
ಜನರ ರಕ್ಷಕಣೆ ಭಕ್ಷಕನಾದಗ, ಸಾರ್ವಜನಿಕ ಜನ ಜೀವನ ಏನಾಗಬೇಕು. ಹೌದು ಬೇಲಿನೇ ಎದ್ದು ಹೊಲ ಮೇಯ್ದಂತೆ, ಪೊಲೀಸ್ನೆ ಕಳ್ಳತನ ಮಾಡಿ ನಡು ರಸ್ತೆಯಲ್ಲಿ ಧರ್ಮದೇಟು ತಿಂದ ಘಟನೆಯೊಂದು ಸಂಭವಿಸಿದೆ. ಈ ಕಥೆಯನ್ನು ಕೇಳಿದರೆ, ನೀವು ಬೆಚ್ಚಿಬೀಳ್ತೀರಾ. ಈ ಸ್ಟೋರಿ ಸಂಪೂರ್ಣ ವಿವರ ಇಲ್ಲಿದೆ.
ಹೌದು ಉತ್ತರ ಪ್ರದೇಶದ ಹಮೀದ್ಪುರದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಧರ್ಮ ಸಂಕಟಕ್ಕೆ ಸಿಲುಕಿದ ಘಟನೆಯೊಂದು ನಡೆದಿದೆ. ಪೊಲೀಸ್ ಟ್ರಕ್ ಡ್ರೈವರ್ನನ್ನು ಯಾಮಾರಿಸಿದ್ದು, ನಂತರ ಅವನನ್ನು ಚೇಸ್ ಮಾಡಿದ್ದೆಲ್ಲ ಸಿನಿಮೀಯ ಸ್ಟೈಲ್ನಲ್ಲಿ ನಡೆದಿದೆ. ಇನ್ನು ಪೊಲೀಸ್ ಕದ್ದ ಬಗೆಯನ್ನು ನೋಡುವುದಾದರೆ, ಪೊಲೀಸ್ ಅಧಿಕಾರಿ ಘಟಂಪುರದಿಂದ ಹಮೀರ್ಪುರಕ್ಕೆ ಹೋಗುವ ದಾರಿಯಲ್ಲಿ ಟ್ರಕ್ವೊಂದಕ್ಕೆ ಲಿಫ್ಟ್ ಕೇಳಿದ್ದಾನೆ. ಅದಕ್ಕೆ ಇವರನ್ನು ಹತ್ತಿಸಿಕೊಂಡ ಟ್ರಕ್ ಡ್ರೈವರ್ ಮಾನವೀಯತೆ ಮೆರೆದರೆ, ಪೊಲೀಸ್ನು ಮೆತ್ತಗೆ ಲಾರಿ ಕ್ಯಾಬಿನ್ನಲ್ಲಿ 20,000 ಎಗರಿಸಿ, ಓಡಿ ಹೋಗಿದ್ದಾನೆ. ನಂತರ ಖಾಕಿ ಖದೀಮ ಸಿಕ್ಕಿ ಬಿದ್ದಿದ್ದೆ ರೋಚಕ.
ಟ್ರಕ್ ಚಾಲಕನ ದುಡ್ಡು ಅಪಹರಿಸಿ ಓಡಿ ಹೋಗಿದ್ದ ಆರೋಪಿಯನ್ನು ಟ್ರಕ್ ಚಾಕ 13 ಕೀ.ಮೀ ಚೇಸ್ ಮಾಡಿ, ಅವನನ್ನು ಹಿಡಿದಿದ್ದಾನೆ. ಅಷ್ಟೇ ಅಲ್ಲ, ಸಿಕ್ಕ ತಕ್ಷಣ ಹಣ ವಸೂಲಿ ಮಾಡಿ, ನಡು ರಸ್ತೆಯಲ್ಲೇ ಕಾಲರ್ ಹಿಡಿದು, ತರಾಟೆಗೆ ತೆಗೆದುಗೊಂಡು ಧರ್ಮದೇಟು ನೀಡಿದ್ದಾನೆ. ಅಷ್ಟೇ ಅಲ್ಲ ವೈರಲ್ ವಿಡಿಯೋ ಬೆನ್ನಲ್ಲೇ ಸಬ್ ಇನ್ಸ್ಪೆಕ್ಟರ್ ತಕ್ಷಣ ಅಮಾನತುಗೊಳಿಸಿದ್ದಲ್ಲದೇ ಅರೆಸ್ಟ್ ಮಾಡಲಾಗಿದೆ.
ಸಾರ್ವಜನಿಕರ ಜೀವ ಮತ್ತು ಆಸ್ತಿಯನ್ನು ರಕ್ಷಿಸಬೇಕಾದ ಜವಾಬ್ದಾರಿಯುತ ಪೊಲೀಸ್ ಅಧಿಕಾರಿಯೇ ಕಳ್ಳತನಕ್ಕೆ ಇಳಿದಿರುವುದು ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ತಪ್ಪು ಮಾಡಿದ ಅಧಿಕಾರಿಯನ್ನು ಇಲಾಖೆಯು ತಕ್ಷಣವೇ ಅಮಾನತುಗೊಳಿಸಿ, ಕಾನೂನು ಕ್ರಮ ಕೈಗೊಂಡಿರುವುದು ಶ್ಲಾಘನೀಯ. ಇಂತಹ ಕಠಿಣ ಕ್ರಮಗಳು ಇಲಾಖೆಯ ಮೇಲಿರುವ ಸಾರ್ವಜನಿಕರ ನಂಬಿಕೆಯನ್ನು ಉಳಿಸಲು ಮತ್ತು ಇತರ ಭ್ರಷ್ಟ ಅಧಿಕಾರಿಗಳಿಗೆ ಎಚ್ಚರಿಕೆಯ ಸಂದೇಶ ನೀಡಲು ಅತ್ಯಂತ ಅತ್ಯಗತ್ಯವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ