ಭಾಗವತ್‌ ‘ಹಿಂದೂ ಹೇಳಿಕೆ’ಗೆ ಒವೈಸಿ, ದಿಗ್ವಿ, ಮಾಯಾ ಕಿಡಿ!

Published : Jul 06, 2021, 07:44 AM IST
ಭಾಗವತ್‌ ‘ಹಿಂದೂ ಹೇಳಿಕೆ’ಗೆ ಒವೈಸಿ, ದಿಗ್ವಿ, ಮಾಯಾ ಕಿಡಿ!

ಸಾರಾಂಶ

* ಬಿಜೆಪಿಗರಿಗೆ ಮೊದಲು ಭಾಗವತ್‌ ಬುದ್ಧಿ ಹೇಳಲಿ * ಅವರ ಮಾತಿನಲ್ಲೂ ಕೃತಿಯಲ್ಲೂ ವ್ಯತ್ಯಾಸ: ಆಕ್ರೋಶ * ಭಾಗವತ್‌ ‘ಹಿಂದೂ ಹೇಳಿಕೆ’ಗೆ ಒವೈಸಿ, ದಿಗ್ವಿ, ಮಾಯಾ ಕಿಡಿ

 ನವದೆಹಲಿ(ಜು.06): ‘ಹಿಂದೂಗಳಿರಲಿ, ಮುಸ್ಲಿಮರಿರಲಿ ಭಾರತೀಯರ ಎಲ್ಲ ಡಿಎನ್‌ಎ (ವಂಶವಾಹಿ) ಒಂದೇ. ಭಾರತೀಯರಿಗೆಲ್ಲ ಗೋವು ದೇವತಾ ಸ್ವರೂಪಿ. ಹಾಗಂತ ಗೋವು ಸಾಗಣೆ ಮಾಡುವವರನ್ನು ಬಡಿದು ಕೊಲ್ಲುವುದು ತಪ್ಪು. ಆಂಥವರು ಹಿಂದೂ ವಿರೋಧಿಗಳು’ ಎಂದು ನೀಡಿದ ಹೇಳಿಕೆಯು ಕಾಂಗ್ರೆಸ್‌, ಮಜ್ಲಿಸ್‌ ಪಕ್ಷ ಹಾಗೂ ಬಿಎಸ್‌ಪಿಯ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಕಾಂಗ್ರೆಸ್‌ ಮುಖಂಡ ದಿಗ್ವಿಜಯ ಸಿಂಗ್‌ ಮಾತನಾಡಿ, ‘ಭಾಗವತ್‌ ಅವರ ಮಾತು ಹಾಗೂ ಕೃತಿಗಳಲ್ಲಿ ವ್ಯತ್ಯಾಸವಿದೆ. ಮುಗ್ಧ ಮುಸ್ಲಿಮರ ಮೇಲೆ ದೌರ್ಜನ್ಯ ನಡೆಸುವ ಬಿಜೆಪಿ ನಾಯಕರಿಗೆ ಈ ಮಾತನ್ನು ಭಾಗವತ್‌ ಹೇಳಬೇಕು. ನಿಮ್ಮ ಮಾತನ್ನು ಕೃತಿಗೆ ತರಬೇಕು ಎಂದರೆ ದೌರ್ಜನ್ಯ ಎಸಗುವ ಬಿಜೆಪಿಗರನ್ನು ವಜಾ ಮಾಡಬೇಕು’ ಎಂದು ಸವಾಲು ಹಾಕಿದ್ದಾರೆ.

ಮಜ್ಲಿಸ್‌ ಪಕ್ಷದ ನಾಯಕ ಅಸಾದುದ್ದೀನ್‌ ಒವೈಸಿ ಪ್ರತಿಕ್ರಿಯೆ ನೀಡಿ, ‘ಬಡಿದು ಸಾಯಿಸುವವರಿಗೆ ಅದು ಆಕಳೋ ಅಥವಾ ಎಮ್ಮೆಯೋ ಎಂದು ಗೊತ್ತಿರುವುದಿಲ್ಲ. ಬರೀ ಅಖ್ಲಾಕ್‌, ಜುನೈದ್‌, ಅಲೀಮುದ್ದೀನ್‌ ಎಂಬ ಹೆಸರುಗಳು ಮಾತ್ರ ಅರ್ಥವಾಗುತ್ತವೆ. ಮುಸ್ಲಿಮರನ್ನನು ಬಡಿದು ಕೊಲ್ಲುವ ದ್ವೇಷ ಉತ್ಪಾದನೆಯೇ ಗೋಡ್ಸೆ ಹಿಂದುತ್ವ. ಇದಕ್ಕೆ ಸರ್ಕಾರದ ರಕ್ಷಣೆ ಇದೆ’ ಎಂದಿದ್ದಾರೆ.

ಬಿಎಸ್‌ಪಿ ನಾಯಕಿ ಮಾಯಾವತಿ ಮಾತನಾಡಿ, ‘ಭಾಗವತ್‌ ಅವರ ಹೇಳಿಕೆಯು ‘ಕೇವಲ್ಲಿ ಬಾಯಲ್ಲಿ ರಾಮನಾಮ. ಕಂಕುಳಲ್ಲಿ ಚೂರಿ’ ಎಂಬಂತಿದೆ’ ಎಂದು ವ್ಯಂಗ್ಯವಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈಲು ಟಿಕೆಟ್ ಬುಕಿಂಗ್‌ನಿಂದ ಪ್ರಯಾಣ , ಹಿರಿಯ ನಾಗರೀಕರಿಗಿದೆ ಭರ್ಜರಿ ವಿನಾಯಿತಿ
ಕೇರಳದ ಮೊದಲ ಜೆನ್‌ಝಿ ಪೋಸ್ಟ್ ಆಫೀಸ್ ಆರಂಭ, ಟ್ರೆಂಡಿ ಕಚೇರಿಗೆ ಮನಸೋತ ಯುವ ಸಮೂಹ