
ನವದೆಹಲಿ(ಏ.28): ಕೊರೋನಾ ನಡುವೆ ಪಂಚ ರಾಜ್ಯ ಚುನಾವಣೆ ನಡೆದಿದೆ. ಇದೀಗ ಎಲ್ಲರ ಚಿತ್ತ ಕೊರೋನಾ ಪ್ರಕರಣ ಸಂಖ್ಯೆಯ ಜೊತೆಗೆ ಮತ ಎಣಿಕೆ ಮೇಲೆ ನೆಟ್ಟಿದೆ. ಮೇ.02 ರಂದು ಮತ ಎಣಿಕೆ ನಡೆಯಲಿದ್ದು ಅಭ್ಯರ್ಥಿಗಳ ಭವಿಷ್ಯ ಹೊರಬೀಳಲಿದೆ. ಮೇ.2ರಂದು ನಡೆಯಲಿರುವ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶಿಸಲು ಅಭ್ಯರ್ಥಿಗಳು ಹಾಗೂ ಎಜೆಂಟ್ಗಳಿಗೆ ಚುನಾವಣಾ ಆಯೋಗ ಕಂಡೀಷನ್ ಹಾಕಿದೆ.
ಕೊರೋನಾ ಅಬ್ಬರ: ಚುನಾವಣೆ ಫಲಿತಾಂಶದ ಬಳಿಕ ವಿಜಯೋತ್ಸವ ರದ್ದು!
ಮತ ಎಣಿಕೆ ಕೇಂದ್ರ ಪ್ರವೇಶಿಸಲು ಕೊರೋನಾ ನೆಗಟೀವ್ ರಿಪೋರ್ಟ್ ಅಥವಾ ಕೊರೋನಾ ಲಸಿಕೆ 2 ಡೋಸ್ ತೆಗೆದುಕೊಂಡ ಪ್ರಮಾಣ ಪತ್ರ ಇರಲೇಬೇಕು ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಇನ್ನು ಮತ ಎಣಿಕೆ ಹೊರಗಡೆ ಜನ ಸೇರುವುದು, ಬೆಂಬಲಿಗರು ಸೇರುವುದನ್ನು ನಿಷೇಧಿಸಲಾಗಿದೆ.
ಕೊರೋನಾ ನೆಗಟೀವ್ ರಿಪೋರ್ಟ್ 48 ಗಂಟೆ ಮೀರಿರಬಾರದು ಎಂದು ಆಯೋಗ ಹೇಳಿದೆ. ಅಭ್ಯರ್ಥಿಗಳಿಗೆ ಗೆಲುವಿನ ಸಂಭ್ರಮಾಚರಣೆಗೂ ಬ್ರೇಕ್ ಹಾಕಲಾಗಿದೆ. ಗೆಲವಿನ ಹೆಸರಲ್ಲಿ ಯಾರೂ ಸೇರುವಂತಿಲ್ಲ. 3 ದಿನ ಮುಂಚಿತವಾಗಿ ಕೌಂಟಿಂಗ್ ಎಜೆಂಟ್ ಕುರಿತ ಮಾಹಿಯನ್ನು ಚುನಾವಣಾ ಆಯೋಗಕ್ಕೆ ನೀಡಬೇಕಿದೆ.
ಚುನಾವಣಾ ಆಯೋಗದ ವಿರುದ್ಧ ಕೊಲೆ ಕೇಸ್ - ನ್ಯಾಯಾಲಯ
ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಹಾಗೂ ಕೇಂದ್ರಾಡಳಿದ ಪ್ರದೇಶ ಪುದುಚೇರಿಗೆ ಚುನಾವಣೆ ನಡೆದಿದೆ. ಪಶ್ಚಿಮ ಬಂಗಾಳ 8ನೇ ಹಾಗೂ ಅಂತಿಮ ಹಂತದ ಮತಾನದ ನಾಳೆ(ಏ.29) ನಡಯೆಲಿದೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ