾಂಗ್ರೆಸ್‌
ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ