ಆಂಧ್ರ ಪ್ರದೇಶ ಸೇರಿ 4 ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ!

Published : Mar 16, 2024, 03:53 PM ISTUpdated : Mar 16, 2024, 04:14 PM IST
 ಆಂಧ್ರ ಪ್ರದೇಶ ಸೇರಿ 4 ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ!

ಸಾರಾಂಶ

ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯೊಂದಿಗೆ 4 ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕವೂ ಘೋಷಣೆಯಾಗಿದೆ. 

ನವದೆಹಲಿ(ಮಾ.16) ಲೋಕಸಭಾ ಚುನಾವಣೆ ಜೊತೆಗೆ ಆರು ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಆಂಧ್ರ ಪ್ರದೇಶ, ಸಿಕ್ಕಿಮ್, ಅರುಣಾಚಲ ಪ್ರದೇಶ ಹಾಗೂ ಒಡಿಶಾ ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ಮೇ 13ರಂದು ಆಂಧ್ರ ಪ್ರದೇಶ ಹಾಗೂ ಒಡಿಶಾ ವಿಧಾನಸಭಾ ಚುನಾವಣೆ ನಡೆಯಲಿದೆ. ಸಿಕ್ಕಿಂ ಹಾಗೂ ಅರುಣಾಚಲ  ವಿಧಾನಸಭಾ ಚುನಾವಣೆ ಮತದಾನ ಏಪ್ರಿಲ್ 19 ರಂದು ನಡೆಯಲಿದೆ. ಫಲಿತಾಂಶ ಜೂನ್ 4 ರಂದು ಘೋಷಣೆಯಾಗಲಿದೆ.

ದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಚುನಾವಣಾ ಆಯೋಗ ಮುಖ್ಯಸ್ಥ ರಾಜೀವ್ ಕುಮಾರ್ ಮತದಾನ ದಿನಾಂಕ ಘೋಷಣೆ ಮಾಡಿದ್ದಾರೆ. ಜೂನ್‌ 16ಕ್ಕೆ ಈಗಿನ ಲೋಕಸಭೆಯ ಅವಧಿ ಮುಕ್ತಾಯಗೊಳ್ಳಲಿದೆ. ಅದಕ್ಕೂ ಮುನ್ನ ಹೊಸ ಲೋಕಸಭೆ ಅಸ್ತಿತ್ವಕ್ಕೆ ಬರಬೇಕಿದೆ. ಇನ್ನು ಆಂಧ್ರಪ್ರದೇಶ, ಸಿಕ್ಕಿಮ್, ಒಡಿಶಾ ಹಾಗೂ ಅರುಣಾಚಲ ಪ್ರದೇಶ ರಾಜ್ಯಗಳ ವಿಧಾನಸಭೆ ಅವಧಿ ಕೂಡ ಜೂನ್‌ನಲ್ಲಿ ಮುಕ್ತಾಯಗೊಳ್ಳಲಿದೆ. ಹೀಗಾಗಿ ಈ ರಾಜ್ಯಗಳ ವಿಧಾನಸಭೆಗೂ ಲೋಕಸಭೆಯ ಜೊತೆಗೇ ಚುನಾವಣೆ ನಡೆಯಲಿದೆ.

ಲೋಕಸಭಾ ಚುನಾವಣೆಯ ವೇಳೆಯೇ ಸುರಪುರ ವಿಧಾನಸಭಾ ಕ್ಷೇತ್ರಕ್ಕೂ ಉಪ ಚುನಾವಣೆ

ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ
ಗೆಜೆಟ್ ಅಧಿಸೂಚನೆ: ಎಪ್ರಿಲ್ 18
ನಾಮಪತ್ರ ಸಲ್ಲಿಸಲು ಕೊನೆಯ ದಿನ : ಎಪ್ರಿಲ್ 25
ನಾಮಪತ್ರ ಪರಿಶೀಲನೆ: 26 ಎಪ್ರಿಲ್
ನಾಮಪತ್ರ ಹಿಂಪಡೆಯಲು ಕೊನೆ ದಿನ: ಎಪ್ರಿಲ್ 29
ಮತದಾನ: ಮೇ 13
ಫಲಿತಾಂಶ ಘೋಷಣೆ: ಜೂನ್ 04

ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆ
ಗೆಜೆಟ್ ಅಧಿಸೂಚನೆ: ಮಾರ್ಚ್ 20
ನಾಮಪತ್ರ ಸಲ್ಲಿಸಲು ಕೊನೆಯ ದಿನ :  ಮಾರ್ಚ್ 27
ನಾಮಪತ್ರ ಪರಿಶೀಲನೆ:  28 ಮಾರ್ಚ್
ನಾಮಪತ್ರ ಹಿಂಪಡೆಯಲು ಕೊನೆ ದಿನ:  30 ಮಾರ್ಚ್
ಮತದಾನ:  19 ಎಪ್ರಿಲ್
ಫಲಿತಾಂಶ ಘೋಷಣೆ:  ಜೂನ್ 4

Breaking: ಲೋಕಸಭೆಗೆ ಏಪ್ರಿಲ್ 19 ರಿಂದ 7 ಹಂತಗಳಲ್ಲಿ ಮತದಾನ, ಜೂನ್‌ 4 ರಂದು ಫಲಿತಾಂಶ

ಸಿಕ್ಕಿಂ ವಿಧಾನಸಭಾ ಚುನಾವಣೆ
ಗೆಜೆಟ್ ಅಧಿಸೂಚನೆ: ಮಾರ್ಚ್ 20
ನಾಮಪತ್ರ ಸಲ್ಲಿಸಲು ಕೊನೆಯ ದಿನ :  ಮಾರ್ಚ್ 27
ನಾಮಪತ್ರ ಪರಿಶೀಲನೆ:   ಮಾರ್ಚ್ 28
ನಾಮಪತ್ರ ಹಿಂಪಡೆಯಲು ಕೊನೆ ದಿನ:   ಮಾರ್ಚ್ 30
ಮತದಾನ:  ಎಪ್ರಿಲ್ 19
ಫಲಿತಾಂಶ ಘೋಷಣೆ:  ಜೂನ್ 04

ಒಡಿಶಾ ವಿಧಾನಸಭಾ ಚುನಾವಣೆ
ಗೆಜೆಟ್ ಅಧಿಸೂಚನೆ: ಎಪ್ರಿಲ್ 18
ನಾಮಪತ್ರ ಸಲ್ಲಿಸಲು ಕೊನೆಯ ದಿನ : ಎಪ್ರಿಲ್ 25
ನಾಮಪತ್ರ ಪರಿಶೀಲನೆ: 26 ಎಪ್ರಿಲ್
ನಾಮಪತ್ರ ಹಿಂಪಡೆಯಲು ಕೊನೆ ದಿನ: ಎಪ್ರಿಲ್ 29
ಮತದಾನ: ಮೇ 13
ಫಲಿತಾಂಶ ಘೋಷಣೆ: ಜೂನ್ 04

ಚುನಾವಣಾ ದಿನಾಂಕ ಮೊದಲು ಮತದಾರರು, ಸುಗಮ ಮತದಾನಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ವಿವರಣೆ ನೀಡಲಾಗಿತ್ತು ಈ ಬಾರಿ ಫೋನ್ ಪೇ, ಗೂಗಲ್ ಪೇ ಸೇರಿದಂತೆ ಎಲ್ಲಾ ರೀತಿಯ ಯುಪಿಐ ವಹಿವಾಟು, ಬ್ಯಾಂಕ್ ಟ್ರಾನ್ಸಾಕ್ಷನ್ ಮೇಲೂ ಕಣ್ಮಿಡಲಾಗುವುದು ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್