
ನವದೆಹಲಿ(ju.೩೦): ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಶಂಕುಸ್ಥಾಪನೆ ನೆರವೇರುವ ದಿನ ಹತ್ತಿರವಾಗುತ್ತಿದ್ದಂತೆ, ಶ್ರೀರಾಮನ ಜನ್ಮಭೂಮಿಗೆ ಚಿನ್ನ, ಬೆಳ್ಳಿ ಗಟ್ಟಿಹಾಗೂ ಇಟ್ಟಿಗೆಗಳು ಸೇರಿದಂತೆ ಕ್ವಿಂಟಲ್ಗಟ್ಟಲೆ ಅಮೂಲ್ಯ ಲೋಹಗಳು ಬರುತ್ತಿವೆ.
"ರಾಮನ ಅಸ್ತಿತ್ವವೇ ಇಲ್ಲ ಎಂದಿದ್ದ ಕಾಂಗ್ರೆಸ್", ಇದೀಗ ಭಕ್ತರಾಗಿದ್ದು ಹೇಗೆ? ಬಿಜೆಪಿ ತಿರುಗೇಟು!
ಅಯೋಧ್ಯೆ ರಾಮಮಂದಿರ ನಿರ್ಮಾಣ ಸ್ಥಳದ ಭದ್ರತೆಗೆ ನಿಯೋಜನೆಗೊಂಡಿರುವ ಭದ್ರತಾ ಸಿಬ್ಬಂದಿಗೆ ಈ ವಸ್ತುಗಳನ್ನು ಕಾಯುವುದು ಹೆಚ್ಚುವರಿ ಕೆಲಸವಾಗಿ ಪರಿಣಮಿಸಿದೆ.
ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದ ಬಳಿಕ ದೇಶದ ವಿವಿಧ ಮೂಲೆಗಳಿಂದ ಭಕ್ತಾದಿಗಳು ಚಿನ್ನ, ಬೆಳ್ಳಿ ಸೇರಿದಂತೆ ವಿವಿಧ ಆಭರಣಗಳನ್ನು ರವಾನಿಸುತ್ತಿದ್ದಾರೆ. ಆದರೆ ಇದನ್ನು ಹೇಗೆ ಬಳಸಬೇಕು ಎಂದು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೂ ಗೊತ್ತಾಗುತ್ತಿಲ್ಲ. ದೇಗುಲ ನಿರ್ಮಾಣ ವಿಷಯದಲ್ಲಿ ವ್ಯಸ್ತರಾಗಿರುವ ಟ್ರಸ್ಟ್ಗೆ ಈ ವಸ್ತುಗಳನ್ನು ಸುರಕ್ಷಿತವಾಗಿ ಕಾಯುವುದೇ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಚಿನ್ನ, ಬೆಳ್ಳಿಯಂತಹ ವಸ್ತುಗಳನ್ನು ರವಾನಿಸುವ ಬದಲಿಗೆ ಹಣ ಕಳುಹಿಸುವಂತೆ ಟ್ರಸ್ಟ್ ಮನವಿ ಮಾಡಿದೆ. ಬ್ಯಾಂಕ್ ಖಾತೆಯ ವಿವರವನ್ನು ಪದೇ ಪದೇ ನೀಡುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ