
ನವದೆಹಲಿ(ಮೇ.01); ಪಂಚಾ ರಾಜ್ಯಗಳ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಸಂಪೂರ್ಣ ಫಲಿತಾಂಶ ಹೊರಬೀಳುವ ಮೊದಲೇ ಗೆಲುವಿನ ಆಚರಣೆಗಳು ಕಂಡು ಬರುತ್ತಿದೆ. ಕೊರೋನಾ ಕಾರಣ ಎಲ್ಲಾ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ. ಆದರೆ ಕೊರೋನಾ ನಿಯಮ ಗಾಳಿಗೆ ತೂರಿರುವ ವಿರುದ್ಧ ಚುನಾವಣಾ ಆಯೋಗ ಗರಂ ಆಗಿದೆ.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ವಿನ್: ಮತ ಗಳಿಕೆಯಲ್ಲಿ ಬಿಜೆಪಿ ನಂಬರ್ ಒನ್
ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದ ಕಾರ್ಯದರ್ಶಿಗೆ ಖಡಕ್ ವಾರ್ನಿಂಗ್ ನೀಡಲಾಗಿದೆ. ಯಾವುದೇ ಪಕ್ಷ, ಕಾರ್ಯಕರ್ತರು ಗೆಲುವಿನ ಸಂಭ್ರಮಾಚರಣೆ ಮಾಡಬಾರದು. ಕೊರೋನಾ ಕಾರಣ ಈಗಾಗಲೇ ಮಾರ್ಗಸೂಚಿ ಪ್ರಕಟಿಸಲಾದಿದೆ. ಇದನ್ನು ಹೊರತು ಪಡಿಸಿ ಸಂಭ್ರಮಾಚರಣೆ ಮಾಡಿದರೆ, ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಸೂಚಿಸಿದೆ.
ಚುನವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಕೆಲ ರಾಜ್ಯಗಳಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ಬೀದಿಗಿಳಿದು ಸಂಭ್ರಮಿಸಿದ್ದಾರೆ. ಈ ಕುರಿತು ಸುದ್ದಿ ಮಾಧ್ಯಮಗಳು ವರದಿ ಮಾಡಿದೆ. ಈ ವರದಿ ಆಧರಿಸಿ ಚುನಾವಣಾ ಆಯೋಗ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಕ್ಕೆ ವಾರ್ನಿಂಗ್ ನೀಡಿದೆ.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರು, ತಮಿಳುನಾಡಿನಲ್ಲಿ ಡಿಎಂಕೆ ಕಾರ್ಯಕರ್ತರ ಸಂಭ್ರಮಾಚರಣೆ ವಿಡಿಯೋ ವೈರಲ್ ಆಗಿದೆ. ದೇಶವನ್ನು ಕೊರೋನಾ ಮಹಾಮಾರಿಗೆ ತಳ್ಳಿದ ಈ ರೀತಿಯ ವರ್ತನೆಗಳಿಗೆ ಜನ ಹಿಡಿ ಶಾಪ ಹಾಕುತ್ತಿದ್ದಾರೆ. ಆಯಾ ರಾಜ್ಯಗಳೇ ಇದಕ್ಕೆ ಪೋಷಣೆ ನೀಡುತ್ತಿದೆ ಅನ್ನೋದು ವಿಪರ್ಯಾಸ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ