
ನವದೆಹಲಿ(ಮೇ.25): ಸೋಮವಾರದಿಂದ ದೇಶಾದ್ಯಂತ ಸೀಮಿತ ಸಂಖ್ಯೆಯಲ್ಲಿ ದೇಶೀಯ ವಿಮಾನಗಳ ಸಂಚಾರ ಆರಂಭವಾಗಲಿದೆ. ಆದರೆ ಈಗಾಗಲೇ ವಲಸಿಗರಿಂದ ಭಾರೀ ಪ್ರಮಾಣದಲ್ಲಿ ಸೋಂಕಿನ ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಹಲವು ರಾಜ್ಯಗಳು, ಈ ವಿಮಾನಗಳ ಸಂಚಾರಕ್ಕೂ ವಿರೋಧ ವ್ಯಕ್ತಪಡಿಸಿವೆ.
ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ರಾಜ್ಯಗಳು ತಕ್ಷಣದಿಂದ ವಿಮಾನಗಳ ಸಂಚಾರಕ್ಕೆ ಅವಕಾಶ ನೀಡಿದ್ದನ್ನು ಪ್ರಶ್ನಿಸಿವೆ. ಜೊತೆಗೆ ರಾಜ್ಯದ ಕೆಲವೇ ನಿಲ್ದಾಣಗಳನ್ನು ಸೀಮಿತ ವಿಮಾನಗಳ ಸಂಚಾರಕ್ಕೆ ಮಾತ್ರ ಸೀಮಿತಗೊಳಿಸುವ ನಿರ್ಧಾರ ಕೈಗೊಂಡಿವೆ. ಹೀಗಾಗಿ ಈ ರಾಜ್ಯಗಳಿಗೆ ತೆರಳಲು ಉದ್ದೇಶಿಸಿದ್ದ ಪ್ರಯಾಣಿಕರಿಗೆ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ.
ಮತ್ತೊಂದೆಡೆ ಕರ್ನಾಟಕ, ಕೇರಳ, ಪಂಜಾಬ್, ಒಡಿಶಾ, ಉತ್ತರ ಪ್ರದೇಶ, ಮಧ್ಯಪ್ರದೇಶ, ಜಮ್ಮು-ಕಾಶ್ಮೀರ ರಾಜ್ಯಗಳು, ವಿಮಾನದಲ್ಲಿ ಆಗಮಿಸಿದವರಿಗೂ 14 ದಿನಗಳ ಕ್ವಾರಂಟೈನ್ಗೆ ಒಳಪಡಿಸಲು ನಿರ್ಧರಿಸಿವೆ. ಈ ಪೈಕಿ 7 ದಿನ ಸಾಂಸ್ಥಿಕ ಮತ್ತು 7 ದಿನ ಹೋಮ್ ಕ್ವಾರಂಟೈನ್ಗೆ ಒಳಪಡುವುದು ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿ ಕೆಲ ಪ್ರಯಾಣಿಕರು ಪ್ರಯಾಣಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.
ಇದೇ ವೇಳೆ ಕೇಂದ್ರ ಆರೋಗ್ಯ ಸಚಿವಾಲಯ ಕೂಡಾ ಇಂಥ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸುವ ಕುರಿತು ವಿಸ್ತೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ