ನಮ್ಮನ್ನು ಕೀಳಾಗಿ ಕಾಣಬೇಡಿ: ಮಮತಾಗೆ ಆಯೋಗ ಚಾಟಿ

Published : Mar 18, 2021, 08:06 AM ISTUpdated : Mar 18, 2021, 08:46 AM IST
ನಮ್ಮನ್ನು ಕೀಳಾಗಿ ಕಾಣಬೇಡಿ: ಮಮತಾಗೆ ಆಯೋಗ ಚಾಟಿ

ಸಾರಾಂಶ

ನಮ್ಮನ್ನು ಕೀಳಾಗಿ ಕಾಣಬೇಡಿ: ಮಮತಾಗೆ ಆಯೋಗ ಚಾಟಿ| ಚುನಾವಣಾ ಆಯೋಗ ಆಡಳಿತ ಪಕ್ಷದ ಕೈಗೊಂಬೆಯಾಗಿದೆ ಎಂಬ ಆರೋಪ

ನವದೆಹಲಿ(ಮಾ.18): ಚುನಾವಣಾ ಆಯೋಗ ಆಡಳಿತ ಪಕ್ಷದ ಕೈಗೊಂಬೆಯಾಗಿದೆ ಎಂದು ಆರೋಪಿಸಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಚುನಾವಣಾ ಆಯೋಗ ಕಟು ಶಬ್ಧಗಳಲ್ಲಿ ತಿರುಗೇಟು ನೀಡಿದೆ.

5 ಲಕ್ಷ ಉದ್ಯೋಗ, ಉಚಿತ ರೇಶನ್; ಬಂಗಾಳ ಚುನಾವಣೆಗೆ ಮಮತಾ ಪ್ರಣಾಳಿಕೆ

ಈ ಕುರಿತು ಮಮತಾ ಬ್ಯಾನರ್ಜಿ ಅವರಿಗೆ ಪತ್ರ ಬರೆದಿರುವ ಪಶ್ಚಿಮ ಬಂಗಾಳದ ಉಪ ಚುನಾವಣಾ ಆಯುಕ್ತ ಸಂದೀಪ್‌ ಜೈನ್‌, ಪುನರಾವರ್ತಿತ ಆರೋಪ ಮತ್ತು ಅವಮಾನಿಸುವ ಹೇಳಿಕೆಯ ಮೂಲಕ ಸಂಸ್ಥೆಯನ್ನು ಕೀಳಾಗಿ ಕಾಣುವ ಯತ್ನಮಾಡಬೇಡಿ. ನಾವು ರೀತಿಯ ಆರೋಪಗಳಿಗೆ ಹೆಚ್ಚಿನ ಮಹತ್ವ ನೀಡುವುದಿಲ್ಲ. ಚುನಾವಣಾ ಆಯೋಗ ರಾಜಕೀಯ ಪಕ್ಷಗಳ ಜೊತೆ ಅಂತರವನ್ನು ಕಾಯ್ದುಕೊಂಡಿದೆ. ರಾಜಕೀಯ ಪಕ್ಷಗಳ ಆರೋಪಗಳಿಗೆಲ್ಲಾ ಚುನಾವಣಾ ಆಯೋಗ ಕಿವಿಗೊಡಬೇಕಾಗಿಲ್ಲ ಎಂದು ಹೇಳಿದ್ದಾರೆ.

ಮಾರ್ಚ್ 31ರಿಂದ ಸ್ಪೆಷಲ್ ಟ್ರೈನ್ಗಳು ಕ್ಯಾನ್ಸಲ್? ರೈಲ್ವೇ ಇಲಾಖೆ ಹೇಳಿದ್ದಿಷ್ಟು

ಮಂಗಳವಾರ ರಾರ‍ಯಲಿಯೊಂದರಲ್ಲಿ ಮಾತನಾಡಿದ್ದ ಮಮತಾ ಬ್ಯಾನರ್ಜಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಟಿಎಂಸಿ ಮುಖಂಡರನ್ನು ಹಣಿಯಲು ಸಂಚು ರೂಪಿಸಿದ್ದಾರೆ. ಅವರ ತಾಳಕ್ಕೆ ತಕ್ಕಂತೆ ಚುನಾವಣಾ ಆಯೋಗ ಕುಣಿಯುತ್ತಿದೆಯೇ ಎಂದು ತಿಳಿಯಲು ನಾನು ಬಯಸುತ್ತೇನೆ ಎಂದು ಹೇಳಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!