
ಕೋಲ್ಕತಾ(ಮೇ.22): ‘ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಷ್ಟು ಹಣಕ್ಕೆ ತಮ್ಮನ್ನು ಮಾರಿಕೊಂಡಿದ್ದಾರೆ. ಅವರ ಏಟ್ 10 ಲಕ್ಷ ರುಪಾಯಿಯೇ?’ ಎಂದು ಪ್ರಶ್ನಿಸಿದ್ದ ಬಿಜೆಪಿ ಲೋಕಸಭಾ ಅಭ್ಯರ್ಥಿಯೂ ಆಗಿರುವ ಮಾಜಿ ನ್ಯಾಯಮೂರ್ತಿ ಅಭಿಜಿತ್ ಗಂಗೂಲಿಗೆ ಚುನಾವಣಾ ಆಯೋಗವು 24 ಗಂಟೆಗಳ ಕಾಲ ಚುನಾವಣಾ ಪ್ರಚಾರಕ್ಕೆ ನಿಷೇಧ ಹೇರಿದೆ.
ಅಭಿಜಿತ್ ಅವರ ಹೇಳಿಕೆ ಕೀಳು ಮಟ್ಟದ ರಾಜಕೀಯ ಎಂಬುದಾಗಿ ಬಣ್ಣಿಸಿರುವ ಚುನಾವಣಾ ಆಯೋಗ, ಮಂಗಳವಾರ ಸಂಜೆ 5 ಗಂಟೆಯಿಂದ 24 ಗಂಟೆಗಳ ಕಾಲ ಚುನಾವಣಾ ಪ್ರಚಾರ ನಡೆಸದಂತೆ ಆದೇಶಿಸಿದೆ. ಜೊತೆಗೆ ಇನ್ನು ಮುಂದೆ ಈ ರೀತಿಯ ವಿಚ್ಛಿದ್ರಕಾರಿ ಹೇಳಿಕೆಗಳನ್ನು ನೀಡದಂತೆ ಎಚ್ಚರಿಕೆ ನೀಡಿದೆ.
ಪಶ್ಚಿಮ ಬಂಗಾಳ ಸಿಎಂ ಮಮತಾ ರೇಟ್ ಎಷ್ಟು ಎಂದ ನ್ಯಾಯಮೂರ್ತಿ ಅಭಿಜಿತ್ಗೆ ನೋಟಿಸ್
ಅಭಿಜಿತ್ ಗಂಗೂಲಿ ತಮ್ಲುಕ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಟಿಎಂಸಿ ಸತತವಾಗಿ ಅವರ ಮೇಲೆ ಸವಾಲು ಎಸೆದ ಹಿನ್ನೆಲೆಯಲ್ಲಿ ತಮ್ಮ ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯ ಪ್ರವೇಶಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ