7 ರಾಜ್ಯದ ವಿಧಾನಸಭಾ ಉಪ ಚುನಾವಣೆಗೆ ದಿನಾಂಕ ಘೋಷಣೆ, ಜು.10ಕ್ಕೆ ಮತದಾನ!

Published : Jun 10, 2024, 01:53 PM IST
7 ರಾಜ್ಯದ ವಿಧಾನಸಭಾ ಉಪ ಚುನಾವಣೆಗೆ ದಿನಾಂಕ ಘೋಷಣೆ, ಜು.10ಕ್ಕೆ ಮತದಾನ!

ಸಾರಾಂಶ

ಲೋಕಸಭಾ ಚುನಾವಣೆ ಮುಗಿದು ಇದೀಗ ಎನ್‌ಡಿಎ ಸರ್ಕಾರ ರಚನೆಯಾಗಿದೆ. ಇದರ ಬೆನ್ನಲ್ಲೇ 7 ರಾಜ್ಯದ ವಿಧಾನಸಭಾ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಚನಾವಣಾ ಆಯೋಗ ಇಂದು ಸುದ್ದಿಗೋಷ್ಠಿ ನಡೆಸಿದೆ. ಜುಲೈ 10ಕ್ಕೆ ಮತದಾನ ನಡೆದರೆ, ಜುಲೈ 13ಕ್ಕೆ ಮತ ಎಣಿಕೆ ನಡೆಯಲಿದೆ.  

ನವದೆಹಲಿ(ಜೂ.10) ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದ ಒಂದೇ ವಾರದಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗಿದೆ. ಪ್ರಧಾನಿ ಮೋದಿ ಹಾಗೂ 72 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಲೋಕಸಮರದ ಬೆನ್ನಲ್ಲೇ ಇದೀಗ 7 ರಾಜ್ಯದ ವಿಧಾನಸಭಾ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ತೆರವಾಗಿರುವ  13 ವಿಧಾನಸಭಾ ಸ್ಥಾನಗಳ ಭರ್ತಿಗಾಗಿ ಇದೀಗ ಚುನಾವಣೆ ನಡೆಯಲಿದೆ. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯಪ್ರದೇಶ, ಉತ್ತರಖಂಡ, ಪಂಜಾಬ್ ಹಾಗೂ ಹಿಮಾಚಲ ಪ್ರದೇಶದ ವಿಧಾಸಭಾ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ.

ಜುಲೈ 10ಕ್ಕೆ ಮತದಾನ ನಡೆಯಲಿದೆ. ಜುಲೈ 13ಕ್ಕೆ ಮತ ಏಣಿಕೆ ನಡೆಯಲಿದೆ. ಇದಕ್ಕಾಗಿ ನಾಮಪತ್ರ ಸಲ್ಲಿಸಲು ಜೂನ್ 21 ಕೊನೆಯ ದಿನವಾಗಿದೆ. ಜೂನ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂನ್ 26 ನಾಮತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಒಟ್ಟು 13 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 

ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷ ಎಷ್ಟು ಸೀಟ್ ಗೆದ್ದಿದೆ ಗೊತ್ತಾ?

ಬಿಹಾರದ ರುಪಾಲಿ ವಿಧಾನಸಭಾ ಕ್ಷೇತ್ರದ ಶಾಸಕಿ ಭಿಮಾ ಬಾರ್ತಿ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ರುಪಾಲಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಇನ್ನು ಪಶ್ಚಿಮ ಬಂಗಾಳದ ರಾಯಿಗಂಜ್ ಕ್ಷೇತ್ರದ ಶಾಸಕ ಕೃಷ್ಣ ಕಲ್ಯಾಣ್, ರಾನಾಘಾಟ್ ದಕ್ಷಿಣ ಕ್ಷೇತ್ರದ ಶಾಸಕ ಮುಕುಟ ಮಣಿ ಅಧಿಕಾರಿ, ಬಾಗ್ದಾ ಎಸ್‌ಸಿ ಮೀಸಲು ಕ್ಷೇತ್ರದ ಶಾಸಕ ಬಿಸ್ವವಿಜ್ ದಾಸ್, ಮಣಿಕ್ಟಲಾ ಕ್ಷೇತ್ರದ ಶಾಸಕ ಸಾಧನ್ ಪಾಂಡೆ ರಾಜೀನಾಮೆ ನೀಡಿದ್ದಾರೆ. ಬಂಗಾಳ ಈ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. 

ತಮಿಳುನಾಡಿನ ವಿಕ್ರವಂಡಿ ಕ್ಷೇತ್ರ, ಮಧ್ಯಪ್ರದೇಶದ ಅಮವಾರವರ, ಉತ್ತರಖಂಡದ ಮಂಗಲೌರ್, ಪಂಜಾಬ್‌ನ ಪೂರ್ವ ಜಲಂಧರ್, ಹಿಮಾಚಲ ಪ್ರದೇಶದ ದೆಹ್ರಾ, ಹಮ್ರಿಪುರ್ ಹಾಗೂ ನಾಲಾಗ್ರಹ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯಲಿದೆ.ತೆರವಾಗಿರುವ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಜುಲೈ 15ರೊಳಗೆ ಅಂತ್ಯವಾಗಬೇಕು. ಇದಕ್ಕೆ ಪೂರಕವಾಗಿ ಚುನಾವಣಾ ಆಯೋಗ ಉಪಚುನಾವಣೆ ದಿನಾಂಕ ಘೋಷಣೆ ಮಾಡಿದೆ. 

1996ರ ಬಳಿಕ ಮೊದಲ ಬಾರಿಗೆ ಒಂದೇ ಕೂಟಕ್ಕೆ 3ನೇ ಬಾರಿಗೆ ಅಧಿಕಾರ, ಜನತೆಗೆ ಮೋದಿ ಧನ್ಯವಾದ!

ಲೋಕಸಭಾ ಚುನಾವಣೆ 7 ಹಂತದಲ್ಲಿ ನಡೆದಿತ್ತು. ಜೂನ್ 1ಕ್ಕೆ ಅಂತಿಮ ಹಂತದ ಮತದಾನ ನಡೆದಿತ್ತು. ಜೂನ್ 4 ರಂದು ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಿತ್ತು. ಬಿಜೆಪಿ ಏಕಾಂಗಿಯಾಗಿ 240 ಸ್ಥಾನ ಗೆದ್ದುಕೊಂಡಿತ್ತು. ಕಾಂಗ್ರೆಸ್ 99 ಸ್ಥಾನಕ್ಕೆ ಜಿಗಿತ ಕಂಡಿತ್ತು. ಎನ್‌ಡಿಎ ಮೈತ್ರಿ ಕೂಟ ಬಹುಮತ ಪಡೆದು ಸರ್ಕಾರ ರಚನೆ ಮಾಡಿತ್ತು. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್