ರಾಜ್ಯಸಭಾ ಚುನಾವಣಾ ದಿನಾಂಕ ಪ್ರಕಟಿಸಿದ ಆಯೋಗ, ಫೆ.27 ಮತದಾನ, ಅಂದೆ ಫಲಿತಾಂಶ!

Published : Jan 29, 2024, 03:14 PM IST
ರಾಜ್ಯಸಭಾ ಚುನಾವಣಾ ದಿನಾಂಕ ಪ್ರಕಟಿಸಿದ ಆಯೋಗ, ಫೆ.27 ಮತದಾನ, ಅಂದೆ ಫಲಿತಾಂಶ!

ಸಾರಾಂಶ

ಕೇಂದ್ರ ಚುನಾವಣಾ ಆಯೋಗ ಇಂದು ರಾಜ್ಯಸಭಾ ಚುನಾವಣಾ ದಿನಾಂಕ ಪ್ರಕಟಿಸಿದೆ. ಫೆಬ್ರವರಿ 27 ರಂದು ಮತದಾನ ನಡೆಯಲಿದ್ದು, ಅದೇ ದಿನ ಫಲಿತಾಂಶ ಘೋಷಣೆಯಾಗಲಿದೆ.  

ನವದೆಹಲಿ(ಜ.29) ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಎಲ್ಲಾ ಪಕ್ಷಗಳು ಬಿರುಸಿನ ಚರ್ಚೆ, ಸೀಟು ಹಂಚಿಕೆ, ಅಭ್ಯರ್ಥಿಗಳ ಆಯ್ಕೆಯಲ್ಲಿ ತೊಡಗಿಕೊಂಡಿದೆ. ಇದರ ನಡುವೆ ಕೇಂದ್ರ ಚುನಾವಣಾ ಆಯೋಗ ಇದೀಗ ರಾಜ್ಯಸಭಾ ಚುನಾವಣಾ ದಿನಾಂಕ ಪ್ರಕಟಿಸಿದೆ. 56 ರಾಜ್ಯಸಭಾ  ಸ್ಥಾನಗಳಿಗೆ ಫೆಬ್ರವರಿ 27ರಂದು ಮತದಾನ ನಡೆಯಲಿದೆ. ಇದೇ ದಿನ ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.

ಫೆಬ್ರವರಿ 27 ರಂದು 15 ರಾಜ್ಯಗಳ ಒಟ್ಟು 56 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ವರಗೆ ಮತದಾನ ನಡೆಯಲಿದೆ. 4 ಗಂಟೆ ಬಳಿಕ ಮತ ಏಣಿಕೆ ಪ್ರಕ್ರಿಯೆಗಳು ಆರಂಭಗೊಳ್ಳಲಿದೆ. ರಾತ್ರಿ ವೇಳೆಗೆ ಫಲಿತಾಂಶ ಘೋಷಣೆಯಾಗಲಿದೆ. ಇನ್ನು ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿದೆ. 

ಅಮಿತ್‌ ಶಾ ಬಳಿ ರಾಜ್ಯಸಭೆ ಸ್ಥಾನ, 3 ಕಷ್ಟದ ಕ್ಷೇತ್ರ ಕೇಳಿದ ಸೋಮಣ್ಣ..!

56 ಸ್ಥಾನಗಳ ಪೈಕಿ ಕರ್ನಾಟಕದಲ್ಲಿ 4 ಸ್ಥಾನಗಳಿಗೆ ಚುನಾಣೆ ನಡೆಯಲಿದೆ. 50 ರಾಜ್ಯಸಭಾ ನಾಯಕರ ಅವಧಿ ಎಪ್ರಿಲ್ 2, 2024ಕ್ಕೆ ಅಂತ್ಯಗೊಳ್ಳುತ್ತಿದೆ. ಇನ್ನುಳಿದ 6 ನಾಯಕರು ಎಪ್ರಿಲ್ 3 ರಂದು ನಿವೃತ್ತಿ ಹೇಳುತ್ತಿದ್ದಾರೆ. ಹೀಗಾಗಿ ಒಟ್ಟು 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ.

ರಾಜ್ಯವಾರು ರಾಜ್ಯಸಭಾ ಸ್ಥಾನ(ಚುನಾವಣೆ)
ಉತ್ತರ ಪ್ರದೇಶ:10 ಸ್ಥಾನ
ಮಹಾರಾಷ್ಟ್ರ:6 ಸ್ಥಾನ
ಬಿಹಾರ : 6 ಸ್ಥಾನ
ಪಶ್ಚಿಮ ಬಂಗಾಳ : 5 ಸ್ಥಾನ
ಮಧ್ಯಪ್ರದೇಶ: 6 ಸ್ಥಾನ
ಕರ್ನಾಟಕ: 4 ಸ್ಥಾನ
ಗುಜರಾತ್ : 4 ಸ್ಥಾನ
ಆಂಧ್ರಪ್ರದೇಶ:3 ಸ್ಥಾನ
ತೆಲಂಗಾಣ:3 ಸ್ಥಾನ
ರಾಜಸ್ಥಾನ : 3 ಸ್ಥಾನ
ಒಡಿಶಾ : 3 ಸ್ಥಾನ
ಉತ್ತರಖಂಡ:1 ಸ್ಥಾನ
ಚತ್ತೀಸಘಡ:1 ಸ್ಥಾನ
ಹರ್ಯಾಣ: 1 ಸ್ಥಾನ
ಹಿಮಾಚಲ ಪ್ರದೇಶ: 1 ಸ್ಥಾನ

ಕಾಂಗ್ರೆಸ್‌ ಸೇರಿದ ಜಗನ್‌ ಸೋದರಿ ಶರ್ಮಿಳಾ ಕರ್ನಾಟಕದಿಂದ ರಾಜ್ಯಸಭೆಗೆ?

ಇತ್ತ ಲೋಕಸಭಾ ಚುನಾವಣೆ ತಯಾರಿ ನಡೆಯುತ್ತಿದೆ. ಶೀಘ್ರದಲ್ಲೇ ಕೇಂದ್ರ ಚುನಾವಣಾ ಆಯೋಗ ಲೋಕಸಭಾ ಚುನಾವಣಾ ದಿನಾಂಕ ಘೋಷಿಸಲಿದೆ. ಆದರೆ ಚುನಾವಣೆ ಸಮೀಪಿಸುತ್ತಿದ್ದಂತೆ ಇಂಡಿಯಾ ಮೈತ್ರಿ ಒಕ್ಕೂಟ ಒಡೆದು ಹೋಳಾಗಿದೆ. ಬಿಜೆಪಿ ಹಾಗೂ ಪ್ರಧಾನಿ ಮೋದಿ ಸೋಲಿಸಲು ಒಗ್ಗಟ್ಟಾಗಿದ್ದ ವಿಪಕ್ಷಗಳು ಇದೀಗ ಒಂದೊಂದಾಗಿ ಮೈತ್ರಿಯಿಂದ ಹೊರಗೆ ಕಾಲಿಡುತ್ತಿದೆ. ತೃಣಮೂಲ ಕಾಂಗ್ರೆಸ್, ಆಮ್ ಆದ್ಮಿ ಬಳಿಕ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಕೂಡ ಮೈತ್ರಿಯಿಂದ ಹೊರಬಂದಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್
India Latest News Live: ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್