ಊಟಿ, ಕೊಡೈಕೆನಾಲ್‌ ಪ್ರವೇಶಕ್ಕೆ ಇ-ಪಾಸ್‌ ಕಡ್ಡಾಯ

Published : Apr 30, 2024, 07:43 AM IST
ಊಟಿ, ಕೊಡೈಕೆನಾಲ್‌ ಪ್ರವೇಶಕ್ಕೆ ಇ-ಪಾಸ್‌ ಕಡ್ಡಾಯ

ಸಾರಾಂಶ

ಪರಿಸರ ಸಂರಕ್ಷಣೆ ದೃಷ್ಟಿಯಿಂದ ತಮಿಳುನಾಡಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ಕೊಡಕೈನಾಲ್‌ ಮತ್ತು ಊಟಿ ಗಿರಿಧಾಮಕ್ಕೆ ತೆರಳಲು ಇ-ಪಾಸ್‌ ಕಡ್ಡಾಯಗೊಳಿಸಬೇಕೆಂದು ಮದ್ರಾಸ್‌ ಹೈಕೋರ್ಟ್‌ ಸೋಮವಾರ ಮಹತ್ವದ ಆದೇಶ ನೀಡಿದೆ. 

ಚೆನ್ನೈ (ಏ.30): ಪರಿಸರ ಸಂರಕ್ಷಣೆ ದೃಷ್ಟಿಯಿಂದ ತಮಿಳುನಾಡಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ಕೊಡಕೈನಾಲ್‌ ಮತ್ತು ಊಟಿ ಗಿರಿಧಾಮಕ್ಕೆ ತೆರಳಲು ಇ-ಪಾಸ್‌ ಕಡ್ಡಾಯಗೊಳಿಸಬೇಕೆಂದು ಮದ್ರಾಸ್‌ ಹೈಕೋರ್ಟ್‌ ಸೋಮವಾರ ಮಹತ್ವದ ಆದೇಶ ನೀಡಿದೆ. ಈ ಆದೇಶ ಮೇ 7ರಿಂದ ಜೂನ್‌ 30ರ ಅವಧಿಗೆ ಸೀಮಿತವಾಗಿರಲಿದೆ.

ಇ-ಪಾಸ್‌ ಕುರಿತು ನಿಯಮಾವಳಿ ರೂಪಿಸಿ ತಮಿಳುನಾಡು ಸರ್ಕಾರವು ರಾಷ್ಟ್ರಮಟ್ಟದ ಸುದ್ದಿಮಾಧ್ಯಮಗಳಲ್ಲಿ ಬೃಹತ್‌ ಜಾಹೀರಾತು ನೀಡುವ ಮೂಲಕ ಪ್ರಚುರಪಡಿಸಬೇಕೆಂದೂ ಹೈಕೋರ್ಟ್‌ ನಿರ್ದೇಶಿಸಿದೆ. ಇ ಪಾಸ್‌ ಇಲ್ಲದ ವಾಹನಗಳಿಗೆ ಗಿರಿಧಾಮಗಳಿಗೆ ಭೇಟಿಗೆ ಅವಕಾಶ ನೀಡಬಾರದು. ಆದರೆ ಪಾಸ್‌ಗಳ ವಿತರಣೆಗೆ ಯಾವುದೇ ನಿಯಂತ್ರಣ ಇರದು. ಇ ಪಾಸ್‌ ನಿಯಮ ಸ್ಥಳೀಯರಿಗೆ ಅನ್ವಯಿಸದು ಎಂದು ಕೋರ್ಟ್‌ ಸ್ಪಷ್ಟಪಡಿಸಿದೆ.

ಪ್ರಜ್ವಲ್ ಪರ ಪ್ರಚಾರ ಮಾಡಿದ್ದ ಮೋದಿ ಈಗೇನು ಹೇಳುತ್ತಾರೆ: ಪ್ರಿಯಾಂಕಾ ಗಾಂಧಿ

ಇ ಪಾಸ್‌ ನಿಯಮ ಏಕೆ?: ಹಾಲಿ ಊಟಿಗೆ ನಿತ್ಯ 1000- 1300 ವಾಹನಗಳು ಆಗಮಿಸುತ್ತವೆ. ಆದರೆ ಬಿಸಿಲಿನ ತಾಪ ಹೆಚ್ಚಾಗುವ ಮತ್ತು ಹೆಚ್ಚಿನ ಪ್ರವಾಸಿಗರು ಆಗಮಿಸುವ ಮೇ ಮೊದಲ ವಾರದಿಂದ ಜೂನ್‌ ಅಂತ್ಯದ ವೇಳೆಗೆ ನಿತ್ಯ 20000ಕ್ಕೂ ಹೆಚ್ಚು ವಾಹನಗಳಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಇಷ್ಟು ವಾಹನಗಳ ಹೊರೆ ತಡೆಯುವ ಸಾಮರ್ಥ್ಯ ಗಿರಿಧಾಮಗಳ ರಸ್ತೆಗಳಿಗೆ ಇಲ್ಲ. 

ಇದರಿಂದ ಸ್ಥಳೀಯರ ಸಂಚಾರಕ್ಕೆ, ಕಾಡುಪ್ರಾಣಿಗಳ ಸಂಚಾರಕ್ಕೆ ಅಡ್ಡಿಯಾಗುತ್ತದೆ, ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಬೆಂಗಳೂರಿನ ಐಐಎಂ ಮತ್ತು ಮದ್ರಾಸ್‌ನ ಐಐಟಿ ಜಂಟಿ ಅಧ್ಯಯನ ತಂಡ ಇತ್ತೀಚೆಗೆ ಮಾಹಿತಿ ನೀಡಿತ್ತು. ಹೀಗಾಗಿ ಅವುಗಳ ಅಧ್ಯಯನಕ್ಕೆ ಪೂರಕವಾಗಿ ಇನ್ನಷ್ಟು ಅಗತ್ಯ ಮಾಹಿತಿ ದೊರಕಿಸುವ ನಿಟ್ಟಿನಲ್ಲಿ ಇ ಪಾಸ್‌ ವ್ಯವಸ್ಥೆ ಜಾರಿಗೆ ಹೈಕೋರ್ಟ್‌ ಆದೇಶಿಸಿದೆ.

ಪ್ರಜ್ವಲ್‌ ರೇವಣ್ಣ, ಎನ್‌ಡಿಎ ವಿರುದ್ಧ ರಾಜ್ಯದಲ್ಲಿ ಭುಗಿಲೆದ್ದ ಆಕ್ರೋಶ: ಸಾಮಾಜಿಕ ಜಾಲತಾಣದಲ್ಲೂ ಟೀಕೆ

ಇ ಪಾಸ್‌ ಪಡೆಯುವುದು ಹೇಗೆ?: ಶೀಘ್ರದಲ್ಲಿ ತಮಿಳುನಾಡು ಸರ್ಕಾರವು ಈ ಕುರಿತು ಮಾರ್ಗಸೂಚಿ ರೂಪಿಸಬೇಕು. ಅದನ್ನು ಜಿಲ್ಲಾಡಳಿತದ ಮೂಲಕ ಜಾರಿಗೊಳಿಸಬೇಕು. ಬಳಿಕ ಪಾಸ್‌ ಪಡೆದುಕೊಳ್ಳುವುದು ಹೇಗೆ ಎಂಬುದರ ಕುರಿತು ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸುವಂತೆ ನ್ಯಾಯಾಲಯ ನಿರ್ದೇಶಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ