ಒಡಿಶಾದಲ್ಲಿ ಒಂದು ರೂಪಾಯಿ ಡಾಕ್ಟರ್: ವೈದ್ಯ ದಂಪತಿಯ ಮಾದರಿ ಕಾರ್ಯ!

Published : Feb 15, 2021, 10:44 AM ISTUpdated : Feb 15, 2021, 11:01 AM IST
ಒಡಿಶಾದಲ್ಲಿ ಒಂದು ರೂಪಾಯಿ ಡಾಕ್ಟರ್: ವೈದ್ಯ ದಂಪತಿಯ ಮಾದರಿ ಕಾರ್ಯ!

ಸಾರಾಂಶ

ಬಡಜನರ ಚಿಕಿತ್ಸೆಗಾಗಿ 1ರೂ. ಕ್ಲಿನಿಕ್‌!| ಒಡಿಶಾ ವೈದ್ಯ ದಂಪತಿಯ ಮಾದರಿ ಕಾರ್ಯ| ಬುರ್ಲಾ ನಗರದಲ್ಲಿ ಅತೀ ಕಡಿಮೆ ಚಿಕಿತ್ಸಾ ವೆಚ್ಚದ ಆಸ್ಪತ್ರೆ

ಸಂಬಲ್‌ಪುರ(ಫೆ.15): ಬಡಜನರ ಆರೋಗ್ಯ ದೃಷ್ಟಿಯಲ್ಲಿಟ್ಟುಕೊಂಡು ಕೇವಲ ಒಂದು ರುಪಾಯಿಗೆ ಚಿಕಿತ್ಸೆ ಕಲ್ಪಿಸುವ ಆಸ್ಪತ್ರೆಯೊಂದನ್ನು ತೆರೆಯುವ ಮೂಲಕ ಒಡಿಶಾದ ವೈದ್ಯರೊಬ್ಬರು ಮಾನವೀಯತೆ ಮೆರೆದಿದ್ದಾರೆ.

ವೀರ ಸಾಯಿ ಸುರೇಂದ್ರಾ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ(ವಿಎಂಎಸ್‌ಎಆರ್‌)ಯಲ್ಲಿ ಸಹಾಯಕ ಪ್ರಾಧ್ಯಾಪಕರಾದ ಶಂಕರ್‌ ರಾಮಚಂದಾನಿ ಎಂಬುವರೇ ಬಡವರಿಗೆ ಚಿಕಿತ್ಸೆ ನೀಡಲು ಸಂಬಲ್‌ಪುರ ಜಿಲ್ಲೆಯ ಬುರ್ಲಾ ನಗರದಲ್ಲಿ 1 ರು. ಕ್ಲಿನಿಕ್‌ ಆರಂಭಿಸಿದ ಮಹಾನುಭಾವ. ಅಲ್ಲದೆ ಬಡವರು ಮತ್ತು ನಿರ್ಗತಿಕರಿಗೆ ಸೇವೆ ನೀಡುವ ಇವರ ಈ ಮಹತ್ಕಾರ್ಯಕ್ಕೆ ದಂತ ವೈದ್ಯೆಯಾದ ಅವರ ಪತ್ನಿ ಶಿಖಾ ರಾಮಚಂದಾನಿ ಅವರ ಬೆನ್ನೆಲುಬಾಗಿ ನಿಂತಿದ್ದಾರೆ.

ಶುಕ್ರವಾರದಿಂದಲೇ ಈ ಆಸ್ಪತ್ರೆಯನ್ನು ಉದ್ಘಾಟಿಸಲಾಗಿದ್ದು, ಹಲವು ಬಡವರು ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ವೈದ್ಯ ಶಂಕರ್‌ ರಾಮಚಂದಾನಿ, ‘ಭುವನೇಶ್ವರ ಜಿಲ್ಲೆಯಿಂದ 330 ಕಿ.ಮೀ ಬುರ್ಲಾದಲ್ಲಿ ವಿಎಂಎಸ್‌ಆರ್‌ಎಆರ್‌ ಆಸ್ಪತ್ರೆ ಹೊರತುಪಡಿಸಿ ಬೇರ್ಯಾವ ಆಸ್ಪತ್ರೆ ಇರಲಿಲ್ಲ. ಇಂಥ ಸಂದರ್ಭದಲ್ಲಿ ಬಡವರಿಗಾಗಿ ಕೇವಲ 1 ರು.ಗೆ ಚಿಕಿತ್ಸೆ ನೀಡುವ ಕೇಂದ್ರ ಆರಂಭಿಸುವ ಯೋಚನೆ ಬಂದಿತು. ಅದರಂತೆ ಈಗ ನನ್ನ ಕನಸು ನನಸಾಗಿದೆ’ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ಭಾರತದಲ್ಲಿ ಭರ್ಜರಿ ಹೂಡಿಕೆಯ ಘೋಷಣೆ ಮಾಡಿದ ದೈತ್ಯ ಕಂಪನಿಗಳು
ಗುಜರಾತ್‌ನಲ್ಲೊಂದು ನಿರ್ಭಯಾ ಪ್ರಕರಣ