
ನವದೆಹಲಿ(ಜೂ.10): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲಸಿಕೆ ಅಭಿಯಾನದ ವಿಚಾರವಾಗಿ ಮತ್ತೊಮ್ಮೆ ಕೇಂದ್ರದ ವಿರುದ್ಧ ಕಿಡಿ ಕಾರಿದ್ದಾರೆ. ಆದರೆ ಈ ಬಾರಿ ಅಮೇಠಿಯ ಸಂಸದೆ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ರಾಹುಲ್ಗೆ ತಿರುಗೇಟು ನೀಡಿದ್ದಾರೆ. ಭಯ, ಗೊಂದಲ ಸೃಷ್ಟಿಸೋದನ್ನು ಬಿಟ್ಟು ಲಸಿಕೆ ಹಾಕಿಸ್ಕೊಳ್ಳಿ ಎಂದು ಕಿವಿಮಾತು ಹೇಳಿದ್ದಾರೆ.
ಹೌದು ಲಸಿಕೆ ಅಭಿಯಾನದ ಬಗ್ಗೆ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, ಲಸಿಕೆಗೆ ಕೇವಲ ಆನ್ಲೈನ್ ನೋಂದಾವಣೆ ಸಾಕಾಗುವುದಿಲ್ಲ. ಲಸಿಕೆ ಕೆಂದ್ರದಲ್ಲಿ ವಾಕ್ ಇನ್ ಮಾಡುವ ಪ್ರತಿಯೊಬ್ಬ ವ್ಯಕ್ತಿಗೂ ಲಸಿಕೆ ಹಾಕಿಸಬೇಕು. ಇಂಟರ್ನೆಟ್ ಬಳಕೆ ತಿಳಿಯದವರಿಗೂ ಬದುಕುವ ಹಕ್ಕಿದೆ ಎಂದಿದ್ದರು.
ತಿರುಗೇಟು ಕೊಟ್ಟ ಸ್ಮೃತಿ ಇರಾನಿ
ರಾಹುಲ್ ಗಾಂಧಿಯ ಟ್ವಿಟ್ಗೆ ತಿರುಗೇಟು ನೀಡಿದ ಸ್ಮೃತಿ ಇರಾನಿ, ಕೆಲ ವರದಿಗಳನ್ನು ಶೇರ್ ಮಾಡುತ್ತಾ ಕೇಂದ್ರ ಸರ್ಕಾರ ಈ ಮೊದಲೇ Walk in ರಿಜಿಸ್ಟ್ರೇಶನ್ಗೆ ರಾಜ್ಯಗಳಿಗೆ ಅನುಮತಿ ನೀಡಿದೆ. ಗೊಂದಲ ಹುಟ್ಟಿಸದೇ, ಲಸಿಕೆ ಹಾಕಿಸಿಕೊಳ್ಳಿ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ