ಆಸ್ತಿ ಜಪ್ತಿಯಾದ ಟೆನ್ಶನ್‌ನಲ್ಲಿದ್ದ ಶಶಿಕಲಾಗೆ ಮತ್ತೊಂದು ಶಾಕ್!

Published : Oct 08, 2020, 03:56 PM IST
ಆಸ್ತಿ ಜಪ್ತಿಯಾದ ಟೆನ್ಶನ್‌ನಲ್ಲಿದ್ದ ಶಶಿಕಲಾಗೆ ಮತ್ತೊಂದು ಶಾಕ್!

ಸಾರಾಂಶ

ಶಶಿಕಲಾ 2000 ಕೋಟಿ ರು. ಆಸ್ತಿಯನ್ನು ಆದಾಯ ತೆರಿಗೆ ಇಲಾಖೆ ಜಪ್ತಿ| ದಿ. ಜಯಲಲಿತಾ ಆಪ್ತೆ ಶಶಿಕಲಾಗೆ ರಾಜಕಾರಣದಲ್ಲೂ ಹಿನ್ನಡೆ| ಮಹತ್ವದ ಘೋಷಣೆ ಮಾಡಿದ ಪನ್ನೀರ್ ಸೆಲ್ವಂ

ಚೆನ್ನೈ(ಅ.08): 2000 ಕೋಟಿ ರು. ಆಸ್ತಿಯನ್ನು ಆದಾಯ ತೆರಿಗೆ ಇಲಾಖೆ ಜಪ್ತಿ ಮಾಡಿದ ಬೆನ್ನಲ್ಲೇ ದಿ. ಜಯಲಲಿತಾ ಆಪ್ತೆ ಶಶಿಕಲಾಗೆ ರಾಜಕಾರಣದಲ್ಲೂ ಹಿನ್ನಡೆಯಾಗಿದೆ.

2021ರಲ್ಲಿ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಹಾಲಿ ಸಿಎಂ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ. ಸ್ವತಃ ಉಪಮುಖ್ಯಮಂತ್ರಿ ಪನ್ನೀರ್‌ ಸೆಲ್ವಂ ಅವರೇ ಈ ಘೋಷಣೆ ಮಾಡಿದ್ದಾರೆ.

ಈ ಮೂಲಕ ಮುಖ್ಯಮಂತ್ರಿ ಹುದ್ದೆ ವಿಚಾರವಾಗಿ ಪನ್ನೀರ್‌ಸೆಲ್ವಂ ಮತ್ತು ಕೆ.ಪಳನಿಸ್ವಾಮಿ ಅವರ ನಡುವಿದ್ದ ಭಿನ್ನಾಭಿಪ್ರಾಯಕ್ಕೆ ತೆರೆ ಬಿದ್ದಿದೆ. ಸದ್ಯ ಉಭಯ ನಾಯಕರ ನಡುವಣ ಭಿನ್ನಾಭಿಪ್ರಾಯವನ್ನು ಬಗೆಹರಿಸಿಕೊಳ್ಳಲಾಗಿದ್ದು, ರಾಜೀ ಸೂತ್ರವನ್ನು ರಚಿಸಲಾಗಿದೆ.

ಅದರನ್ವಯ ಪಕ್ಷದ ಚಟುವಟಿಕೆ ಮೇಲೆ ನಿಗಾ ಇಡಲು 11 ಮಂದಿ ಸದಸ್ಯರ ಸಮಿತಿಯನ್ನು ರಚಿಸಲಾಗಿದೆ. ಇದರಲ್ಲಿ ಪಳನಿಸ್ವಾಮಿ ಮತ್ತು ಪನ್ನೀರ್‌ ಸೆಲ್ವಂ ಇಬ್ಬರ ಬೆಂಬಲಿಗರೂ ಇದ್ದಾರೆ.

ಶಶಿಕಲಾ ಆಸ್ತಿ ಮುಟ್ಟುಗೋಲು: 

ಜನವರಿಯಲ್ಲಿ ಜೈಲಿನಿಂದ ಹೊರಬಂದು ತಮಿಳುನಾಡು ರಾಜಕಾರಣದಲ್ಲಿ ‘ಕಿಂಗ್‌ಮೇಕರ್‌’ ಆಗುವ ತವಕದಲ್ಲಿರುವ ತಮಿಳುನಾಡಿನ ದಿವಂಗತ ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತ ಸ್ನೇಹಿತೆ ಶಶಿಕಲಾ ನಟರಾಜನ್‌ಗೆ ಭಾರಿ ಹಿನ್ನಡೆಯಾಗಿದೆ. ಶಶಿಕಲಾ, ಅವರ ಬಂಧುಗಳಾದ ಇಳವರಸಿ ಹಾಗೂ ವಿ.ಎನ್‌. ಸುಧಾಕರನ್‌ಗೆ ಸೇರಿದ ಬರೋಬ್ಬರಿ 2000 ಕೋಟಿ ರು. ಮೌಲ್ಯದ ಆಸ್ತಿಯನ್ನು ಆದಾಯ ತೆರಿಗೆ ಇಲಾಖೆ ಮುಟ್ಟುಗೋಲು ಹಾಕಿಕೊಂಡಿದೆ.

ಸದ್ಯ ಈ ಮೂವರೂ ಬೆಂಗಳೂರು ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆಯ ಬೇನಾಮಿ ವ್ಯವಹಾರ ನಿರ್ಬಂಧ ವಿಭಾಗ ಆಸ್ತಿಗಳನ್ನು ಜಪ್ತಿ ಮಾಡಿದೆ. ಮುಟ್ಟುಗೋಲು ಹಾಕಿಕೊಳ್ಳಲಾದ ಆಸ್ತಿಗಳು ತಮಿಳುನಾಡಿನ ಸಿರುಥವೂರು ಹಾಗೂ ಕೊಡನಾಡುಗಳಲ್ಲಿ ಇವೆ ಎಂದು ಆದಾಯ ತೆರಿಗೆ ಹೇಳಿಕೆಯಲ್ಲಿ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!