ಕೊರೋನಾ ಅಬ್ಬರ: ಚುನಾವಣೆ ಫಲಿತಾಂಶದ ಬಳಿಕ ವಿಜಯೋತ್ಸವ ರದ್ದು!

Published : Apr 27, 2021, 11:36 AM ISTUpdated : Apr 27, 2021, 01:22 PM IST
ಕೊರೋನಾ ಅಬ್ಬರ: ಚುನಾವಣೆ ಫಲಿತಾಂಶದ ಬಳಿಕ ವಿಜಯೋತ್ಸವ ರದ್ದು!

ಸಾರಾಂಶ

ಚುನಾವಣೆ ಫಲಿತಾಂಶದ ಬಳಿಕ ವಿಜಯೋತ್ಸವ ರದ್ದು| ವಿಜಯೋತ್ಸವಗಳನ್ನು ರದ್ದು ಮಾಡಿ ಆದೇಶ ಹೊರಡಿಸಿದ  ಚುನಾವಣಾ ಆಯೋಗ| ಉಪ ಚುನಾವಣೆ ಫಲಿತಾಂಶ ಅಥವಾ ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ವಿಜಯೋತ್ಸವ ರದ್ದು

ನವದೆಹಲಿ(ಏ.27): ದೇಶದಲ್ಲಿ ಕೊರೋನಾತಂಕ ನಡುವೆಯೇ ಪಂಚ ರಾಜ್ಯ ಚುನಾವಣೆ ನಡೆದಿದೆ. ಹೀಗಿರುವಾಗ ಮೇ. 2ರಂದು ಹೊರ ಬೀಳಲಿರುವ ಈ ಚುನಾವಣೆಯ ಫಲಿತಾಂಶ ಇಡೀ ದೇಶವನ್ನೇ ಕಾತುರರನ್ನಾಗಿಸಿದೆ. ಆದರೀಗ ಈ ಫಲಿತಾಂಶದ ಬಗ್ಗೆ ಚುನಾವಣಾ ಆಯೋಗ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದ್ದು, ಚುನಾವಣೆ ಫಲಿತಾಂಶದ ಬಳಿಕ ವಿಜಯೋತ್ಸವ ರದ್ದುಗೊಳಿಸಿದೆ.

ಚುನಾವಣಾ ಆಯೋಗದ ವಿರುದ್ಧ ಕೊಲೆ ಕೇಸ್ - ನ್ಯಾಯಾಲಯ

ಹೌದು ನಿನ್ನೆ, ಸೋಮವಾರವಷ್ಟೇ ಮದ್ರಾಸ್‌ ಹೈಕೋರ್ಟ್‌ ಚುನಾವಣಾ ಆಯೋಗದ ವಿರುದ್ಧ ಕೆಂಡಾಮಂಡಲಗೊಂಡಿದೆ. ಎರಡನೇ ಅಲೆ ಅಪ್ಪಳಿಸಲು ಚುನಾವಣೆಗಳೇ ಕಾರಣ ಎಂದಿದ್ದ ಕೋರ್ಟ್‌ ಆಯೋಗದ ಮೇಲೆ ಕೊಲೆ ಕೇಸ್‌ ಹಾಕಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಆಯೋಗವು ಉಪ ಚುನಾವಣೆ ಫಲಿತಾಂಶ ಅಥವಾ ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ವಿಜಯೋತ್ಸವ ರದ್ದುಗೊಳಿಸಿದೆ.

ಏನಿದು ಪ್ರಕರಣ?:

ತಮಿಳುನಾಡಿನ ಕರೂರು ವಿಧಾನಸಭಾ ಕ್ಷೇತ್ರದಲ್ಲಿ 77 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮತ ಎಣಿಕೆ ದಿನ ಅಭ್ಯರ್ಥಿಗಳ ಪರ ಏಜೆಂಟ್‌ಗಳಿಗೆ ಎಣಿಕೆ ಕೇಂದ್ರದಲ್ಲಿ ಸ್ಥಳಾವಕಾಶ ಕಲ್ಪಿಸುವುದು ಕಷ್ಟ. ಇದರಿಂದ ಕೋವಿಡ್‌ ನಿಯಮಗಳು ಉಲ್ಲಂಘನೆಯಾಗಬಹುದು. ಆದ ಕಾರಣ ಮೇ 2ರಂದು ನಡೆಯಲಿರುವ ಮತ ಎಣಿಕೆಯ ದಿನ ಸೂಕ್ತ ಕೋವಿಡ್‌ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಣ್ಣಾಡಿಎಂಕೆ ಅಭ್ಯರ್ಥಿ ಹಾಗೂ ಸಾರಿಗೆ ಸಚಿವ ಎಂ.ಆರ್‌. ವಿಜಯ ಭಾಸ್ಕರ್‌ ಅವರು ರಿಟ್‌ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ವೇಳೆ ಆಯೋಗದ ಮೇಲೆ ಹೈಕೋರ್ಟ್‌ ಮುಗಿಬಿದ್ದಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
ಸಿಎಂ ಕುರ್ಚಿಗೆ 500 ಕೋಟಿ, ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು