Breaking News: ದೆಹಲಿ, ಎನ್‌ಸಿಆರ್‌ ವಲಯದಲ್ಲಿ ಕಂಪಿಸಿದ ಭೂಮಿ, 4.1 ತೀವ್ರತೆ ದಾಖಲು

Published : Jul 10, 2025, 09:17 AM ISTUpdated : Jul 10, 2025, 09:39 AM IST
Earthquake

ಸಾರಾಂಶ

ನವದೆಹಲಿ ಮತ್ತು ರಾಷ್ಟ್ರ ರಾಜಧಾನಿ ವಲಯದಲ್ಲಿ ಗುರುವಾರ ಬೆಳಿಗ್ಗೆ 4.1 ತೀವ್ರತೆಯ ಭೂಕಂಪ ಸಂಭವಿಸಿದೆ. ಕರ್ನಾಟಕ ಭವನ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭೂಕಂಪದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.

ನವದೆಹಲಿ (ಜು.10): ರಾಷ್ಟ್ರ ರಾಜಧಾನಿ ನವದೆಹಲಿ (New Delhi)ಹಾಗೂ ರಾಷ್ಟ್ರ ರಾಜಧಾನಿ ವಲಯದಲ್ಲಿ (NCR) ಗುರುವಾರ ಬೆಳಗ್ಗೆ ಭೂಕಂಪದ (Earthquake) ಅನುಭವ ಆಗಿದೆ. ರಿಕ್ಟರ್‌ ಮಾಪಕದಲ್ಲಿ (National Center for Seismology) 4.1 ತೀವ್ರತೆ ದಾಖಲಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಕರ್ನಾಟಕ ಭವನದಲ್ಲೂ ಭೂಕಂಪನದ ಅನುಭವವಾಗಿದೆ ಎಂದು ತಿಳಿಸಿದ್ದಾರೆ. ದೆಹಲಿಯ ಪ್ರಖ್ಯಾತ ಲೂಟೆನ್ಸ್‌ ವಲಯದಲ್ಲೂ ಭೂಕಂಪದ ಅನುಭವಾಗಿದೆ ಎಂದು ಜನರು ತಿಳಿಸಿದ್ದಾರೆ. ಮನೆಗಳಲ್ಲಿ ಪಾತ್ರೆಗಳು, ಫ್ಯಾನ್ ಗಳು ಅಲ್ಲಾಡಿದ ದೃಶ್ಯಗಳು ವಿಡಿಯೋದಲ್ಲಿ ದಾಖಲಾಗಿದೆ. ಇನ್ನು ಬೆರಿ ಪ್ರದೇಶದಲ್ಲೂ ಭೂಮಿ ಅಲ್ಲಾಡಿದ ಅನುಭವ ಎದುರಿಸಿದ್ದೇವೆ ಎಂದು ಜನ ತಿಳಿಸಿದ್ದಾರೆ.

ಹರಿಯಾಣದ ರೇವಾರಿ ಜಿಲ್ಲೆಯ ಗುರಾವಾರ ಬಳಿ ಭೂಕಂಪ ಸಂಭವಿಸಿದ್ದು, ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದ (ಎನ್‌ಸಿಆರ್) ಇತರ ಭಾಗಗಳಲ್ಲಿ ಬಲವಾದ ಕಂಪನಗಳು ಸಂಭವಿಸಿವೆ. ಭೂಕಂಪದ ತೀವ್ರತೆಯನ್ನು ಅಳೆಯುವ ರಿಕ್ಟರ್ ಮಾಪಕದಲ್ಲಿ ಅಂದಾಜು 4.1 ರಷ್ಟಿತ್ತು. ದೆಹಲಿ, ನೋಯ್ಡಾ, ಗುರುಗ್ರಾಮ್, ಗಾಜಿಯಾಬಾದ್ ಗಳಲ್ಲಿ ಭೂಕಂಪದ ಅನುಭವವಾಗಿದೆ. ಹರಿಯಾಣದ ರೋಹ್ಟಕ್‌ನಲ್ಲೂ ಪರಿಣಾಮ ಎದುರಿಸಲಾಗಿದ್ದು, ರಸ್ತೆಗಳಲ್ಲಿ ವಾಹನಗಳು ಅಲುಗಾಡಿದ ಅನುಭವವಾಗಿದೆ. ಹರಿಯಾಣದ ಜಜ್ಜರ್‌ನಲ್ಲಿ ಬೆಳಿಗ್ಗೆ 9:04 ರ ಸುಮಾರಿಗೆ 4.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ದೆಹಲಿಯ ಹಲವಾರು ಪ್ರದೇಶಗಳಲ್ಲಿ, ಫ್ಯಾನ್‌ಗಳು ಮತ್ತು ಇತರ ಗೃಹೋಪಯೋಗಿ ವಸ್ತುಗಳು ಅಲ್ಲಾಡಲು ಪ್ರಾರಂಭಿಸಿದ ನಂತರ ನಿವಾಸಿಗಳು ತಮ್ಮ ಮನೆಗಳನ್ನು ಬಿಟ್ಟು ಓಡಿಬಂದಿದ್ದಾರೆ. ನೋಯ್ಡಾ ಮತ್ತು ಗುರುಗ್ರಾಮ್‌ನ ಕಚೇರಿ ಪ್ರದೇಶಗಳಲ್ಲಿಯೂ ಕಂಪನದ ಅನುಭವವಾಯಿತು, ಡೆಸ್ಕ್‌ ಮೇಲಿದ್ದ ಕಂಪ್ಯೂಟರ್‌ಗಳು ಅಲ್ಲಾಡಿದ್ದರಿಂದ ಟೆಕ್ಕಿಗಳು ಕೂಡ ಭೂಕಂಪದ ಅನುಭವ ಪಡೆದರು.

 

ಹರಿಯಾಣದ ಜಜ್ಜರ್‌ ಪ್ರದೇಶದಲ್ಲಿ 10 ಕಿಲೋಮೀಟರ್‌ ಆಳದಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ಭೂಕಂಪಶಾಸ್ತ್ರ ತಿಳಿಸಿದೆ. ದೆಹಲಿ, ಹರಿಯಾಣ ಮಾತ್ರವಲ್ಲದೆ ಉತ್ತರ ಪ್ರದೇಶ ಹಾಗೂ ಪಂಜಾಬ್‌ನ ಕೆಲ ಭಾಗದಲ್ಲೂ ಭೂಕಂಪದ ಅನುಭವ ಉಂಟಾಗಿದೆ.

ಹರಿಯಾಣದ ಜಿಂದ್ ಮತ್ತು ಬಹದ್ದೂರ್‌ಗಢ ಹೊರತುಪಡಿಸಿ, ಪಶ್ಚಿಮ ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಪ್ರದೇಶಗಳು ಸಹ 10 ಸೆಕೆಂಡುಗಳ ಕಾಲ ಕಂಪನವನ್ನು ಅನುಭವಿಸಿದವು. ಕಳೆದ ಆರು ತಿಂಗಳಲ್ಲಿ ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ಇದು ಮೂರನೇ ಭೂಕಂಪವಾಗಿದೆ. ಇದಕ್ಕೂ ಮೊದಲು, ಏಪ್ರಿಲ್ 19 ಮತ್ತು ಫೆಬ್ರವರಿ 17 ರಂದು ಸಹ ಭೂಕಂಪಗಳು ಸಂಭವಿಸಿದ್ದವು.

ಕಳೆದ 6 ತಿಂಗಳಲ್ಲಿ ಮೂರನೇ ಬಾರಿಗೆ ಭೂಕಂಪ

ಏಪ್ರಿಲ್ 19: ದೆಹಲಿ-ಎನ್‌ಸಿಆರ್‌ನಲ್ಲಿ ಭೂಕಂಪ

ಏಪ್ರಿಲ್ 19 ರಂದು ಮಧ್ಯಾಹ್ನ 12:17 ಕ್ಕೆ ಅಫ್ಘಾನಿಸ್ತಾನವನ್ನು ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿದೆ. ಇದರ ಪರಿಣಾಮ ಜಮ್ಮು ಮತ್ತು ಕಾಶ್ಮೀರ ಮತ್ತು ದೆಹಲಿ-ಎನ್‌ಸಿಆರ್ ವರೆಗೆ ಇತ್ತು. ಆದರೆ, ಯಾವುದೇ ಜೀವ ಅಥವಾ ಆಸ್ತಿಪಾಸ್ತಿ ನಷ್ಟ ಸಂಭವಿಸಿಲ್ಲ. ರಾಷ್ಟ್ರೀಯ ಭೂಕಂಪನ ಕೇಂದ್ರದ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿಯೂ ಭೂಕಂಪದ ಪರಿಣಾಮ ಕಂಡುಬಂದಿತ್ತು. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಪ್ರಕಾರ, ಭೂಕಂಪವು ಮೇಲ್ಮೈಯಿಂದ 86 ಕಿಲೋಮೀಟರ್ ಕೆಳಗೆ ಸಂಭವಿಸಿದೆ. ಇದರ ಕೇಂದ್ರಬಿಂದು ಅಫ್ಘಾನಿಸ್ತಾನ-ತಜಿಕಿಸ್ತಾನ್ ಗಡಿ ಪ್ರದೇಶದಲ್ಲಿತ್ತು. ಈ ಪ್ರದೇಶವನ್ನು ಭೂಕಂಪಗಳಿಗೆ ಸೂಕ್ಷ್ಮ ವಲಯವೆಂದು ಪರಿಗಣಿಸಲಾಗಿದೆ. ಈ ಪ್ರದೇಶದಲ್ಲಿ ಭೂಕಂಪಗಳು ಸಾಮಾನ್ಯವಾಗಿದೆ.

ಫೆಬ್ರವರಿ 17: ದೆಹಲಿ-ಎನ್‌ಸಿಆರ್ ಜೊತೆ ಬಿಹಾರದಲ್ಲೂ ಭೂಕಂಪ

ಫೆಬ್ರವರಿ 17 ರಂದು ಬೆಳಿಗ್ಗೆ 5:36 ರ ಸುಮಾರಿಗೆ ದೆಹಲಿ-ಎನ್‌ಸಿಆರ್‌ನಲ್ಲಿ ಭೂಕಂಪದ ಅನುಭವವಾಯಿತು. ಎರಡೂವರೆ ಗಂಟೆಗಳ ನಂತರ, ಬೆಳಿಗ್ಗೆ 8 ಗಂಟೆಗೆ, ಬಿಹಾರದ ಸಿವಾನ್‌ನಲ್ಲಿಯೂ ಭೂಕಂಪ ಸಂಭವಿಸಿತ್ತು. ಎರಡೂ ಸ್ಥಳಗಳಲ್ಲಿ ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4 ಎಂದು ಅಳೆಯಲಾಗಿದೆ. ಭೂಕಂಪದ ಕೇಂದ್ರಬಿಂದು ನವದೆಹಲಿಯಲ್ಲಿತ್ತು ಮತ್ತು ಅದರ ಆಳ ಐದು ಕಿಲೋಮೀಟರ್ ಎಂದು ಹೇಳಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಈ ಮಾಹಿತಿಯನ್ನು ನೀಡಿತ್ತು.

ಭೂಕಂಪದ ಬಲವಾದ ಕಂಪನದಿಂದಾಗಿ, ದೆಹಲಿ, ನೋಯ್ಡಾ, ಗ್ರೇಟರ್ ನೋಯ್ಡಾ ಮತ್ತು ಗಾಜಿಯಾಬಾದ್‌ನಲ್ಲಿ ಜನರು ಭಯಭೀತರಾಗಿ ತಮ್ಮ ಮನೆಗಳಿಂದ ಹೊರಬಂದರು.

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್