ಉದ್ಯೋಗಕ್ಕಾಗಿ ಭೂಮಿ ಹಗರಣ: ಡಿಸಿಎಂ ಪಟ್ಟ ಹೋದ ಬೆನ್ನಲ್ಲೇ ತೇಜಸ್ವಿ 8 ತಾಸು ಇ.ಡಿ. ವಿಚಾರಣೆ

Published : Jan 31, 2024, 09:41 AM IST
ಉದ್ಯೋಗಕ್ಕಾಗಿ ಭೂಮಿ ಹಗರಣ: ಡಿಸಿಎಂ ಪಟ್ಟ ಹೋದ ಬೆನ್ನಲ್ಲೇ ತೇಜಸ್ವಿ 8 ತಾಸು ಇ.ಡಿ. ವಿಚಾರಣೆ

ಸಾರಾಂಶ

ವಿಚಾರಣೆಗೆ ಹಾಜರಾಗುವಂತೆ ಜನವರಿ 19ರಂದು ಸಮನ್ಸ್‌ ನೀಡಲಾಗಿದ್ದ ಹಿನ್ನೆಲೆಯಲ್ಲಿ ತೇಜಸ್ವಿ ಮಂಗಳವಾರ ಬೆಳಗ್ಗೆ 11:35ರ ಸುಮಾರಿಗೆ ಇ.ಡಿ. ಕಚೇರಿಗೆ ಹಾಜರಾಗಿ ವಿಚಾರಣೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಟನಾ (ಜನವರಿ 31, 2023): ಉದ್ಯೋಗಕ್ಕಾಗಿ ಭೂಮಿ ಲಂಚ ತೆಗೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ರೈಲ್ವೆ ಸಚಿವ ಹಾಗೂ ಆರ್‌ಜೆಡಿ ನೇತಾರ ಲಾಲು ಪ್ರಸಾದ್‌ ಯಾದವ್‌ ಪುತ್ರ, ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರನ್ನು ಜಾರಿ ನಿರ್ದೇಶನಾಲಯ 8 ತಾಸು ತೀವ್ರ ವಿಚಾರಣೆಗೊಳಪಡಿಸಿದೆ. ತೇಜಸ್ವಿ ಅವರ ಡಿಸಿಎಂ ಪಟ್ಟ ಹೋದ 2 ದಿನದಲ್ಲೇ ಇ.ಡಿ. ವಿಚಾರಣೆ ನಡೆಸಿರುವುದು ಗಮನಾರ್ಹ.

ವಿಚಾರಣೆಗೆ ಹಾಜರಾಗುವಂತೆ ಜನವರಿ 19ರಂದು ಸಮನ್ಸ್‌ ನೀಡಲಾಗಿದ್ದ ಹಿನ್ನೆಲೆಯಲ್ಲಿ ತೇಜಸ್ವಿ ಮಂಗಳವಾರ ಬೆಳಗ್ಗೆ 11:35ರ ಸುಮಾರಿಗೆ ಇ.ಡಿ. ಕಚೇರಿಗೆ ಹಾಜರಾಗಿ ವಿಚಾರಣೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್‌ ಯಾದವ್‌ ಅವರನ್ನು ಇ.ಡಿ. ಸತತ 9 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.

 

'ಕೇವಲ ಗುಜರಾತಿಗಳು ದರೋಡೆಕೋರರಾಗಲು ಸಾಧ್ಯ' ಎಂಬ ಹೇಳಿಕೆ: ಲಾಲೂ ಪುತ್ರನ ವಿರುದ್ಧ ಮಾನಹಾನಿ ಕೇಸ್‌

ಏನಿದು ಹಗರಣ?:
ಲಾಲು ಪ್ರಸಾದ್‌ ಯಾದವ್‌ ಅವರು 2004-2009ರಲ್ಲಿ ರೈಲ್ವೆ ಸಚಿವರಾಗಿದ್ದ ವೇಳೆ ರೈಲ್ವೆಯಲ್ಲಿ ಉದ್ಯೋಗ ನೀಡಲು ಹಲವರಿಂದ ಲಂಚ ರೂಪದಲ್ಲಿ ಭೂಮಿಯನ್ನು ಪಡೆದಿದ್ದಾರೆ. ಈ ಭೂಮಿ ಲಾಲು ಪತ್ನಿ ರಾಬ್ಡಿ, ಪುತ್ರ ತೇಜಸ್ವಿಗೂ ಸಂದಾಯವಾಗಿದೆ ಎಂಬ ಪ್ರಕರಣವನ್ನು ಇ.ಡಿ. ತನಿಖೆ ಮಾಡುತ್ತಿದೆ.

Bihar Politics: ನಿತೀಶ್ ನಡೆಯಿಂದ ಕಂಗಾಲಾಯ್ತು ಆರ್‌ಜೆಡಿ..! ಹೇಗಿತ್ತು ಜಂಪಿಂಗ್ ಸ್ಟಾರ್ ಪೊಲಿಟಿಕಲ್ ಗೇಮ್..?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಷ್ಟ್ರಪತಿಗಳು ಪದಕ ನೀಡುತ್ತಿದ್ದಂತೆ ಕೊರಳಿನಿಂದ ಕಿತ್ತೆಸೆದ ಬಾಲಕ! ವೈರಲ್ ವಿಡಿಯೋ ಹಿಂದಿನ ಸತ್ಯವೇನು?
ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ