ನೇತಾಜಿ ಪರಂಪರೆ ಶಾಶ್ವತ; ದೀದಿ ವೋಟ್‌ಬ್ಯಾಂಕ್ ಪಾಲಿಟಿಕ್ಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ!

Published : Feb 19, 2021, 04:13 PM IST
ನೇತಾಜಿ ಪರಂಪರೆ ಶಾಶ್ವತ; ದೀದಿ ವೋಟ್‌ಬ್ಯಾಂಕ್ ಪಾಲಿಟಿಕ್ಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ!

ಸಾರಾಂಶ

ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಅಮಿತ್ ಶಾ, ಮತ್ತೆ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೀಗ ನೇತಾಜಿ ಪರಂಪರೆ ಅಳಿಸಿಹಾಕುವ ಯತ್ನ ಕುರಿತು ದೀದಿ ವಿರುದ್ಧ ಶಾ ಹರಿಹಾಯ್ದಿದ್ದಾರೆ. ಶೌರ್ಯಾಂಜಲಿ ಕಾರ್ಯಕ್ರಮದಲ್ಲಿ ಅಮತ್ ಶಾ ಭಾಷಣ ಹೈಲೈಟ್ಸ್ ಇಲ್ಲಿದೆ.

ಕೋಲ್ಕತ್ತಾ(ಫೆ.19): ಕ್ರಾಂತಿಕಾರಿಗಳಿಗೆ ಗೌರವ ನಮನ ಶೌರ್ಯಾಂಜಲಿ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂಗಾಳದ ಭವ್ಯ ಪರಂಪರೆ ಅಳಿಸಿಹಾಕುವ ಯತ್ನ ನಡೆಸುತ್ತಿರುವ ಮಮತಾ ಬ್ಯಾನರ್ಜಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.  ನೇತಾಜಿ ಸುಭಾಷ್ ಚಂದ್ರ ಬೋಸ್ ಕೀರ್ತಿ ಪತಾಕೆಯನ್ನು ಕಿತ್ತೊಗೆಯುವ ಪ್ರಯತ್ನ ಮಾಡಲಾಗಿದೆ. ಆದರೆ ಅದು ಸಾಧ್ಯವಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.

ಅಮಿತ್ ಶಾಗೆ ಕಪ್ಪು ಧ್ವಜ ತೋರಿಸಿದ ಮಹಿಳೆಯರು: ಇದು ದೀದಿ ಕೆಲಸ ಎಂದ ಶಾ

ಸ್ವಾತಂತ್ರ್ಯ ವೀರ, ದೇಶಭಕ್ತ ಸುಭಾಷ್ ಚಂದ್ರಬೋಸ್ ಅವರ ಕೀರ್ತಿಯನ್ನು ಮರೆಮಾಚುವ, ನೇತಾಜಿಯನ್ನು ಮರೆತು ಬಿಡುವ ಪ್ರಯತ್ನಗಳು ನಡೆದಿದೆ. ಆದರೆ ನೇತಾಜಿ ಸೇವೆ ಅಜರಾಮರವಾಗಿದೆ. ಅವರ ಕೂಡುಗೆ, ಮಾರ್ಗದರ್ಶಗಳು ಎಲ್ಲರಿಗೂ ದಾರಿದೀಪವಾಗಿದೆ. ಯಾವುದೇ ಕಾರಣಕ್ಕೂ ನೇತಾಜಿ ಪರಂಪರೆ ಅಳಿಸಲು ಸಾಧ್ಯವಿಲ್ಲ ಎಂದು ಶಾ ಹೇಳಿದ್ದಾರೆ

ಕೇಂದ್ರ ಸರ್ಕಾರ ನೇತಾಜಿ 125ನೇ ಜಯಂತಿ ಆಚರಣೆಯನ್ನು ವರ್ಷವಿಡಿ ಆಚರಿಸುತ್ತಿದೆ. ಈಗಾಗಲೇ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪಶ್ಚಿಮ ಬಂಗಾಳದ ಪರಂಪರೆಯನ್ನ ಎತ್ತಿ ಹಿಡಿಯುವ ಹಾಗೂ ಬಂಗಾಳ ಭವಿಷ್ಯವನ್ನು ಉಜ್ವಲಗೊಳಿಸುವ ಕಾರ್ಯವನ್ನು ಕೇಂದ್ರ ಸರ್ಕಾರ ಮಾಡಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ
ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ